Kukke Subrahmanya : ಹೃದಯಾಘಾತದಿಂದ ವ್ಯಕ್ತಿ ಸಾವು
Team Udayavani, Nov 9, 2023, 12:33 AM IST
ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಬಂದಿದ್ದ ವ್ಯಕ್ತಿಯೋರ್ವರು ಹೃದಯಾಘಾತದಿಂದ ಮೃತಪಟ್ಟ ಘಟನೆ ಬುಧವಾರ ಸುಬ್ರಹ್ಮಣ್ಯದಲ್ಲಿ ಸಂಭವಿಸಿದೆ.
ಬೆಂಗಳೂರಿನ ಕೆಂಗೇರಿಯ 55 ವರ್ಷದ ವ್ಯಕ್ತಿ ಮೃತಪಟ್ಟವರು. ಬೆಂಗಳೂರಿನಿಂದ ಬಂದಿದ್ದ ಕುಟುಂಬ ಸದಸ್ಯರು ಬುಧವಾರ ಕೊನೆಯ ದಿನದ ಸರ್ಪ ಸಂಸ್ಕಾರ ಪೂಜೆಯಾಗಿ ವಸತಿ ಗೃಹದಲ್ಲಿದ್ದ ಸಂದರ್ಭ ಅವರಿಗೆ ಹೃದಯಾಘಾತವಾಗಿತ್ತು.
ತತ್ಕ್ಷಣ ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆತರಲಾಯಿತು. ಅಲ್ಲಿ ಪರೀಕ್ಷಿಸಿದ ವೈದ್ಯರು ಅದಾಗಲೇ ಮೃತಪಟ್ಟಿದ್ದಾರೆಂದು ತಿಳಿಸಿದರು.