Kadaba ಸ್ವಾಭಿಮಾನ ಭರಿತ ಸಮಾಜ ನಿರ್ಮಾಣ ಗುರಿಯಾಗಿರಲಿ: ಡಾ| ನಿರ್ಮಲಾನಂದನಾಥ ಸ್ವಾಮೀಜಿ

ಕಡಬ: ಗೌಡ ಸಮುದಾಯ ಭವನಕ್ಕೆ ಶಿಲಾನ್ಯಾಸ, ಸಹಕಾರ ಸಂಘ ಉದ್ಘಾಟನೆ

Team Udayavani, Dec 27, 2023, 12:04 AM IST

Kadaba ಸ್ವಾಭಿಮಾನ ಭರಿತ ಸಮಾಜ ನಿರ್ಮಾಣ ಗುರಿಯಾಗಿರಲಿ: ಡಾ| ನಿರ್ಮಲಾನಂದನಾಥ ಸ್ವಾಮೀಜಿ

ಕಡಬ: ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವ ಮೂಲಕ ಅವರು ಬೌದ್ಧಿಕ ಮತ್ತು ಅರ್ಥಿಕವಾಗಿ ಸದೃಢರಾಗುವಂತೆ ಮಾಡಬೇಕು. ತನ್ಮೂಲಕ ಸ್ವಾಭಿಮಾನ ಭರಿತ ಸಮಾಜ ನಿರ್ಮಾಣ ನಮ್ಮ ಗುರಿಯಾಗಿರಲಿ ಎಂದು ಆದಿಚುಂಚನಗಿರಿ ಮಠದ ಡಾ| ನಿರ್ಮಲಾನಂದ ನಾಥ ಸ್ವಾಮೀಜಿ ನುಡಿದರು.

ಅವರು ಮಂಗಳವಾರ ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘದ ವತಿಯಿಂದ ಕಡಬದ ಹೊಸಮಠದಲ್ಲಿ 15 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಲಿರುವ ಒಕ್ಕಲಿಗ ಗೌಡ ಸಮುದಾಯ ಭವನದ ಶಿಲಾನ್ಯಾಸ ಹಾಗೂ ಕಡಬದಲ್ಲಿ ಒಕ್ಕಲಿಗ ಸ್ಪಂದನಾ ಸಮುದಾಯ ಸಹಕಾರ ಸಂಘದ ಉದ್ಘಾಟನೆ ನೆರವೇರಿಸಿ ನೂತನ ತಾಲೂಕು ಸಮಿತಿಯ ಪದಾಧಿಕಾರಿಗಳ ಪದಗ್ರಹಣ ಸಮಾರಂಭವನ್ನು ಉದ್ಘಾಟಿಸಿ ಆಶೀರ್ವಚನ ನೀಡಿದರು.

ನಾಡಿಗೆ ಹಲವು ಕೊಡುಗೆಗಳನ್ನು ನೀಡಿದ ಸಮಾಜ ನಮ್ಮದು. ಯಾವುದೇ ರೀತಿಯಲ್ಲಿ ಕೀಳರಿಮೆ ಬೇಡ. ಸ್ವಾಮಿ ವಿವೇಕಾನಂದರ ಪ್ರೇರಣೆಯಂತೆ 1897ರಲ್ಲಿ ಕೆ.ಎಚ್‌. ರಾಮಯ್ಯನವರು ಹುಟ್ಟುಹಾಕಿದ ಒಕ್ಕಲಿಗ ಗೌಡ ಸಂಘದ ಇತಿಹಾಸ ಅತ್ಯಂತ ಹಿರಿದು. ನಾವು ನಮ್ಮ ಪರಂಪರೆ, ಗೌರವವನ್ನು ಉಳಿಸಿಕೊಂಡು ಇತರ ಸಮಾಜಗಳಿಗೂ ಧ್ವನಿಯಾಗುವ ರೀತಿಯಲ್ಲಿ ಮುನ್ನಡೆಯಬೇಕು ಎಂದು ಸಲಹೆ ನೀಡಿದರು.

ಕಡಬದಲ್ಲಿ ತಾಲೂಕು ಮಟ್ಟದ ನೂತನ ಸಂಘ ಉದಯವಾಗುವ ಮೊದಲೇ 15 ಕೋಟಿ ರೂ. ವೆಚ್ಚದ ಬೃಹತ್‌ ಸೌಧದ ಶಿಲಾನ್ಯಾಸ ನಡೆಸುವ ಮೂಲಕ ಹೊಸ ಸಾಹಸವನ್ನು ಕೈಗೆತ್ತಿಕೊಂಡು ಸಮಾಜದ ದೃಷ್ಟಿಯಲ್ಲಿ ಅಪ್ಯಾಯಮಾನವಾದ ಕೆಲಸ ಮಾಡಿದೆ. ಸಮಾಜದ ಹೆಮ್ಮೆಯ ಸಂಕೇತವಾಗಿರುವ ಈ ಕಾರ್ಯದಲ್ಲಿ ಆದಿ ಚುಂಚನಗಿರಿ ಮಠವು ಎಲ್ಲ ಸಂದರ್ಭದಲ್ಲಿ ಜತೆಗಿದೆ. ಸಮಾಜದ ಎಲ್ಲ ಸ್ತರದ ಜನರನ್ನು ಒಟ್ಟುಗೂಡಿಸಿಕೊಂಡು ಒಗ್ಗಟ್ಟಿನಿಂದ ಕೆಲಸ ಮಾಡುತ್ತಿರುವ ನೂತನ ತಂಡದ ಕಾರ್ಯ ಶ್ಲಾಘನೀಯ ಎಂದು ಶ್ರೀಗಳು ಮೆಚ್ಚುಗೆ ವ್ಯಕ್ತಪಡಿಸಿದರು.

ಡಾ| ಧರ್ಮಪಾಲನಾಥ ಸ್ವಾಮೀಜಿ ಆಶೀರ್ವಚನ ನೀಡಿ, ನಮ್ಮ ಸಮಾಜವು ಎಂದಿಗೂ ಪರಾವಲಂಬಿ ಗಳಾಗಬಾರದು. ನಮ್ಮನ್ನು ಬೇರೆಯವರು ನಿಯಂತ್ರಿಸಲು ಅವಕಾಶ ನೀಡಬಾರದು. ನಮ್ಮತನಕ್ಕೆ ಧಕ್ಕೆ ಬಂದಾಗ ನಾವು ಹೋರಾಟಕ್ಕೂ ಸಿದ್ಧರಾಗಬೇಕು ಎಂದರು.

ಡಿ.ವಿ. ಸದಾನಂದ ಗೌಡ ಮಾತನಾಡಿ, ಕಡಬದ ಈ ಕಾರ್ಯಕ್ರಮ ಜಿಲ್ಲೆಯ ಜನರಿಗೆ ಒಕ್ಕಲಿಗ ಸಮುದಾಯದ ಶಕ್ತಿಯ ಸಂದೇಶ ನೀಡಿದೆ. ಸುರೇಶ್‌ ಗೌಡ ಬೈಲು ಮತ್ತು ತಂಡದ ಕಾರ್ಯ ಎಲ್ಲರಿಗೂ ಪ್ರೇರಣೆಯಾಗಿದೆ ಎಂದರು.

ಮಾಜಿ ಉಪಮುಖ್ಯಮಂತ್ರಿ ಅಶ್ವತ್ಥನಾರಾಯಣ, ರಾಜ್ಯ ಒಕ್ಕಲಿಗ ಸಂಘದ ಅಧ್ಯಕ್ಷ ಹನುಮಂತಯ್ಯ, ವಿಧಾನಪರಿಷತ್‌ ಸದಸ್ಯ ಭೋಜೇ ಗೌಡ, ಮಾಜಿ ಶಾಸಕ ಸಂಜೀವ ಮಠಂದೂರು, ಸ್ವಾತಂತ್ರ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡ ಸ್ಮಾರಕ ಸ್ಥಾಪನ ಸಮಿತಿಯ ಅಧ್ಯಕ್ಷ ಕಿರಣ್‌ ಬುಡ್ಲೆಗುತ್ತು ಮಾತನಾಡಿದರು.

ಪ್ರಮುಖರಾದ ರವಿ ಮುಂಗ್ಲಿಮನೆ, ಮೋಹನ್‌ರಾಮ್‌ ಸುಳ್ಳಿ, ಚಿದಾನಂದ ಬೈಲಾಡಿ, ಜಾಕೆ ಮಾಧವ ಗೌಡ, ಲೋಕಯ್ಯ ಗೌಡ, ಪದ್ಮ ಗೌಡ ಬೆಳಾಲು, ನಿತ್ಯಾನಂದ ಮುಂಡೋಡಿ, ಎ.ವಿ. ತೀರ್ಥರಾಮ, ಉಮೇಶ್‌ ಎಂಪಿ., ಡಿ.ಬಿ. ಬಾಲಕೃಷ್ಣ ಗೌಡ, ಪಿ.ಸಿ. ಜಯರಾಮ, ಲಿಂಗಪ್ಪ ಗೌಡ ಅಳಿಕೆ, ಚಂದ್ರಾ ಕೋಲ್ಚಾರು, ಕುಶಾಲಪ್ಪ ಗೌಡ ಪೂವಾಜೆ, ಮೋನಪ್ಪ ಗೌಡ, ರಂಜನ್‌ ಜಿ.ಗೌಡ, ಗುರುದೇವ್‌ ಗೌಡ ಯು.ಬಿ., ವಿಶ್ವನಾಥ ಗೌಡ, ಬಾಲಕೃಷ್ಣ ಗೌಡ ಕೇರಿಮಾರ್‌, ಎ.ವಿ. ನಾರಾಯಣ ಗೌಡ ಅತಿಥಿಗಳಾಗಿದ್ದರು. ಕೇಶವ ಗೌಡ ಅಮೈ, ಗೋಪಾಲಕೃಷ್ಣ ಗೌಡ ಪುಯಿಲ, ಪ್ರಶಾಂತ್‌ ಗೌಡ ಪಂಜೋಡಿ, ಶಿವಪ್ರಸಾದ್‌ ಗೌಡ ಪುತ್ತಿಲ, ತಮ್ಮಯ್ಯ ಗೌಡ, ಮಂಜುನಾಥ ಗೌಡ ಉಪಸ್ಥಿತರಿದ್ದರು. ಶಿವರಾಮ ಗೌಡ ಸ್ವಾಗತಿಸಿ, ಸುರೇಶ್‌ ಗೌಡ ಪ್ರಸ್ತಾವನೆಗೈದರು. ಹಿರಿಯಣ್ಣ ಗೌಡ ವಂದಿಸಿದರು. ಚೇತನ್‌, ಸುಶ್ಮಿತಾ ನಿರೂಪಿಸಿದರು.

ಟಾಪ್ ನ್ಯೂಸ್

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

18-

UV Fusion: ತೇರು ಬೀದಿಗೆ ಬಂದಿದೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.