ಯಶಸ್ಸಿನ ಹಿಂದೆ ಶ್ರಮವಿದೆ: ಶಿವಧ್ವಜ್‌


Team Udayavani, Mar 24, 2018, 4:59 PM IST

24-March-13.jpg

ಸುಳ್ಯ : ಜೀವನದಲ್ಲಿ ಕಷ್ಟಪಟ್ಟು ಮುನ್ನಡೆಯುವ ಹೊತ್ತಿನಲ್ಲಿ ಚಪ್ಪಾಳೆ ತಟ್ಟುವವರು ಇರಲಾರರು. ಆದರೆ ಯಶಸ್ಸು ಸಿಕ್ಕ ಅನಂತರ ಚಪ್ಪಾಳೆ ತಟ್ಟಿಯೇ ತಟ್ಟುತ್ತಾರೆ ಎಂದು ರಾಷ್ಟ್ರಪ್ರಶಸ್ತಿ ಪುರಸ್ಕೃತ ಚಿತ್ರನಟ ಶಿವಧ್ವಜ್‌ ಹೇಳಿದರು. ಕೆವಿಜಿ ಡೆಂಟಲ್‌ ಕಾಲೇಜು ಮತ್ತು ಆಸ್ಪತ್ರೆಯ ಸಹಯೋಗದಲ್ಲಿ ಡೆಂಟಲ್‌ ಪ್ರೀಮಿಯರ್‌ ಲೀಗ್‌-2018 ಆವೃತ್ತಿ-8 ಕ್ರಿಕೆಟ್‌ ಪಂದ್ಯಾವಳಿಯನ್ನು ಶುಕ್ರವಾರ ಕೆವಿಜಿ ಪ್ಲೇ ಮೈದಾನದಲ್ಲಿ ಉದ್ಘಾಟಿಸಿ ಅವರು ಮಾತನಾಡಿದರು.

ಪ್ರತಿ ವ್ಯಕ್ತಿಯ ಯಶಸ್ಸಿನ ಹಿಂದೆ ಶ್ರಮ ಇರುತ್ತದೆ. ಶ್ರಮ ಕಠಿನವೆನಿಸಿದರೂ ಅನಂತರ ಅದರಿಂದ ಸುಖ ಇದೆ. ಕ್ರೀಡಾ
ಕೂಟವು ನಮ್ಮ ಬದುಕಿಗೆ ಇನ್ನಷ್ಟು ಹುರುಪು ತುಂಬಲಿ ಎಂದರು.

ಕುರುಂಜಿ ಅವರಿಂದ ಪ್ರೇರಣೆ
ನಾನು ಕೆವಿಜಿ ಸಂಸ್ಥೆಯಲ್ಲೇ ವಿದ್ಯಾರ್ಥಿ ಜೀವನ ಪೂರ್ಣಗೊಳಿಸಿದ್ದೆ. ಸಂಸ್ಥೆಯ ಸಂಸ್ಥಾಪಕ ಡಾ| ಕುರುಂಜಿ ವೆಂಕಟರಮಣ ಗೌಡ ಅವರ ಬದುಕಿನ ಗುಣಗಳು, ಸಾಧನೆ ನನ್ನ ಬದುಕಿಗೆ ಪ್ರೇರಣೆ ನೀಡಿತ್ತು. 23 ವರ್ಷದ ಅನಂತರ ವಿದ್ಯಾರ್ಥಿ ಜೀವನವನ್ನು ಮೆಲುಕು ಹಾಕುವ ಅವಕಾಶ ನೀಡಿದ ದಂತ ಮಹಾವಿದ್ಯಾಲಯಕ್ಕೆ ಕೃತಜ್ಞತೆ ಅರ್ಪಿಸುವುದಾಗಿ ಶಿವಧ್ವಜ್‌ ನುಡಿದರು.

ಹಿರಿಯ ಸಾಮಾಜಿಕ ಧುರೀಣ ಪಡ್ಡಂಬೈಲು ವೆಂಕಟರಮಣ ಗೌಡ ಮಾತನಾಡಿ, ಕೆವಿಜಿ ದಂತ ಮಹಾ ವಿದ್ಯಾಲಯಕ್ಕೆ
ಕರ್ನಾಟಕ ರಾಜ್ಯದಲ್ಲಿಯೇ ವಿಶೇಷ ಸ್ಥಾನವಿದೆ. ಅಂತಹ ವಿದ್ಯಾಸಂಸ್ಥೆಯಲ್ಲಿ ಕಲಿಕೆಗೆ ಅವಕಾಶ ಸಿಕ್ಕ ವಿದ್ಯಾರ್ಥಿಗಳು
ತಮ್ಮ ಭವಿಷ್ಯವನ್ನು ಉತ್ತಮವಾಗಿ ರೂಪಿಸಿ ಜೀವನದಲ್ಲಿ ಸಾಧನೆ ತೋರಬೇಕು ಎಂದು ಆಶಿಸಿದರು.

ಸಭಾಧ್ಯಕ್ಷತೆ ವಹಿಸಿದ ಎಎಲ್‌ ಒಇ ಪ್ರಧಾನ ಕಾರ್ಯದರ್ಶಿ ಡಾ| ರೇಣುಕಾ ಪ್ರಸಾದ್‌ ಕೆ.ವಿ. ಕ್ರಿಕೆಟ್‌ ಅಂಕಣ ಉದ್ಘಾಟಿಸಿದರು. ಕೆವಿಜಿ ದಂತ ಮಹಾವಿದ್ಯಾಲಯದ ಪ್ರಾಂಶುಪಾಲೆ ಡಾ| ಮೋಕ್ಷಾ ನಾಯಕ್‌, ಎಂಜಿನಿಯರಿಂಗ್‌ ಕಾಲೇಜಿನ ಪ್ರಾಂಶುಪಾಲ ಜ್ಞಾನೇಶ್‌, ಹೇಮನಾಥ ಕೆ.ವಿ. ಉಪಸ್ಥಿತರಿದ್ದರು. ಶಿವಧ್ವಜ್‌ ಅವರನ್ನು ಗೌರವಿಸಲಾಯಿತು.

ಕ್ರೀಡಾ ಸಲಹೆಗಾರರಾದ ಡಾ| ರೇವತಿ ಸೂಂತೋಡು ಸ್ವಾಗತಿಸಿ, ಡಾ| ನವೀನ್‌ ವಂದಿಸಿದರು. ಕೆವಿಜಿ ದಂತ ಮಹಾ
ವಿದ್ಯಾಲಯದ ಹ್ಯಾನೀಟ್‌ ಮತ್ತು ಮರಿಯಾ ಕಾರ್ಯಕ್ರಮ ನಿರೂಪಿಸಿದರು. 

ಗಮನ ಸೆಳೆದ ಮೈದಾನ
ಕ್ರಿಕೆಟ್‌ ಅಂಕಣವನ್ನು ವ್ಯವಸ್ಥಿತವಾಗಿ ಸಿದ್ಧಪಡಿಸಲಾಗಿತ್ತು. ಬಣ್ಣದ ಬಲೂನ್‌ ಗಳನ್ನು ಹಾರಿಬಿಡುವ ಮೂಲಕ ಕೂಟಕ್ಕೆ ಮೆರುಗು ನೀಡಲಾಯಿತು. ಚಿತ್ರನಟ ಶಿವಧ್ವಜ್‌ ಮತ್ತು ಎಎಲ್‌ ಒಇ ಪ್ರಧಾನ ಕಾರ್ಯದರ್ಶಿ ಡಾ| ರೇಣುಕಾ ಪ್ರಸಾದ್‌ ಕೆ.ವಿ. ಬ್ಯಾಟ್‌ ಮತ್ತು ಬಾಲ್‌ ಮುಖಾಂತರ ಕ್ರಿಕೆಟ್‌ ಪಂದ್ಯಾಟಕ್ಕೆ ಚಾಲನೆ ನೀಡಿದರು. ಅತಿಥಿಗಳು ಮತ್ತು ಸಂಸ್ಥೆಯ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

20-shirva-1

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

19-sagara

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.