ಬರನಾಡಿನಲ್ಲೂ ನೀರು ಹರಿಸಿದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ


Team Udayavani, Jun 22, 2018, 3:19 PM IST

22-june-14.jpg

ಬೆಳ್ತಂಗಡಿ : ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನಮ್ಮೂರು ನಮ್ಮ ಕೆರೆ ಯೋಜನೆಯಡಿ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಬಂಗಾರಹಳ್ಳಿ ಕೆರೆ ಪುನಶ್ಚೇತನ ಕಾರ್ಯ ನಡೆಸಿದ್ದು, ಬರ ನಾಡಿನಲ್ಲೂ ಸ್ಥಳೀಯ ಜನತೆಗೆ ಉತ್ತಮ ನೀರು ಲಭಿಸಿದೆ. ಮುಳಬಾಗಿಲು ತಾಲೂಕಿನ ಹನುಮನ ಹಳ್ಳಿ ಗ್ರಾ.ಪಂ. ವ್ಯಾಪ್ತಿಯ ಬಂಗಾರಹಳ್ಳಿ ಗ್ರಾಮದ ಕೆರೆಯನ್ನು ಯೋಜನೆ ಮೂಲಕ ಸ್ಥಳೀಯರ ಸಹಭಾಗಿತ್ವದಲ್ಲಿ ಪುನಶ್ಚೇತನಗೊಳಿಸಲಾಗಿದೆ.

ಸುಮಾರು 18 ಎಕ್ರೆ ವಿಸ್ತೀರ್ಣದ ಕೆರೆಯ ಹೂಳನ್ನು 30 ವರ್ಷಗಳ ಬಳಿಕ ತೆಗೆದಿದ್ದು, ಧರ್ಮಸ್ಥಳ ಗ್ರಾಮಾಭಿವೃದ್ಧಿ
ಯೋಜನೆಯಿಂದ 18.10 ಲಕ್ಷ ರೂ. ಅನುದಾನ ನೀಡಲಾಗಿದೆ.

15,371 ಲೋಡ್‌ ಹೂಳು
4 ಅಡಿ ಹೂಳು ಎತ್ತಲಾಗಿದ್ದು, ಸುಮಾರು 3 ತಿಂಗಳ ಕಾಲ ಕಾಮಗಾರಿ ನಡೆಸಲಾಗಿದೆ. 15,371 ಲೋಡ್‌ ಹೂಳನ್ನು ತೆಗೆಯಲಾಗಿದ್ದು, 377 ಕುಟುಂಬಗಳ 500 ಎಕ್ರೆ ಜಮೀನಿಗೆ ರೈತರು ಫಲವತ್ತಾದ ಹೂಳನ್ನು ಉಪಯೋಗಿಸಿಕೊಂಡಿದ್ದಾರೆ. 2 ಹಿಟಾಚಿ, 1 ಜೆಸಿಬಿ ಸುಮಾರು 1,494 ಗಂಟೆಗಳ ಕಾಲ ಕೆಲಸ ನಿರ್ವಹಿಸಿದೆ. ಮುಳಬಾಗಿಲು ತಾಲೂಕಿನ ಆಗಿನ ಶಾಸಕ ಕೊತ್ತೂರು ಜಿ. ಮಂಜುನಾಥ್‌ ಅವರೂ ಕೆರೆಯ ಕೆಲಸ ಪೂರ್ತಿಯಾಗುವವರೆಗೆ 1 ಜೆ.ಸಿ.ಬಿ. ನೀಡಿದ್ದು, 400 ಗಂಟೆ ಕೆಲಸ ನಿರ್ವಹಿಸಿದೆ.

ಉತ್ತಮ ಮಳೆಯಾದ ಕಾರಣ ಕೆರೆ ತುಂಬಿದೆ. ಕುಡಿಯುವ ನೀರಿಗೂ ಸಮಸ್ಯೆಯಿದ್ದ ಈ ಸುತ್ತಮುತ್ತಲಿನ 7 ಗ್ರಾಮಗಳಲ್ಲಿ ಬೋರ್‌ಗಳಲ್ಲಿ ನೀರು ದೊರೆಯುತ್ತಿದೆ. ಕುಡಿಯಲು, ಕೃಷಿ, ಜಾನುವಾರುಗಳೀಗೆ ನೀರಿನ ಕೊರತೆ ನೀಗಿಸಿದೆ. ಪ್ರಸ್ತುತ 9 ಅಡಿ ನೀರಿದೆ.

12.06 ಕೋ. ರೂ. ಅನುದಾನ 
2016-17 ಮತ್ತು 2017-18, 2018-19 ಸಾಲಿನಲ್ಲಿ 152 ಕೆರೆಗಳಿಗೆ ಶ್ರೀಕ್ಷೇತ್ರ ಧರ್ಮಸ್ಥಳದಿಂದ 12.06 ಕೋಟಿ ರೂ.ಅನುದಾನ ನೀಡಲಾಗಿದೆ. ಊರಿನವರ ಸಹಭಾಗಿತ್ವದ ಮೂಲಕ 17.93 ಕೋಟಿ ರೂ. ಖರ್ಚು ಮಾಡಿ ಕೆರೆ ಕಾಮಗಾರಿ ಮಾಡಲಾಗಿದೆ. ಕೆರೆ ಹೂಳನ್ನು ಸುಮಾರು 20 ಸಾವಿರಕ್ಕೂ ಮಿಕ್ಕಿ ರೈತರು ಪಡೆದುಕೊಂಡು ಕೃಷಿಗೆ ಬಳಕೆ ಮಾಡಿದ್ದಾರೆ.

ಶ್ರೀಕ್ಷೇತ್ರ ಧ.ಗ್ರಾ.ಯೋ. ಕೇಂದ್ರ ಕಚೇರಿ ಧರ್ಮಸ್ಥಳದ ಕೆರೆ ಅಭಿವೃದ್ಧಿ ವಿಭಾಗದ ನಿರ್ದೇಶಕರು, ಯೋಜನಾಧಿಕಾರಿ, 3 ಮಂದಿ ಎಂಜಿನಿಯರು, ಆಡಿಟರ್‌, ಪ್ರಬಂಧಕರು, ಕಚೇರಿ ಸಿಬಂದಿ, ಪ್ರಾದೇಶಿಕ ನಿರ್ದೇಶಕರು, ಜಿಲ್ಲಾ ನಿರ್ದೇಶಕರು, ತಾ| ಯೋಜನಾಧಿಕಾರಿ, ಮೇಲ್ವಿಚಾರಕರು ಪ್ರಯತ್ನದಿಂದ ಯೋಜನೆಗಳು ಫಲಪ್ರದವಾಗುತ್ತಿವೆ.

ಕೆರೆಗಳ ಪುನಶ್ಚೇತನ
28 ಜಿಲ್ಲೆಗಳ 152 ತಾಲೂಕುಗಳಲ್ಲಿ ಕೆರೆ ಪುನಶ್ಚೇತನ ನಡೆದಿದೆ. ಡಾ| ಡಿ. ವೀರೇಂದ್ರ ಹೆಗ್ಗಡೆ ಮತ್ತು ಮಾತೃಶ್ರೀ ಹೇಮಾವತಿ ಹೆಗ್ಗಡೆ ಅವರ ಮಾರ್ಗದರ್ಶನದಲ್ಲಿ ರಾಜ್ಯದ ಬಯಲುಸೀಮೆ ಕೆರೆಗಳನ್ನು ಹೂಳೆತ್ತಿ ಅಭಿವೃದ್ಧಿ ಮಾಡಲು ಮಾರ್ಗದರ್ಶನ ನೀಡಿದ್ದಾರೆ. ಸ್ಥಳೀಯ ಸಮಿತಿ ರಚಿಸಿ ಹೂಳೆತ್ತಲಾಗುತ್ತದೆ. ಮುಂದೆ ಈ ಕೆರೆಯ ನಿರ್ವಹಣೆಯನ್ನು ಸಮಿತಿ ಮಾಡುತ್ತದೆ.
– ಲಕ್ಷ್ಮಣ್‌ ಎಂ. ಎ
ಶುದ್ಧಗಂಗಾ, ಕೆರೆ-ಸ್ವಚ್ಛತಾ ವಿಭಾಗದ ನಿರ್ದೇಶಕರು

ಟಾಪ್ ನ್ಯೂಸ್

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.