ಬೆಳ್ತಂಗಡಿ: ಬಡವಾದ ಅಂಬೇಡ್ಕರ್‌ ಭವನ


Team Udayavani, Apr 6, 2022, 9:44 AM IST

belthangady

ಬೆಳ್ತಂಗಡಿ: ಸಮ ಸಮಾಜ ನಿರ್ಮಾಣಕ್ಕೆ ಸಂವಿಧಾನ ಶಿಲ್ಪಿ ಡಾ| ಬಿ.ಆರ್‌.ಅಂಬೇಡ್ಕರ್‌ ನೀಡಿರುವ ಸಂದೇಶ ರಾಜಕೀಯ ಲಾಭಕ್ಕೋಸ್ಕರವಷ್ಟೆ ಬಳಕೆಯಾಗುತ್ತಿದೆ ವಿನಾಃ ಸಮುದಾಯದ ಏಳಿಗೆಗೆಲ್ಲ. ಬಡವರ್ಗದ ಮಂದಿಯ ಕಲ್ಯಾಣ ಕ್ಕಾಗಿ ಪ್ರತೀ ತಾಲೂಕಿ ಗೊಂದ ರಂತೆ ನಿರ್ಮಿಸಿರುವ ಡಾ| ಬಿ.ಆರ್‌. ಅಂಬೇಡ್ಕರ್‌ ಭವನ ಇಲ್ಲಿ ಸೂಕ್ತ ನಿರ್ವಹಣೆಯಿಲ್ಲದೆ ನಿರ್ಗತಿಕರು ಆಶ್ರಯಿಸುವಂತಾಗಿದೆ.

1991-92ರಲ್ಲಿ ಗಂಗಾಧರ ಗೌಡರು ಶಾಸಕರಾಗಿದ್ದ ಅವಧಿಯಲ್ಲಿ ಬಸ್‌ ನಿಲ್ದಾಣ ಸಮೀಪ ಕೃಷಿ ಇಲಾಖೆಗೆ ಸಾಗುವ ರಸ್ತೆಯಲ್ಲಿ ಸರ್ವೇ ನಂ. 90/1ಎ 1ಬಿ.ಯಲ್ಲಿ 7.5 ಸೆಂಟ್ಸ್‌ ನಲ್ಲಿ ಅಂಬೇಡ್ಕರ್‌ ಭವನ ನಿರ್ಮಿಸಲಾಗಿತ್ತು. ಇದರ ನಿರ್ವಹಣೆ ಜವಾಬ್ದಾರಿ ನಗರ ಪಂಚಾಯತ್‌ನದ್ದಾಗಿದೆ. ಪ್ರಸಕ್ತ ಸಾಮಾನ್ಯ ವರ್ಗಕ್ಕೆ 500, ಎಸ್‌.ಸಿ., ಎಸ್‌.ಟಿ.ಗೆ 250 ರೂ.ನಲ್ಲಿ ಸಭಾ ಕಾರ್ಯಕಮ ನಡೆಸಲು ಅವಕಾಶ ಕಲ್ಪಿಸಲಾಗುತ್ತದೆ. ಶೌಚಾಲಯ, ಕುಡಿಯುವ ನೀರಿನ ಸಮರ್ಪಕ ವ್ಯವಸ್ಥೆ ಇಲ್ಲದೆ ಇಲಾಖೆಗಳ ಸಣ್ಣಪುಟ್ಟ ಕಾರ್ಯಕ್ರಮಗಳಿಗಷ್ಟೆ ಇದು ಬಳಕೆಯಾಗುತ್ತಿದೆ.

ನಿರ್ಗತಿಕರ ವಾಸಸ್ಥಾನ

ಕಾರ್ಯಕ್ರಮ ಇಲ್ಲದ ದಿನಗಳಲ್ಲಿ ನಿರ್ಗತಿಕರು, ಮದ್ಯಪಾನಿಗಳು ಭವನದ ಜಗಲಿಯನ್ನೇ ಆಶ್ರಯಿಸುತ್ತಿದ್ದಾರೆ. ಈ ಹಿಂದೆ ರಮ್ಮಿ, ಲೂಡೋ ಸಹಿತ ವಿವಿಧ ಆಟ ಆಡಲು ಪಡ್ಡೆಗಳ ಆಶ್ರಯ ಸ್ಥಾನದಂತಾಗಿತ್ತು. ಈ ಕುರಿತು ದಲಿತ ಸಂಘಟನೆಗಳು ಪ.ಪಂ.ಗೆ ಹಲವು ಬಾರಿ ದೂರು ಸಲ್ಲಿಸಿದರೂ ಮತ್ತದೇ ಖಯಾಲಿ ಎಂಬಂತಾಗಿದೆ. ರಾತ್ರಿ ಅಂಬೇಡ್ಕರ್‌ ಭವನವೇ ಪಡ್ಡೆಗಳ ಅಡ್ಡೆಯಾಗುತ್ತಿದೆ. ಈ ಮಾರ್ಗವಾಗಿ ಸಾಗಲು ಸಾರ್ವಜನಿಕರು ಮುಜುಗರ ಪಡುವಂತಾಗಿದೆ.

ಈಡೇರದ ಬೇಡಿಕೆ

ಮಾಜಿ ಶಾಸಕ ಕೆ.ವಸಂತ ಬಂಗೇರ ಅವಧಿಯಲ್ಲಿ ಬೆಳ್ತಂಗಡಿಯ ಮಿನಿವಿಧಾನ ಸೌಧ ಉದ್ಘಾಟನೆಗೆ 2017ರಲ್ಲಿ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಆಗಮಿಸಿದ್ದರು. ಅನೇಕ ಶಿಲಾನ್ಯಾಸ, ಉದ್ಘಾಟನೆ ನಡೆದಿದ್ದವು. ಆದರೆ ಅಂಬೇಡ್ಕರ್‌ ಭವನಕ್ಕೆ ನೆರವೇರಿಸಿರಲಿಲ್ಲ. ಮಾಜಿ ಶಾಸಕರಿಂದಲೂ ನಡೆದಿಲ್ಲ ಎಂಬ ಬೇಸರ ಸಮುದಾಯದ ಮುಖಂಡ ರಲ್ಲಿದೆ. ಖಾಸಗಿ ಸಭಾಭವನಗಳ ಬಾಡಿಗೆ ಮಿತಿಮೀರಿರುವ ನಡುವೆ ಬಡವರ್ಗದವರಿಗೆ ಅನುಕೂಲವಾಗುವಲ್ಲಿ ನಗರಕ್ಕೆ ಹೊಂದಿಕೊಂಡು ಸುಸಜ್ಜಿತ ಅಂಬೇಡ್ಕರ್‌ ಭವನ ನಿರ್ಮಾಣ ವಾಗಬೇಕು. ಅಲ್ಲಿ ಡಾ| ಬಿ.ಆರ್‌. ಅಂಬೇಡ್ಕರ್‌ ಹಾಗೂ ಬುದ್ಧನ ಪ್ರತಿಮೆ ಅನಾವರಣಗೊಳಿಸಬೇಕು. ಕಡೆ ಪಕ್ಷ ಮುಂದಿನ ಎ. 14ರ ಅಂಬೇಡ್ಕರ್‌ ಜಯಂತಿಯಂದಾದರು ಶಿಲಾನ್ಯಾಸ ನೆರವೇರಿಸಲಿ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಸಮಿತಿ ಸಂಘಟನ ಸಂಚಾಲಕ ಚಂದು ಎಲ್‌., ಮೈಸೂರು ವಿಭಾಗೀಯ ಸಂಘಟನ ಸಂಚಾಲಕ ಬಿ.ಕೆ.ವಸಂತ್‌ ಆಗ್ರಹಿಸಿದ್ದಾರೆ.

ಸಮುದಾಯದ ಕನಸು

ಬೆಳ್ತಂಗಡಿ ಹೃದಯ ಭಾಗದಲ್ಲಿ ವಿಸ್ತಾರವಾದ ಸುಸಜ್ಜಿತ ಅಂಬೇಡ್ಕರ್‌ ಭವನ ನಿರ್ಮಿಸಬೇಕೆಂಬುದೇ ಸಮುದಾಯ ಹಾಗೂ ಸಂಘಟನೆಯ ಕನಸು. ಈ ಬಗ್ಗೆ ಶಾಸಕ ಹರೀಶ್‌ ಪೂಂಜ ಭರವಸೆ ನೀಡಿದ್ದಾರೆ. ಅವರು ಕಾರ್ಯಪ್ರವೃತ್ತರಾಗಬೇಕು. -ನೇಮಿರಾಜ್‌ ಕೆ., ಪ್ರಧಾನ ಸಂಚಾಲಕ, ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ ವಾದ) ಬೆಳ್ತಂಗಡಿ ತಾಲೂಕು

-ಚೈತ್ರೇಶ್‌ ಇಳಂತಿಲ

ಟಾಪ್ ನ್ಯೂಸ್

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.