ಪುತ್ತೂರು: ಭೂ ಮಾಪನ ಇಲಾಖೆ, ತಾಲೂಕು ಕಚೇರಿ; 1,006 ಅರ್ಜಿ ವಿಲೇಗೆ ಬಾಕಿ


Team Udayavani, Sep 25, 2022, 10:04 AM IST

2

ಪುತ್ತೂರು: ತಾಲೂಕಿನಲ್ಲಿ ಭೂ ಅಳತೆಗೆ ಸಂಬಂಧಿಸಿ ಭೂ ಮಾಪನ ಇಲಾಖೆ ಹಾಗೂ ತಾಲೂಕು ಕಚೇರಿಯಲ್ಲಿ 1,006 ಅರ್ಜಿಗಳು ವಿಲೇವಾರಿಗೆ ಬಾಕಿ ಇದೆ.

ಹಲವು ವರ್ಷಗಳಿಂದ ವಿವಿಧ ಕಾರಣಗಳಿಂದ ಸರಕಾರಿ ಹಾಗೂ ಖಾಸಗಿ ಜಾಗಕ್ಕೆ ಸಂಬಂಧಿಸಿದ ಕಡತ ವಿಲೇವಾರಿಗೆ ಅಡ್ಡಿ ಉಂಟಾಗಿದೆ. ಅರಣ್ಯ ಜಮೀನು, ಖಾಸಗಿ ಜಾಗ ಗುರುತಿಸುವಿಕೆ, ಪಹಣಿ ತಿದ್ದುಪಡಿ ಮೊದಲಾದ ವಿಭಾಗಕ್ಕೆ ಸಂಬಂಧಿಸಿದ ಅರ್ಜಿಗಳು ಇದಾಗಿದೆ.

ಬಾಕಿ ಇರುವ ಅರ್ಜಿ

ತಾಲೂಕಿನಲ್ಲಿ ಜೂನ್‌ ಅಂತ್ಯಕ್ಕೆ ತಾಲೂಕು ಕಚೇರಿ ಹಾಗೂ ಭೂಮಾಪನ ಇಲಾಖೆಯಲ್ಲಿ ಒಟ್ಟು 1,006 ಅರ್ಜಿಗಳು ಬಾಕಿ ಇವೆ. ಇವುಗಳ ಪೈಕಿ 170 ಅಳತೆಗಾಗಿ ಸರ್ವೇ ಕಚೇರಿಯಲ್ಲಿ ಹಾಗೂ 836 ಅರ್ಜಿಗಳು ಪಹಣಿ ತಿದ್ದುಪಡಿ 1-5 ತಯಾರಿಕೆಗಾಗಿ ತಾಲೂಕು ಕಚೇರಿಯಲ್ಲಿ ಇವೆ. 11 ಇಗೆ ಸಂಬಂಧಿಸಿ ತಾಲೂಕು ಕಚೇರಿಯಲ್ಲಿ 646, ಸರ್ವೇ ಕಚೇರಿಯಲ್ಲಿ 85 ಅರ್ಜಿ ಸೇರಿದಂತೆ 731, ಭೂ ಪರಿವರ್ತನೆಗೆ ಸಂಬಂಧಿಸಿ ತಾಲೂಕು ಕಚೇರಿಯಲ್ಲಿ 164, ಸರ್ವೇ ಕಚೇರಿಯಲ್ಲಿ 47 ಸೇರಿದಂತೆ 211, ಗಡಿ ಅಳತೆಗೆ ಸಂಬಂಧಿಸಿ ತಾಲೂಕು ಕಚೇರಿಯಲ್ಲಿ 26, ಸರ್ವೇ ಕಚೇರಿಯಲ್ಲಿ 18 ಸೇರಿದಂತೆ 44, ಸರಕಾರಿ ಜಮೀನಿನ ಅಳತೆಗೆ ಸಂಬಂಧಿಸಿ ಸರ್ವೇ ಕಚೇರಿಯಲ್ಲಿ 20 ಅರ್ಜಿಗಳು ಬಾಕಿ ಇವೆ ಎನ್ನುತ್ತಿದೆ ಅಂಕಿ ಅಂಶ. 1-5 ತಯಾರಿಕೆಗೆ ಸಂಬಂಧಿಸಿ ಹತ್ತಾರು ವರ್ಷಗಳಿಂದ ಅರ್ಜಿಗಳು ಬಾಕಿ ಇದ್ದು ಇದರ ವಿಲೇ ವಾರಿಗೆ ಸಂಬಂಧಿಸಿ ಅರ್ಜಿದಾರ ದಿನ ನಿತ್ಯ ಕಂದಾಯ ಇಲಾಖೆಯ ಕಚೇರಿಅಲೆದಾಟ ಮಾಡಬೇಕಾದ ಸ್ಥಿತಿ ನಿರ್ಮಾಣವಾಗಿದೆ. ಕಂದಾಯ ಇಲಾಖೆಯು ಈ ಅರ್ಜಿಗಳ ವಿಲೇವಾರಿಗೆ ಸಂಬಂಧಿಸಿ ಗಡು ವಿಧಿಸಿದ್ದರೂ ಈ ತನಕ ವಿಲೇವಾರಿ ಆಗಿಲ್ಲ.

ಭೂ ಮಾಪಕರ ಕೊರತೆ

ಪುತ್ತೂರು ಭೂ ಮಾಪನ ಇಲಾಖೆಯಲ್ಲಿ ಮಂಜೂರಾತಿ ಹುದ್ದೆಗಳ ಪೈಕಿ ಹಲವು ಹುದ್ದೆಗಳು ಖಾಲಿ ಇವೆ. ಹನ್ನೊಂದು ಜನರ ಪೈಕಿ ನಾಲ್ಕು ಮಂದಿ ನಿಯೋಜನೆ ನೆಲೆಯಲ್ಲಿ ಕಡಬಕ್ಕೆ ಕರ್ತವ್ಯಕ್ಕೆ ತೆರಳಿದ್ದಾರೆ. ದಿನಂಪ್ರತಿ ಸರಕಾರಿ ಹಾಗೂ ಖಾಸಗಿ ಭೂಮಿಗೆ ಸಂಬಂಧಿಸಿ ನೂರಾರು ಅರ್ಜಿಗಳು ಸಲ್ಲಿಕೆಯಾಗುತ್ತಿದ್ದು ವರ್ಷಾನುಗಟ್ಟಲೇ ಕಾಯುವ ಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ ದಿನೇ ದಿನೆ ಅರ್ಜಿ ಸಲ್ಲಿಕೆ ಆಗುತ್ತಿದ್ದರೂ ಅದರ ವಿಲೇವಾರಿ ಮಾತ್ರ ಆಗುತ್ತಿಲ್ಲ ಅನ್ನುವುದು ಸಾರ್ವಜನಿಕ ವಲಯದ ಆರೋಪ.

ಅಗತ್ಯ ಕ್ರಮ: ತಾಲೂಕು ಕಚೇರಿ, ಸರ್ವೇ ಇಲಾಖೆಯಲ್ಲಿ ಬಾಕಿ ಇರುವ ಅರ್ಜಿಗಳನ್ನು ತ್ವರಿತವಾಗಿ ವಿಲೇವಾರಿ ಮಾಡುವಂತೆ ಸೂಚನೆ ನೀಡಲಾಗಿದೆ. ಸರಕಾರಿ ಯೋಜನೆಗಳ ಅನುಷ್ಠಾನಕ್ಕೆ ಭೂಮಿ ಕಾದಿರಿಸುವಿಕೆ, ಖಾಸಗಿ ಭೂ ದಾಖಲೆಗಳಿಗೆ ಸಂಬಂಧಿಸಿ ಅರ್ಜಿಗಳನ್ನು ಶೀಘ್ರ ಇತ್ಯರ್ಥಕ್ಕೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. –ಸಂಜೀವ ಮಠಂದೂರು, ಶಾಸಕರು, ಪುತ್ತೂರು

ಟಾಪ್ ನ್ಯೂಸ್

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.