ಲಂಬಾಣಿ ಭಾಷೆ 8ನೇ ಪರಿಚ್ಛೇದಕ್ಕೆ ಸೇರಲಿ


Team Udayavani, Nov 26, 2018, 12:25 PM IST

26-november-11.gif

ಪುತ್ತೂರು: ತುಳು ಭಾಷೆಯ ಜತೆಗೆ ಲಂಬಾಣಿ ಭಾಷೆಯನ್ನು ಸಂವಿಧಾನದ 8ನೇ ಪರಿಚ್ಛೇದಕ್ಕೆ ಸೇರಿಸಿಕೊಳ್ಳುವ ಕೆಲಸ ಆಗಬೇಕಿದೆ ಎಂದು ಹೈಕೋರ್ಟ್‌ ವಕೀಲ ಅನಂತ ನಾಯ್ಕ ಹೇಳಿದರು. ನೆಹರೂನಗರದ ಸುದಾನ ವಸತಿಯುತ ಶಾಲಾ ಎಡ್ವರ್ಡ್‌ ಹಾಲ್‌ನಲ್ಲಿ ರವಿವಾರ ನಡೆದ ಬಂಜಾರ (ಲಂಬಾಣಿ) ಸಮುದಾಯದ ಜಿಲ್ಲಾ ಮಟ್ಟದ ಸಾಂಸ್ಕೃತಿಕ ಕಲರವ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದರು.

ಲಂಬಾಣಿ ಸಮುದಾಯ ಸಾಕಷ್ಟು ಸವಾಲುಗಳನ್ನು ಎದುರಿಸುತ್ತಿದೆ. ಸಮಾಜವನ್ನು ಮುಖ್ಯವಾಹಿನಿಗೆ ತರುವ ಕೆಲಸದ ಜತೆಗೇ ಲಂಬಾಣಿ ಸಮುದಾಯವನ್ನು ಮೀಸಲಾತಿಯಿಂದ ಹೊರಗಿಡುವ ಪ್ರಯತ್ನಗಳೂ ನಡೆಯುತ್ತಿವೆ. ಇದನ್ನು ಎದುರಿಸುವ ನಿಟ್ಟಿನಲ್ಲಿ ಪ್ರತಿಯೊಬ್ಬರು ಶಿಕ್ಷಣ ಪಡೆದುಕೊಳ್ಳಬೇಕು. ಅದರಲ್ಲೂ ಸಮುದಾಯದ ಮಹಿಳೆಯರಿಗೆ ಶಿಕ್ಷಣ ಕಡ್ಡಾಯ ಮಾಡಬೇಕು ಎಂದರು.

ಸಾಕಷ್ಟು ಜನಸಂಖ್ಯೆಯನ್ನು ಹೊಂದಿರುವ ಲಂಬಾಣಿ ಸಮುದಾಯದಲ್ಲಿ ಕ್ರಾಂತಿಯನ್ನೇ ಮಾಡಿರುವ ನೇತಾರ ಸೇವಾಲಾಲ್‌. ಸುಮಾರು 280 ವರ್ಷಗಳ ಹಿಂದೆಯೇ ಅವರು ಸಮುದಾಯದ ಉನ್ನತಿಗೆ ಶ್ರಮಿಸಿದರು. ಇವರ ಶ್ರಮವನ್ನು, ಸಮುದಾಯದ ಕೊಡುಗೆಯನ್ನು ಸಂಸ್ಕೃತಿಯ ಪುಟಗಳನ್ನು ಉಲ್ಲೇಖೀಸುವ ಅಗತ್ಯವಿದೆ.

ಬ್ರಿಟಿಷರನ್ನು ಹೊರತುಪಡಿಸಿದರೆ ಈಗಿನ ಸರಕಾರ ಅಥವಾ ಸಮಾಜದಿಂದ ಇಂತಹ ಕೆಲಸ ನಡೆದಿಲ್ಲ ಎಂದರು. ಸಂಘದ ಜಿಲ್ಲಾ ಕಾರ್ಯದರ್ಶಿ ಚಂದು ನಾಯ್ಕ ಮಾತನಾಡಿ, ಆಧುನಿಕತೆಯ ಭರಾಟೆಯಿಂದ ಪ್ರಸ್ತುತ ಬಂಜಾರ (ಲಂಬಾಣಿ) ಸಮುದಾಯದ ಸಂಸ್ಕೃತಿ, ಸಂಸ್ಕಾರಗಳು ಅಳಿದು ಹೋಗುತ್ತಿವೆ. ಮುಂದಿನ ತಲೆಮಾರಿಗೆ ಇದನ್ನು ಕೊಂಡೊಯ್ಯುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದರು.

ಪಿಡಿಒ ರಮೇಶ್‌ ರಾಥೋಡ್‌ ದೀಪಾವಳಿ ಕುರಿತು ಉಪನ್ಯಾಸ ನೀಡಿದರು. ಮುಖ್ಯ ಅತಿಥಿಗಳಾಗಿದ್ದ ಚಿಂಚೊಳ್ಳಿ ವಿಧಾನಸಭಾ ಕ್ಷೇತ್ರದ ಸದಸ್ಯ ಉಮೇಶ್‌ ಜಾದವ್‌, ಕೆಎಸ್‌ಆರ್‌ಟಿಸಿ ಪುತ್ತೂರು ವಿಭಾಗದ ಡಿಎಂಇ ವೇಣುಗೋಪಾಲ್‌, ಬಂಟ್ವಾಳ ತಾ.ಪಂ. ಸದಸ್ಯ ಪ್ರಭಾಕರ ಪ್ರಭು, ಸುದಾನ ಶಾಲಾ ಸಂಚಾಲಕ ವಿಜಯ ಹಾರ್ವಿನ್‌ ಶುಭ ಹಾರೈಸಿದರು. ಸಂಘದ ಗೌರವಾಧ್ಯಕ್ಷ ರಾಜಪ್ಪ, ಖಜಾಂಚಿ ಪ್ರದೀಪ್‌ ಉಪಸ್ಥಿತರಿದ್ದರು. ಸಂಘದ ಜಿಲ್ಲಾ ಖಜಾಂಚಿ ಪ್ರದೀಪ್‌ ಸ್ವಾಗತಿಸಿ, ಸಂಘಟನಾ ಕಾರ್ಯದರ್ಶಿ ರಮೇಶ್‌ ಪಿ. ನಾಯ್ಕ ವಂದಿಸಿದರು. ಬಾಲಾಜಿ ಕಾರ್ಯಕ್ರಮ ನಿರೂಪಿಸಿದರು.

ಉದ್ಘಾಟನ ಸಮಾರಂಭದ ಬಳಿಕ ಲಂಬಾಣಿ ಮಹಿಳೆಯರಿಂದ ಬಂಜಾರ ನೃತ್ಯ ಹಾಗೂ ಬಂಜಾರ ಹಾಡು ಪ್ರದರ್ಶನಗೊಂಡಿತು. ಜಿಲ್ಲಾ ಮಟ್ಟದ ಈ ಕಾರ್ಯಕ್ರಮದಲ್ಲಿ ಬೆಳ್ತಂಗಡಿ, ಸುಳ್ಯ, ಪುತ್ತೂರು, ಬಂಟ್ವಾಳ ತಾಲೂಕಿನ ಉನ್ನತ ಹುದ್ದೆಯಲ್ಲಿರುವ ಗದಗ, ಶಿವಮೊಗ್ಗ ಭಾಗದ ಸಮುದಾಯದ ಪುರುಷರು, ಮಹಿಳೆಯರು, ಮಕ್ಕಳು ಭಾಗವಹಿಸಿದರು.

2017-18ನೇ ಸಾಲಿನ ಪಿಯುಸಿ ಪರೀಕ್ಷೆಯಲ್ಲಿ ಅತ್ಯ ಧಿಕ ಅಂಕ ಪಡೆದ ಪೂಜಾ ಎಂ. ನಾಯ್ಕ, ಶುಭಾ ಟಿ., ಪವನ್‌, ಲಿಖಿತಾ ಎಸ್‌., ಅಶ್ವಿ‌ನಿ ಎನ್‌., ಗೌತಮ್‌, ಮಂಜು ಬಲಾಜಿ ಎಂ.ಪಿ., ಹೇಮಂತ್‌, ಎಸೆಸೆಲ್ಸಿಯಲ್ಲಿ ಅತ್ಯಧಿಕ ಅಂಕ ಪಡೆದ ಶ್ರೇಯಾ ಬಿ. ನಾಯ್ಕ, ಚೇತನ್‌, ಪೃಥ್ವಿರಾಜ್‌, ಶ್ರೀಕಾಂತ್‌ ಲಮಾಣಿ, ಪ್ರೇಮಾ ಜಾಧವ್‌, ಶ್ರುತಿ ಜಾಧವ್‌, ಲತಾ, ವಿಜಯಲಕ್ಷ್ಮೀ, ನವೀನ್‌, ಮದನ್‌ ಅವರಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ಅಂತಾರಾಷ್ಟ್ರೀಯ ಮಟ್ಟದ ಪವರ್‌ ಲಿಫ್ಟರ್‌ ಜಯಪ್ಪ ಲಂಬಾಣಿ ಹಾಗೂ ಕೆಇಎಸ್‌ ಉತ್ತೀರ್ಣರಾದ ಸಂತೋಷ್‌ ಕುಮಾರ್‌ ಅವರನ್ನು ಸಮ್ಮಾನಿಸಲಾಯಿತು.

ಲಂಬಾಣಿ ಸಮುದಾಯದ ಜಾಗ
ದೇಶದ ಪಾರ್ಲಿಮೆಂಟ್‌ ಕಟ್ಟಲು ನೀಡಿರುವ ಜಾಗ ಲಂಬಾಣಿ ಸಮುದಾಯದ ಕೊಡುಗೆ. ಮೂಲತಃ ವ್ಯಾಪಾರಿಗಳಾದ್ದ ಲಂಬಾಣಿ ಜನಾಂಗದವರು ಲಮಾಣಿ ಮಾರ್ಗಗಳನ್ನು ಬಳಸಿಕೊಂಡು ರೈಲ್ವೇ ಹಳಿಗಳನ್ನು ಕಟ್ಟುತ್ತಿದ್ದರು. 1923ರಲ್ಲಿ ಮೈಸೂರಿನ ನಾಲ್ವಡಿ ಕೃಷ್ಣರಾಜ ಒಡೆಯರು ಲಂಬಾಣಿ ಸಮುದಾಯವನ್ನು ಶೋಷಿತ ಜನಾಂಗದ ಪಟ್ಟಿಗೆ ಸೇರಿಸಿದ್ದರು. 
– ಅನಂತ ನಾಯ್ಕ,
ಹೈಕೋರ್ಟ್‌ ವಕೀಲ

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.