ಮರು ನಿರ್ಮಾಣ ಅಕ್ಷರಶಃ ಸವಾಲು: ಪುಷ್ಪಗಿರಿ ತಪ್ಪಲಿನಲ್ಲಿ ಜಲಪ್ರಳಯ, ಗುಡ್ಡ, ಕೃಷಿ ಭೂಮಿ ಬೋಳು


Team Udayavani, Aug 4, 2022, 8:53 AM IST

ಮರು ನಿರ್ಮಾಣ ಅಕ್ಷರಶಃ ಸವಾಲು: ಪುಷ್ಪಗಿರಿ ತಪ್ಪಲಿನಲ್ಲಿ ಜಲಪ್ರಳಯ, ಗುಡ್ಡ, ಕೃಷಿ ಭೂಮಿ ಬೋಳು

ಸುಬ್ರಹ್ಮಣ್ಯ : ಪ್ರಕೃತಿ ಮುನಿದರೆೆ ಮನುಕುಲದ ನಾಶಕ್ಕೆ ದಾರಿ ಎಂಬುದಕ್ಕೆ ಪುಷ್ಪಗಿರಿ ತಪ್ಪಲಿನ ಗ್ರಾಮಗಳಲ್ಲಿ ಸಂಭವಿ ಸುತ್ತಿರುವ ಭೂಕುಸಿತಗಳೇ ಸ್ಪಷ್ಟ ಸಾಕ್ಷಿ .

ಮೋಡ ಮುಸುಕಿದಂಥ ವಾತಾ ವರಣ, ಒಮ್ಮೆ ಜೋರು ಮತ್ತೂಮ್ಮೆ ತುಂತುರು ಮಳೆ, ಭೋರ್ಗರೆಯುವ ಹೊಳೆ, ಈಗಲೂ ಕುಸಿಯುತ್ತಿರುವ ಬೆಟ್ಟ. ಎರಡು ಮೂರು ದಿನಗಳಿಂದ ಇಂಥ ಬೆಳವಣಿಗೆಗಳಿಗೆ ಪುಷ್ಪಗಿರಿ ಪರ್ವತ ಶ್ರೇಣಿಯ 5 ಗ್ರಾಮಗಳು ಸಾಕ್ಷಿಯಾಗಿವೆ. ಕಡಮಕಲ್ಲು (ಕಲ್ಮಕಾರು) ನಿಂದ ಐನ ಕಿದು ಕಲ್ಲಾಜೆಯವರೆಗೆ ತೆರಳಿದಾಗ ಈ ಪ್ರತಿಕೂಲ ಪರಿಸ್ಥಿತಿಯಲ್ಲಿ ಪರಿಸರದ ಮರುಸ್ಥಾಪನೆ, ರಸ್ತೆ ಮರು ನಿರ್ಮಾಣ ಅಕ್ಷರಶಃ ಸವಾಲೆನಿಸಿದೆ.

ಎರಡು ದಿನಗಳ ಕಾಲ ಸಂಭವಿಸಿದ ಭೀಕರ ಕುಸಿತದಿಂದ ಈ ಗ್ರಾಮಗಳು ಬಹುತೇಕ ತತ್ತರಿಸಿವೆ. ನದಿ ದಂಡೆಯ ಮನೆಗಳು, ಕೃಷಿ ಭೂಮಿ ಜಲಾವೃತ ವಾಗಿವೆ. 2018ರಲ್ಲಿ ಈ ಭಾಗದಲ್ಲಿ ಜಲಪ್ರಳಯ ಪರಿಸ್ಥಿತಿ ಸಂಭವಿಸಿತ್ತು. ಆ ಆಘಾತದಿಂದ ಹೊರಬರುವ ಮೊದಲೇ ಮತ್ತೂಂದು ದುರಂತ ನಡೆದಿದೆ.

ರಾತೋರಾತ್ರಿ ಇದುವರೆಗೆ ಕೇಳರಿಯದ ರೀತಿಯ ಈ ಘಟನೆ ಘಟಿಸಿದ್ದು, ಬೆಳಗಾಗುವುದರೊಳಗೆ ಗ್ರಾಮಗಳ ಭೌಗೋಳಿಕ ಚಿತ್ರಣವೇ ಬದಲಾಗಿದೆ. ರವಿವಾರದ ಜಲಸ್ಫೋಟಕ್ಕೆ ಕಲ್ಮಕಾರು ಭಾಗದ ಹಲವು ಭಾಗಗಳಿಗೆ ಸಂಪರ್ಕಿಸುವ ಸೇತುವೆಗಳು ಕೊಚ್ಚಿ ಹೋಗಿದ್ದವು. ಆ ಬಳಿಕ ಸುರಿದ ಭಾರಿ ಮಳೆಯಿಂದ ಕಡಮಕಲ್ಲು ಭಾಗದ ನದಿಗಳು ತುಂಬಿ ಹರಿದಿವೆ. ರಾತ್ರಿ ಕೊಂಚ ಮಳೆ ಕಡಿಮೆಯಾದರೂ ತಡರಾತ್ರಿ ಭಾರೀ ಸದ್ದಿನೊಂದಿಗೆ ಹೊಳೆಯಲ್ಲಿ ಪ್ರವಾಹ ಬಂದಿತ್ತು. ಅರ್ಧ ತಾಸಿನೊಳಗೆ ಹೊಳೆಯ ನೀರೆಲ್ಲಾ ಮಣ್ಣಿನ ಬಣ್ಣಕ್ಕೆ ತಿರುಗಿತು. ನೂರಾರು ಬೃಹತ್‌ ಗಾತ್ರದ ಮರಗಳು ಬುಡ ಸಮೇತ ಗುಡ್ಡದ ಮೇಲಿನಿಂದ ಉರುಳಿ ನೀರಿನಲ್ಲಿ ಕೊಚ್ಚಿಕೊಂಡು ಬಂದಿದ್ದವು. ಹಾಗಾಗಿ ಅಪಾರ ಪ್ರಮಾಣದಲ್ಲಿ ಮಣ್ಣು ಮತ್ತು ಮರಗಳು ನದಿ ದಂಡೆಯ ತೋಟಗಳಲ್ಲಿ ರಾಶಿಬಿದ್ದಿವೆ. ದಾರಿಯುದ್ದಕ್ಕೂ ವಿದ್ಯುತ್‌ ದೀಪಗಳು ಮುರಿದು ಬಿದ್ದಿವೆ. ಸಾವಿರಾರು ಎಕರೆ ಕೃಷಿ ಭೂಮಿ ನಾಶವಾಗಿದೆ. ರಸ್ತೆಗಳು ಬಹುತೇಕ ಹಾನಿಯಾಗಿವೆ.

ಗುಡ್ಡದ ಮೇಲೆ ಇನ್ನೂ 3 ಕಡೆ ಕುಸಿಯುವ ಭೀತಿಯಿದೆ. ಯಾವಾಗ ಬೇಕಾದರೂ ದುರ್ಘ‌ಟನೆ ಘಟಿಸಬಹುದು. ಪ್ರತೀ ಭೂ ಕುಸಿತ ನೂರಕ್ಕೂ ಅಧಿಕ ಎಕ್ರೆ ಪ್ರದೇಶಕ್ಕೆ ವಿಸ್ತರಿಸುತ್ತದೆ ಎನ್ನುತ್ತಾರೆ ಸ್ಥಳೀಯರಾದ ವೆಂಕಪ್ಪ.

ಭಾರೀ ಗಾತ್ರದ ಮರಗಳು ಕಡಮಕಲ್ಲು ಹೊಳೆಯುದ್ದಕ್ಕೂ ವ್ಯಾಪಿಸಿ ಅದರ ಕೆಳಗಿನ ಭಾಗದ ಕಲ್ಮಕಾರು, ಕೊಲ್ಲಮೊಗ್ರು, ಹರಿಹರ, ಐನೆಕಿದು ಭಾಗದ ಡ್ಯಾಂ, ಸೇತುವೆಗಳಿಗೆ ಹಾನಿಯ ನ್ನುಂಟು ಮಾಡಿದೆ. ನದಿ ದಂಡೆ ಮೇಲಿನ ಮನೆಗಳು ಜಲಾವೃತವಾಗಿವೆ.ಇಷ್ಟೊಂದು ಭೀಕರವಾದ ಕೃತಕ ನೆರೆ ಬಂದಿದ್ದನ್ನು ಕಂಡಿಲ್ಲ, ಕೇಳಿಲ್ಲ ಎನ್ನುತ್ತಾರೆ ಸ್ಥಳೀಯರಾದ ಯಶವಂತ ಬಿಳಿಮಲೆ.

ಹಲವು ಮನೆಗೆ ನೀರು ನುಗ್ಗಿ ಬಟ್ಟೆ, ದಿನಸಿ ಸಾಮಗ್ರಿ ನೀರು ಪಾಲಾಗಿದೆ. ಮನೆಯೊಳಗಿನ ಕೆಸರು ಮಿಶ್ರಿತ ನೀರು, ಮಣ್ಣು ತೆರವಿಗೆ ನಿವಾಸಿಗಳು ಹರಸಾಹಸಪಡುತಿದ್ದಾರೆ. ಹರಿಹರ ಮುಖ್ಯ ಪೇಟೆಯ ಫ್ಯಾನ್ಸಿ ಅಂಗಡಿ, ದೇಗುಲದ ಕಾಣಿಕೆ ಹುಂಡಿ ಕುರುಹು ಇಲ್ಲದಂತೆ ಕೊಚ್ಚಿ ಹೋಗಿದೆ. ಎಣ್ಣೆಮಿಲ್‌ನಲ್ಲಿದ್ದ 2 ಸಾವಿರ ಲೀ. ಕೊಬ್ಬರಿ ಎಣ್ಣೆ ಹಾಗೂ ಇತರ ವಸ್ತುಗಳು ನಾಶವಾಗಿವೆ.

ಕಂದಮ್ಮನ ಜತೆ ರಾತ್ರಿ ಜಾಗರಣೆ
ಆ. 1ರಂದು ನಡು ರಾತ್ರಿ ನಡೆದ ಜಲಪ್ರವಾಹಕ್ಕೆ ಹಲವು ಮನೆಗಳು ಜಲಾವೃತ ಗೊಂಡಿದ್ದವು. ಕೆಲವರಿಗೆ ಮನೆಯೊಳಗೆ ನೀರು ಬಂದದ್ದೇ ಗೊತ್ತಾಗಲಿಲ್ಲ. ನಡು ರಾತ್ರಿ ಪಳ್ಳತ್ತಡ್ಕ ಎಂಬಲ್ಲಿ ಯೋಗೀಶ್‌ ಕುಕ್ಕುಂದ್ರಡ್ಕ ಎಂಬವರ ಮನೆ ಜಲ ದಿಗ್ಬಂಧನಕ್ಕೆ ಒಳಗಾಗಿ ರಕ್ಷಣೆ ಸಾಧ್ಯವಾಗದೆ ದಂಪತಿ ರಾತ್ರಿಯಿಡೀ ತಮ್ಮ ಎಳೆಯ ಕಂದಮ್ಮನ ಜತೆಗೆ ಮನೆಯ ಟೆರೇಸ್‌ ಮೇಲೆ ನಿಂತು ಕಳೆದಿದ್ದಾರೆ. ಹರಿಹರ ಮುಖ್ಯ ಪೇಟೆಯ ನಿವಾಸಿಯೊಬ್ಬರ 2 ಲಕ್ಷ ರೂ. ಹಣ ನೆರೆ ಪಾಲಾಗಿದೆ.

– ಬಾಲಕೃಷ್ಣ ಭೀಮಗುಳಿ
– ದಯಾನಂದ ಕಲ್ನಾರ್

ಟಾಪ್ ನ್ಯೂಸ್

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.