ಪುತ್ತೂರು: ಜಾಗದ ವಿವಾದ,ಹಲ್ಲೆ: ಮೂವರು ಆಸ್ಪತ್ರೆಗೆ  


Team Udayavani, Dec 1, 2022, 6:19 PM IST

0

ಪುತ್ತೂರು: ಬೆಳ್ಳಿಪ್ಪಾಡಿ ಗ್ರಾಮದ ಕಲ್ಲಡ್ಕದಲ್ಲಿ ಜಾಗದ ವಿವಾದಕ್ಕೆ ಸಂಬಂಧಿಸಿ ಎರಡು ತಂಡಗಳ ನಡುವೆ ಹಲ್ಲೆ ನಡೆದಿದೆ ಎಂದು ಹೇಳಲಾಗುತ್ತಿದ್ದು, ಈ ಸಂಬಂಧ ಮೂವರು ಪುತ್ತೂರು ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.

ಕೆಮ್ಮಿಂಜೆ ಗ್ರಾಮದ ಕೊಂಬಾರೆಟ್ಟು ನಿವಾಸಿ ಶಕುಂತಲಾ ರೈ, ಬೆಳ್ಳಿಪ್ಪಾಡಿ ಗ್ರಾಮದ ಕಲ್ಲಡ್ಕ ನಿವಾಸಿಗಳಾದ ಶಿವಮ್ಮ ಹಾಗೂ ಚೆನ್ನಮ್ಮ ಪುತ್ತೂರಿನ ಪ್ರತ್ಯೇಕ ಆಸ್ಪತ್ರೆಗಳಲ್ಲಿ ದಾಖಲಾಗಿದ್ದಾರೆ.

ಪಿತ್ರಾರ್ಜಿತ ಆಸ್ತಿ: ಶಕುಂತಲಾ ರೈ:

ನನ್ನ ತಾಯಿಯಿಂದ ಪಿತ್ರಾರ್ಜಿತವಾಗಿ ಬಂದ ಸುಮಾರು 50.80 ಎಕ್ರೆ ಜಾಗದಲ್ಲಿ 50 ವರ್ಷಗಳಿಂದ ನಾನು, ಸಹೋದರಿಯರಾದ ಶ್ವೇತಾ ಪ್ರಕಾಶ್‌ ರೈ, ನವೀನಾ ರೈ, ಜಯಲತಾ ರೈ ಅವರು ಸಾಗುವಳಿ ಮಾಡುತ್ತಿದ್ದೆವು.  ಸದ್ರಿ ಜಾಗದಲ್ಲಿ ಸಂಜೀವ ಗೌಡ ಯಾನೆ ರಾಮಣ್ಣ ಗೌಡ, ಸುಭಾಶ್‌, ಹರೀಶ್‌, ಪದ್ಮನಾಭ ಗೌಡ ಅವರೊಂದಿಗೆ ತಕರಾರು ಇತ್ತು. ಈ ಕುರಿತು ಪುತ್ತೂರು ಸಹಾಯಕ ಆಯುಕ್ತರ ನ್ಯಾಯಾಲಯದಲ್ಲಿ ನ.9ರಂದು ನಮ್ಮ ಪರವಾಗಿ ತೀರ್ಪು ಆಗಿದೆ. ನ.29ರಂದು ಮಧ್ಯಾಹ್ನ ಜೆಸಿಬಿಯಲ್ಲಿ ಜಾಗವನ್ನು ಸಮತಟ್ಟು ಮಾಡುತ್ತಿದ್ದಾಗ ಹರೀಶ್‌, ಪದ್ಮನಾಭ ಗೌಡ, ಸಂಜೀವ ಗೌಡ ಯಾನೆ ರಾಮಣ್ಣ ಗೌಡ, ಪೆರ್ನುಗೌಡ, ಸುಭಾಶ್‌ ಮತ್ತು ಇತರರು ಬಂದು ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆ ನಡೆಸಿ ಜೀವ ಬೆದರಿಕೆಯೊಡ್ಡಿದ್ದಾರೆ ಎಂದು ಶಕುಂತಲಾ ರೈ ಆರೋಪಿಸಿದ್ದಾರೆ.

ಡಿಕ್ಲರೇಶನ್‌ ಜಾಗ: ಶಿವಮ್ಮ, ಚೆನ್ನಮ್ಮ

ಹಲವು ವರ್ಷಗಳ ಹಿಂದೆಯೇ ಡಿಕ್ಲರೇಶನ್‌ ಮೂಲಕ ನಮ್ಮ ಹಿರಿಯರಿಗೆ ಸಿಕ್ಕಿದ ಜಾಗದಲ್ಲಿ ನಾವು ಕೃಷಿ ಮಾಡುತ್ತಿದ್ದೆವು. ಅದರಲ್ಲಿ ಅಡಿಕೆ ಗಿಡ ನೆಡಲಾಗಿದೆ. ಈ ಜಾಗದಲ್ಲಿ ಶಂಕರ ಗೌಡ, ಅಂಗಾರ ಗೌಡ, ಪಕೀರ ಗೌಡ, ಬಿರ್ಮಣ್ಣ ಗೌಡ, ಪದ್ಮನಾಭ ಗೌಡ, ಕೊರಗಪ್ಪ ಗೌಡ ಅವರಿಗೂ ಪಾಲು ಇದೆ. ಇತ್ತೀಚೆಗೆ ನಾವು ಮನೆಗೆ ಬೀಗ ಹಾಕಿ ಕ್ಷೇತ್ರ ದರ್ಶನಕ್ಕೆ ಹೋಗಿದ್ದೆವು. ಮರಳಿ ಬಂದು ನೋಡಿದಾಗ ನಮ್ಮ ಮನೆಯನ್ನು ನೆಲಸಮ ಮಾಡಲಾಗಿತ್ತು. ತೋಟಕ್ಕೆ ಹೋಗಿ ನೋಡಿದಾಗ ಅಲ್ಲಿ ಶ್ವೇತಾ ಪ್ರಕಾಶ್‌ ರೈ, ಶಕುಂತಲಾ ರೈ, ನವೀನಾ, ಜಯಲತಾ ಸಹಿತ 20ಕ್ಕೂ ಅಧಿಕ ಮಂದಿ ನಮಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವ ಬೆದರಿಕೆ ಒಡ್ಡಿದ್ದಾರೆ ಎಂದು  ಶಿವಮ್ಮ ಮತ್ತು ಚೆನ್ನಮ್ಮ ಆರೋಪಿಸಿದ್ದಾರೆ.

ಶಾಸಕರ ವಿರುದ್ಧ ಆರೋಪ:

ಎಸಿ ಕೋರ್ಟ್‌ನಲ್ಲಿ ನಮ್ಮ ಪರವಾಗಿ ತೀರ್ಪು ಬಂದಿದ್ದು, ಅದನ್ನು ತಪ್ಪಿಸಲು  ಶಾಸಕರಾದ ಸಂಜೀವ ಮಠಂದೂರು ಹಲವಾರು ರೀತಿಯಲ್ಲಿ ಒತ್ತಡ ಹಾಕಿದ್ದಾರೆ. ಸಹಾಯಕ ಕಮಿಷನರ್‌ ಅವರು ನಮ್ಮ ದಾಖಲೆ ಪತ್ರ ನೋಡಿ ನಮಗೆ ನ್ಯಾಯ ಕೊಡಿಸಿದ್ದಾರೆ. ನ್ಯಾಯ ಕೊಟ್ಟ ಮರುದಿನವೇ ನ್ಯಾಯ ಮಂಡಳಿ ಸಮಿತಿ ಸದಸ್ಯರನ್ನು ತೆಗೆದು ಹಾಕಿ. ಬೇರೊಬ್ಬರನ್ನು ನೇಮಿಸಲಾಗಿದೆ.  ಈ ರೀತಿ ಜನಸಾಮಾನ್ಯರಿಗೆ ಶಾಸಕರು ಅನ್ಯಾಯ ಮಾಡುತ್ತಿದ್ದಾರೆ ಎಂದು ಶಕುಂತಲಾ ರೈ  ಆರೋಪಿಸಿದ್ದಾರೆ.

ಟಾಪ್ ನ್ಯೂಸ್

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

CAR-D

Sullia: ರಸ್ತೆ ಬದಿ ನಿಲ್ಲಿಸಿದ್ದ ಕಾರಿಗೆ ಕಂಟೈನರ್‌ ಢಿಕ್ಕಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.