ನೆಕ್ಕರೆ -ಕರಿಯಾಳ ಪರಿಸರ: ಕಸದ ರಾಶಿಯಿಂದ ತೊಂದರೆ
Team Udayavani, May 22, 2019, 5:50 AM IST
ಪುತ್ತೂರು: ಕಸ ವಿಲೇವಾರಿಗೆ ಸಂಬಂಧಿಸಿದಂತೆ ತೆರಿಗೆ ಸಂಗ್ರಹಿಸಿದರೂ ನಗರಸಭೆ ಆಡಳಿತ ಕಸ ವಿಲೇವಾರಿ ಮಾಡದೇ ಇರುವುದರಿಂದ ನೆಕ್ಕರೆ – ಕರಿಯಾಳ ಪರಿಸರದಲ್ಲಿ ಸಾರ್ವಜನಿಕ ಜಾಗಗಳಲ್ಲಿ ಕಸದ ರಾಶಿ ಬೀಳುತ್ತಿವೆ ಎಂದು ಚಿಕ್ಕಮುಟ್ನೂರು ಕಲಿಯುಗ ಸೇವಾ ಸಮಿತಿ ಆರೋಪಿಸಿದೆ.
ಇತ್ತೀಚೆಗೆ ನೆಕ್ಕರೆ -ಕರಿಯಾಳ ಪ್ರದೇಶದಲ್ಲಿ ಸಾರ್ವಜನಿಕರ ಆಶಯದಂತೆ ಸಹಿ ಸಂಗ್ರಹ ಅಭಿಯಾನವನ್ನೂ ನಡೆಸಲಾಗಿದೆ. ಸಾರ್ವಜನಿಕರು ನಗರಸಭೆಗೆ ಹಲವು ಬಾರಿ ಮನವಿ ಸಲ್ಲಿಸಿ ತ್ಯಾಜ್ಯ ವಿಲೇವಾರಿಗಾಗಿ ಒತ್ತಡ ತಂದರೂ ಯಾವುದೇ ಸ್ಪಂದನ ದೊರೆತಿಲ್ಲ. ನಗರಸಭೆಯ ಈ ನಿರ್ಲಕ್ಷ್ಯದ ಕಾರ್ಯವೈಖರಿಯಿಂದ ಜನರು ತೋಡಿಗೆ ತ್ಯಾಜ್ಯ ಹಾಕುವುದು ಅನಿವಾರ್ಯವಾಗಿದೆ ಎನ್ನುವ ಅಭಿಪ್ರಾಯ ವ್ಯಕ್ತವಾಗಿದೆ ಎಂದು ಸಮಿತಿ ತಿಳಿಸಿದೆ.
ಸಮಸ್ಯೆಯ ಕುರಿತು ಸಹಾಯಕ ಆಯುಕ್ತರಿಗೆ, ನಗರಸಭೆ ಪೌರಾ ಯುಕ್ತರಿಗೆ ಸಮಿತಿ ವತಿಯಿಂದ ಮನವಿ ಸಲ್ಲಿಸಲಾಗಿದೆ. ತ್ಯಾಜ್ಯ ತೋಡಿಗೆ ಬೀಳುತ್ತಿರುವುದರಿಂದ ನದಿ ನೀರು ಮಲಿನಗೊಳ್ಳಲಿದೆ. ಈ ಕಾರಣದಿಂದ ಸಾಂಕ್ರಾಮಿಕ ರೋಗದ ಭೀತಿಯೂ ಇದೆ. ಜನರಿಂದ ಕಸ ಸಂಗ್ರಹಕ್ಕಾಗಿ ತೆರಿಗೆ ಸಂಗ್ರಹಿಸಿ ವಿಲೇವಾರಿ ಮಾಡದೇ ಇರುವುದು ಕರ್ತವ್ಯ ಲೋಪವಾಗಿದ್ದು, ಕೂಡಲೇ ಸಮಸ್ಯೆ ಪರಿಹರಿಸಲು ಕ್ರಮ ಕೈಗೊಳ್ಳ ಬೇಕು ಎಂದು ವಿನಂತಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ