ಪುತ್ತೂರು ಆಸ್ಪತ್ರೆ ಸಾಮರ್ಥ್ಯ 300 ಹಾಸಿಗೆಗೆ ಏರಿಕೆಯಾಗಲಿ

ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಮೂಲಕ ರಾಜಧಾನಿಗೆ ಸಂಪರ್ಕ ಕಲ್ಪಿಸುತ್ತಿದೆ

Team Udayavani, Mar 21, 2023, 2:35 PM IST

ಪುತ್ತೂರು ಆಸ್ಪತ್ರೆ ಸಾಮರ್ಥ್ಯ 300 ಹಾಸಿಗೆಗೆ ಏರಿಕೆಯಾಗಲಿ

ಪುತ್ತೂರು: ಭವಿಷ್ಯದಲ್ಲಿ ಜಿಲ್ಲೆಯಾಗುವ ಅವಕಾಶವನ್ನು ಹೊಂದಿರುವ ಪುತ್ತೂರು ಕೆಲವೊಂದು ವಿಷಯಗಳಲ್ಲಿ ಮಾತ್ರ ಇನ್ನೂ ಹಿಂದೆ ಉಳಿದಿದೆ. ಪುತ್ತೂರಿಗೆ ಸರಕಾರಿ ಮೆಡಿಕಲ್‌ ಕಾಲೇಜು ಮಂಜೂರಾಗಬೇಕೆಂಬುದು ಹಲವು ವರ್ಷಗಳ ಬೇಡಿಕೆ. ಇದಕ್ಕೆ ಪೂರ್ವಭಾವಿಯಾಗಿ ತಾಲೂಕು ಆಸ್ಪತ್ರೆ 100 ಬೆಡ್‌ನಿಂದ 300 ಬೆಡ್‌ಗೆ ಅಭಿವೃದ್ಧಿಗೊಳ್ಳಬೇಕು. ಈ ಬಗ್ಗೆ ಪ್ರಸ್ತಾವನೆಯು ಸರಕಾರದ ಹಂತಕ್ಕೆ ತಲುಪಿ 10 ವರ್ಷಗಳು ಕಳೆದರೂ ಅನುಮೋದನೆ ಮಾತ್ರ ಸಿಕ್ಕಿಲ್ಲ!

ಮಂಡಲ ಉಸ್ತುವಾರಿಯಲ್ಲಿ ಪುತ್ತೂರಿನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಂಚಾರಿ ಆಸ್ಪತ್ರೆ 1928ರಲ್ಲಿ 25 ಬೆಡ್‌ಗಳ ಸರಕಾರಿ ಆಸ್ಪತ್ರೆಯಾಗಿ ಕಾರ್ಯ ಆರಂಭಿಸಿತ್ತು. 1942ರಲ್ಲಿ 33 ಬೆಡ್‌ ಗಳಿಗೆ ವಿಸ್ತರಣೆಯಾಯಿತು. 1950ರಲ್ಲಿ 20 ಹಾಸಿಗೆಗಳನ್ನು ಕಲ್ಪಿಸಿ 53 ಬೆಡ್‌ಗಳ ಆಸ್ಪತ್ರೆಯಾಗಿ ಮೇಲ್ದರ್ಜೆಗೆ ಏರಿಸಲಾಯಿತು. 2000ನೇ ಇಸವಿಯಲ್ಲಿ 100 ಬೆಡ್‌ಗಳ ಆಸ್ಪತ್ರೆಯಾಗಿ ಮತ್ತೆ ಮೇಲ್ದರ್ಜೆಗೆ ಏರಿತ್ತು. ಅನಂತರದಲ್ಲಿ ರೋಗಿಗಳ ಸಂಖ್ಯೆ ವಿಪರೀತ ಏರಿಕೆಯಾಗಿದ್ದರೂ ವ್ಯವಸ್ಥೆಗಳಲ್ಲಿ ನಿರೀಕ್ಷಿತ ಪ್ರಗತಿಯಾಗಿಲ್ಲ.

ಅರ್ಹತೆ, ಅಗತ್ಯತೆ ಆಧಾರದಲ್ಲೇ ಬೇಡಿಕೆಗೆ ದಶ ವರ್ಷ ಸಂದಿದೆ. ತಾಲೂಕು ಆಸ್ಪತ್ರೆ ಮೇಲ್ದರ್ಜೆಗೆ ಏರಬೇಕು ಎಂಬ ಬಗ್ಗೆ ಈಗ ಹೋರಾಟ ಆರಂಭವಾಗಿದೆ. ನಾಲ್ಕಾರು ಬಾರಿ ನೀಲ ನಕಾಶೆ ತಯಾರಿಸಿದ್ದು, 180 ಕೋ.ರೂ.ಪ್ರಸ್ತಾವನೆಯೀಗ 250 ಕೋ.ರೂ.ಗೆ ಹೆಚ್ಚಳವಾಗಿದೆ. ಜತೆಗೆ ಸರಕಾರಿ ಆಸ್ಪತ್ರೆಗೆ ಹಳೆ ಸಬ್‌ ರಿಜಿಸ್ಟ್ರಾರ್‌ ಕಚೇರಿ ಜಾಗವನ್ನು ಆಸ್ಪತ್ರೆಗೆ ಸೇರ್ಪಡೆಗೊಳಿಸಲಾಗಿದೆ. ಹೀಗಾಗಿ ಬಹು ಅಪೇಕ್ಷಿತ ಬೇಡಿಕೆಗೆ ಮನ್ನಣೆ ಸಿಗಬೇಕು ಅನ್ನುವುದು ಪುತ್ತೂರಿಗರ ಹಕ್ಕೋತ್ತಾಯ.

ಶಕುಂತಳಾ ಟಿ. ಶೆಟ್ಟಿ, ಸಂಜೀವ ಮಠಂದೂರು ಅವಧಿಯಲ್ಲಿ ಇದಕ್ಕಾಗಿ ಪ್ರಯತ್ನ ನಡೆದಿವೆ. ಆದರೆ ಫಲಪ್ರದವಾಗಿಲ್ಲ. ಅಚ್ಚರಿ ಸಂಗತಿ ಅಂದರೆ, ಶಕುಂತಳಾ ಶೆಟ್ಟಿ ಶಾಸಕರಾಗಿದ್ದ ಅವಧಿಯಲ್ಲಿ ಅವರದ್ದೇ ಪಕ್ಷದ ಸರಕಾರ ಇತ್ತು. ಸಂಜೀವ ಮಠಂದೂರು ಅವಧಿಯಲ್ಲಿಯೂ ಅವರದ್ದೇ ಪಕ್ಷದ ಸರಕಾರ ಇದೆ. ಆದರೂ ಪ್ರಸ್ತಾವನೆಯ ಕಡತ ಸರಕಾರದ ಹಂತದಲ್ಲಿಯೇ ಬಾಕಿ ಆಗಿದೆ.

ಕೇಂದ್ರ ಸ್ಥಾನ
ಕೇರಳದ ಗಡಿ, ಸುಳ್ಯ, ಬಂಟ್ವಾಳ, ಬೆಳ್ತಂಗಡಿ, ಕಡಬ, ವಿಟ್ಲ ಗಡಿ ಭಾಗಕ್ಕೆ ಹೊಂದಿಕೊಂಡಿರುವ ಪುತ್ತೂರು ತಾಲೂಕು ಮಾಣಿ- ಮೈಸೂರು, ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಮೂಲಕ ರಾಜಧಾನಿಗೆ ಸಂಪರ್ಕ ಕಲ್ಪಿಸುತ್ತಿದೆ. ತನ್ನ ಗಡಿ ವ್ಯಾಪ್ತಿಯ ನಾಲ್ಕು ತಾಲೂಕುಗಳಿಗೆ ಕೇಂದ್ರ ಸ್ಥಾನವಾಗಲು ಅರ್ಹತೆ ಹೊಂದಿದೆ. ಹೀಗಾಗಿ ತಾಲೂಕು ಆಸ್ಪತ್ರೆಗೆ ದಿನಂಪ್ರತಿ ಭೇಟಿ ನೀಡುವವರ ಸಂಖ್ಯೆ ಹೆಚ್ಚಾಗುತ್ತಿದೆ. ಜತೆಗೆ ಮೆಡಿಕಲ್‌ ಕಾಲೇಜಿನ ಬೇಡಿಕೆಯು ಇದೆ. ಅವೆಲ್ಲದಕ್ಕಿಂತ ಪೂರಕವಾಗಿ ಗ್ರಾಮಾಂತರ ಜಿಲ್ಲಾ ಕೇಂದ್ರ ಸ್ಥಾಪನೆಯ ಬೇಡಿಕೆಯು ಇದೆ. ಈ ಮೂರು ಕೂಡ ಒಂದನ್ನೊಂದು ಅವಲಂಬಿಸಿದೆ.

ಅನುಕೂಲ ಏಕೆ
ಮಡಿಕೇರಿ ಗಡಿಭಾಗದಿಂದ ಬಂಟ್ವಾಳ ಗಡಿ ತನಕ ಸುಸಜ್ಜಿತ ಸರಕಾರಿ ಆಸ್ಪತ್ರೆ ಇಲ್ಲ. ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿ ಹಾದು ಹೋಗಿರುವ ಈ ಮೂರು ತಾಲೂಕಿನ ಜನರು ತುರ್ತು ಸಂದರ್ಭದಲ್ಲಿ ಮಂಗಳೂರಿನ ವೆನ್ಲಾಕ್‌ ಆಸ್ಪತ್ರೆಯನ್ನು ಸಂಪರ್ಕಿಸುವ ಅನಿವಾರ್ಯ ಇದೆ. 100 ಬೆಡ್‌ ಸೌಲಭ್ಯ ಹೊಂದಿರುವ ಪುತ್ತೂರು ಆಸ್ಪತ್ರೆಯನ್ನು 300 ಬೆಡ್‌ಗೆ ಏರಿಸಿದರೆ ಕಾಸರಗೋಡು, ಕೊಡಗು, ಪುತ್ತೂರು, ಸುಳ್ಯ, ಬೆಳ್ತಂಗಡಿ, ಬಂಟ್ವಾಳ ತಾಲೂಕಿನವರಿಗೆ ಹೆಚ್ಚು ಪ್ರಯೋಜನ. ಜತೆಗೆ ಈ ಭಾಗದ ಜನರು ವೆನ್ಲಾಕ್‌ ಆಸ್ಪತ್ರೆಯನ್ನೇ ಅವಲಂಬಿಸಬೇಕಾದ ಅನಿವಾರ್ಯತೆ ಇಲ್ಲ.

ಜಿಲ್ಲೆಯ ಎರಡನೆ ಮಹಿಳಾ ಠಾಣೆ, ಪುತ್ತೂರು ಸುಳ್ಯ, ಕಡಬ, ಬೆಳ್ತಂಗಡಿ, ಬಂಟ್ವಾಳವನ್ನು ಒಳಗೊಂಡ ಸಹಾಯಕ ಆಯುಕ್ತರ ಉಪವಿಭಾಗ ಕಚೇರಿ, ಮೂರು ತಾಲೂಕು ವ್ಯಾಪ್ತಿಗೆ ಸೇರಿರುವ ಆರ್‌ಟಿಒ ಕಚೇರಿ, ಪ್ರಾಥಮಿಕ ಶಿಕ್ಷಣದಿಂದ ಎಂಜಿನಿಯರ್‌ ತನಕ ವ್ಯಾಸಾಂಗದ ಶಿಕ್ಷಣ ಸಂಸ್ಥೆಗಳು ಇಲ್ಲಿವೆ. ಸಾಧಾರಣವಾಗಿ ದಿನವೊಂದಕ್ಕೆ 20 ಸಾವಿರಕ್ಕೂ ಅಧಿಕ ಮಂದಿ ವಿವಿಧ ವ್ಯವಹಾರಗಳಿಗಾಗಿ ಪುತ್ತೂರು ನಗರಕ್ಕೆ ಪ್ರವೇಶಿಸುತ್ತಾರೆ. ಕಾಸರಗೋಡು, ಕೊಡಗು ಜಿಲ್ಲೆಯಿಂದಲೂ ವಾಣಿಜ್ಯ, ಶಿಕ್ಷಣ, ವೈದ್ಯಕೀಯ ನೆಲೆಯಲ್ಲಿ ಪುತ್ತೂರನ್ನು ಆಶ್ರಯಿಸುವವರ ಸಂಖ್ಯೆ ಗರಿಷ್ಠ ಪ್ರಮಾಣದಲ್ಲಿದೆ.

*ಕಿರಣ್‌ ಪ್ರಸಾದ್‌ ಕುಂಡಡ್ಕ

ಟಾಪ್ ನ್ಯೂಸ್

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

10-bengaluru’

Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಸೆರೆ

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Viral: ಕಚ್ಚಿದ ಹಾವನ್ನೇ ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು

Video Viral: ಕಚ್ಚಿದ ಹಾವನ್ನೇ ಕೊಂದು ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು

IPL 2024; Suresh Raina made an important statement about Dhoni’s IPL future

IPL 2024; ಧೋನಿ ಐಪಿಎಲ್ ಭವಿಷ್ಯದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸುರೇಶ್ ರೈನಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

CAR-D

Sullia: ರಸ್ತೆ ಬದಿ ನಿಲ್ಲಿಸಿದ್ದ ಕಾರಿಗೆ ಕಂಟೈನರ್‌ ಢಿಕ್ಕಿ

Belthangady ಪಿಕಪ್‌ ಹಿಮ್ಮುಖವಾಗಿ ಚಲಿಸಿ ವ್ಯಕ್ತಿ ಸಾವು

Belthangady ಪಿಕಪ್‌ ಹಿಮ್ಮುಖವಾಗಿ ಚಲಿಸಿ ವ್ಯಕ್ತಿ ಸಾವು

Sullia ವಿದ್ಯುತ್‌ ಲೈನ್‌ಗೆ ಬಿದ್ದ ಮರ; ಹಾನಿ,ವಿದ್ಯುತ್‌ ವ್ಯತ್ಯಯ

Sullia ವಿದ್ಯುತ್‌ ಲೈನ್‌ಗೆ ಬಿದ್ದ ಮರ; ಹಾನಿ,ವಿದ್ಯುತ್‌ ವ್ಯತ್ಯಯ

Uppinangady ದ್ವಿಚಕ್ರ ವಾಹನಕ್ಕೆ ಟ್ಯಾಂಕರ್‌ ಢಿಕ್ಕಿ; ಮಗು ಸಹಿತ ದಂಪತಿಗೆ ಗಾಯ

Uppinangady ದ್ವಿಚಕ್ರ ವಾಹನಕ್ಕೆ ಟ್ಯಾಂಕರ್‌ ಢಿಕ್ಕಿ; ಮಗು ಸಹಿತ ದಂಪತಿಗೆ ಗಾಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

10-bengaluru’

Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಸೆರೆ

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.