
ಪುತ್ತೂರು ಆಸ್ಪತ್ರೆ ಸಾಮರ್ಥ್ಯ 300 ಹಾಸಿಗೆಗೆ ಏರಿಕೆಯಾಗಲಿ
ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಮೂಲಕ ರಾಜಧಾನಿಗೆ ಸಂಪರ್ಕ ಕಲ್ಪಿಸುತ್ತಿದೆ
Team Udayavani, Mar 21, 2023, 2:35 PM IST

ಪುತ್ತೂರು: ಭವಿಷ್ಯದಲ್ಲಿ ಜಿಲ್ಲೆಯಾಗುವ ಅವಕಾಶವನ್ನು ಹೊಂದಿರುವ ಪುತ್ತೂರು ಕೆಲವೊಂದು ವಿಷಯಗಳಲ್ಲಿ ಮಾತ್ರ ಇನ್ನೂ ಹಿಂದೆ ಉಳಿದಿದೆ. ಪುತ್ತೂರಿಗೆ ಸರಕಾರಿ ಮೆಡಿಕಲ್ ಕಾಲೇಜು ಮಂಜೂರಾಗಬೇಕೆಂಬುದು ಹಲವು ವರ್ಷಗಳ ಬೇಡಿಕೆ. ಇದಕ್ಕೆ ಪೂರ್ವಭಾವಿಯಾಗಿ ತಾಲೂಕು ಆಸ್ಪತ್ರೆ 100 ಬೆಡ್ನಿಂದ 300 ಬೆಡ್ಗೆ ಅಭಿವೃದ್ಧಿಗೊಳ್ಳಬೇಕು. ಈ ಬಗ್ಗೆ ಪ್ರಸ್ತಾವನೆಯು ಸರಕಾರದ ಹಂತಕ್ಕೆ ತಲುಪಿ 10 ವರ್ಷಗಳು ಕಳೆದರೂ ಅನುಮೋದನೆ ಮಾತ್ರ ಸಿಕ್ಕಿಲ್ಲ!
ಮಂಡಲ ಉಸ್ತುವಾರಿಯಲ್ಲಿ ಪುತ್ತೂರಿನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಂಚಾರಿ ಆಸ್ಪತ್ರೆ 1928ರಲ್ಲಿ 25 ಬೆಡ್ಗಳ ಸರಕಾರಿ ಆಸ್ಪತ್ರೆಯಾಗಿ ಕಾರ್ಯ ಆರಂಭಿಸಿತ್ತು. 1942ರಲ್ಲಿ 33 ಬೆಡ್ ಗಳಿಗೆ ವಿಸ್ತರಣೆಯಾಯಿತು. 1950ರಲ್ಲಿ 20 ಹಾಸಿಗೆಗಳನ್ನು ಕಲ್ಪಿಸಿ 53 ಬೆಡ್ಗಳ ಆಸ್ಪತ್ರೆಯಾಗಿ ಮೇಲ್ದರ್ಜೆಗೆ ಏರಿಸಲಾಯಿತು. 2000ನೇ ಇಸವಿಯಲ್ಲಿ 100 ಬೆಡ್ಗಳ ಆಸ್ಪತ್ರೆಯಾಗಿ ಮತ್ತೆ ಮೇಲ್ದರ್ಜೆಗೆ ಏರಿತ್ತು. ಅನಂತರದಲ್ಲಿ ರೋಗಿಗಳ ಸಂಖ್ಯೆ ವಿಪರೀತ ಏರಿಕೆಯಾಗಿದ್ದರೂ ವ್ಯವಸ್ಥೆಗಳಲ್ಲಿ ನಿರೀಕ್ಷಿತ ಪ್ರಗತಿಯಾಗಿಲ್ಲ.
ಅರ್ಹತೆ, ಅಗತ್ಯತೆ ಆಧಾರದಲ್ಲೇ ಬೇಡಿಕೆಗೆ ದಶ ವರ್ಷ ಸಂದಿದೆ. ತಾಲೂಕು ಆಸ್ಪತ್ರೆ ಮೇಲ್ದರ್ಜೆಗೆ ಏರಬೇಕು ಎಂಬ ಬಗ್ಗೆ ಈಗ ಹೋರಾಟ ಆರಂಭವಾಗಿದೆ. ನಾಲ್ಕಾರು ಬಾರಿ ನೀಲ ನಕಾಶೆ ತಯಾರಿಸಿದ್ದು, 180 ಕೋ.ರೂ.ಪ್ರಸ್ತಾವನೆಯೀಗ 250 ಕೋ.ರೂ.ಗೆ ಹೆಚ್ಚಳವಾಗಿದೆ. ಜತೆಗೆ ಸರಕಾರಿ ಆಸ್ಪತ್ರೆಗೆ ಹಳೆ ಸಬ್ ರಿಜಿಸ್ಟ್ರಾರ್ ಕಚೇರಿ ಜಾಗವನ್ನು ಆಸ್ಪತ್ರೆಗೆ ಸೇರ್ಪಡೆಗೊಳಿಸಲಾಗಿದೆ. ಹೀಗಾಗಿ ಬಹು ಅಪೇಕ್ಷಿತ ಬೇಡಿಕೆಗೆ ಮನ್ನಣೆ ಸಿಗಬೇಕು ಅನ್ನುವುದು ಪುತ್ತೂರಿಗರ ಹಕ್ಕೋತ್ತಾಯ.
ಶಕುಂತಳಾ ಟಿ. ಶೆಟ್ಟಿ, ಸಂಜೀವ ಮಠಂದೂರು ಅವಧಿಯಲ್ಲಿ ಇದಕ್ಕಾಗಿ ಪ್ರಯತ್ನ ನಡೆದಿವೆ. ಆದರೆ ಫಲಪ್ರದವಾಗಿಲ್ಲ. ಅಚ್ಚರಿ ಸಂಗತಿ ಅಂದರೆ, ಶಕುಂತಳಾ ಶೆಟ್ಟಿ ಶಾಸಕರಾಗಿದ್ದ ಅವಧಿಯಲ್ಲಿ ಅವರದ್ದೇ ಪಕ್ಷದ ಸರಕಾರ ಇತ್ತು. ಸಂಜೀವ ಮಠಂದೂರು ಅವಧಿಯಲ್ಲಿಯೂ ಅವರದ್ದೇ ಪಕ್ಷದ ಸರಕಾರ ಇದೆ. ಆದರೂ ಪ್ರಸ್ತಾವನೆಯ ಕಡತ ಸರಕಾರದ ಹಂತದಲ್ಲಿಯೇ ಬಾಕಿ ಆಗಿದೆ.
ಕೇಂದ್ರ ಸ್ಥಾನ
ಕೇರಳದ ಗಡಿ, ಸುಳ್ಯ, ಬಂಟ್ವಾಳ, ಬೆಳ್ತಂಗಡಿ, ಕಡಬ, ವಿಟ್ಲ ಗಡಿ ಭಾಗಕ್ಕೆ ಹೊಂದಿಕೊಂಡಿರುವ ಪುತ್ತೂರು ತಾಲೂಕು ಮಾಣಿ- ಮೈಸೂರು, ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಮೂಲಕ ರಾಜಧಾನಿಗೆ ಸಂಪರ್ಕ ಕಲ್ಪಿಸುತ್ತಿದೆ. ತನ್ನ ಗಡಿ ವ್ಯಾಪ್ತಿಯ ನಾಲ್ಕು ತಾಲೂಕುಗಳಿಗೆ ಕೇಂದ್ರ ಸ್ಥಾನವಾಗಲು ಅರ್ಹತೆ ಹೊಂದಿದೆ. ಹೀಗಾಗಿ ತಾಲೂಕು ಆಸ್ಪತ್ರೆಗೆ ದಿನಂಪ್ರತಿ ಭೇಟಿ ನೀಡುವವರ ಸಂಖ್ಯೆ ಹೆಚ್ಚಾಗುತ್ತಿದೆ. ಜತೆಗೆ ಮೆಡಿಕಲ್ ಕಾಲೇಜಿನ ಬೇಡಿಕೆಯು ಇದೆ. ಅವೆಲ್ಲದಕ್ಕಿಂತ ಪೂರಕವಾಗಿ ಗ್ರಾಮಾಂತರ ಜಿಲ್ಲಾ ಕೇಂದ್ರ ಸ್ಥಾಪನೆಯ ಬೇಡಿಕೆಯು ಇದೆ. ಈ ಮೂರು ಕೂಡ ಒಂದನ್ನೊಂದು ಅವಲಂಬಿಸಿದೆ.
ಅನುಕೂಲ ಏಕೆ
ಮಡಿಕೇರಿ ಗಡಿಭಾಗದಿಂದ ಬಂಟ್ವಾಳ ಗಡಿ ತನಕ ಸುಸಜ್ಜಿತ ಸರಕಾರಿ ಆಸ್ಪತ್ರೆ ಇಲ್ಲ. ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿ ಹಾದು ಹೋಗಿರುವ ಈ ಮೂರು ತಾಲೂಕಿನ ಜನರು ತುರ್ತು ಸಂದರ್ಭದಲ್ಲಿ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯನ್ನು ಸಂಪರ್ಕಿಸುವ ಅನಿವಾರ್ಯ ಇದೆ. 100 ಬೆಡ್ ಸೌಲಭ್ಯ ಹೊಂದಿರುವ ಪುತ್ತೂರು ಆಸ್ಪತ್ರೆಯನ್ನು 300 ಬೆಡ್ಗೆ ಏರಿಸಿದರೆ ಕಾಸರಗೋಡು, ಕೊಡಗು, ಪುತ್ತೂರು, ಸುಳ್ಯ, ಬೆಳ್ತಂಗಡಿ, ಬಂಟ್ವಾಳ ತಾಲೂಕಿನವರಿಗೆ ಹೆಚ್ಚು ಪ್ರಯೋಜನ. ಜತೆಗೆ ಈ ಭಾಗದ ಜನರು ವೆನ್ಲಾಕ್ ಆಸ್ಪತ್ರೆಯನ್ನೇ ಅವಲಂಬಿಸಬೇಕಾದ ಅನಿವಾರ್ಯತೆ ಇಲ್ಲ.
ಜಿಲ್ಲೆಯ ಎರಡನೆ ಮಹಿಳಾ ಠಾಣೆ, ಪುತ್ತೂರು ಸುಳ್ಯ, ಕಡಬ, ಬೆಳ್ತಂಗಡಿ, ಬಂಟ್ವಾಳವನ್ನು ಒಳಗೊಂಡ ಸಹಾಯಕ ಆಯುಕ್ತರ ಉಪವಿಭಾಗ ಕಚೇರಿ, ಮೂರು ತಾಲೂಕು ವ್ಯಾಪ್ತಿಗೆ ಸೇರಿರುವ ಆರ್ಟಿಒ ಕಚೇರಿ, ಪ್ರಾಥಮಿಕ ಶಿಕ್ಷಣದಿಂದ ಎಂಜಿನಿಯರ್ ತನಕ ವ್ಯಾಸಾಂಗದ ಶಿಕ್ಷಣ ಸಂಸ್ಥೆಗಳು ಇಲ್ಲಿವೆ. ಸಾಧಾರಣವಾಗಿ ದಿನವೊಂದಕ್ಕೆ 20 ಸಾವಿರಕ್ಕೂ ಅಧಿಕ ಮಂದಿ ವಿವಿಧ ವ್ಯವಹಾರಗಳಿಗಾಗಿ ಪುತ್ತೂರು ನಗರಕ್ಕೆ ಪ್ರವೇಶಿಸುತ್ತಾರೆ. ಕಾಸರಗೋಡು, ಕೊಡಗು ಜಿಲ್ಲೆಯಿಂದಲೂ ವಾಣಿಜ್ಯ, ಶಿಕ್ಷಣ, ವೈದ್ಯಕೀಯ ನೆಲೆಯಲ್ಲಿ ಪುತ್ತೂರನ್ನು ಆಶ್ರಯಿಸುವವರ ಸಂಖ್ಯೆ ಗರಿಷ್ಠ ಪ್ರಮಾಣದಲ್ಲಿದೆ.
*ಕಿರಣ್ ಪ್ರಸಾದ್ ಕುಂಡಡ್ಕ
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಜ್ಜಿಯನ್ನು ಬಡಿದು ಕೊಂದಿದ್ದ ಪ್ರಕರಣ: ಜೈಲಿನಲ್ಲಿದ್ದ ಆರೋಪಿ ಮೊಮ್ಮಗ ಆಸ್ಪತ್ರೆಯಲ್ಲಿ ಸಾವು

Road Side ತ್ಯಾಜ್ಯ ಎಸೆದವರ ಪತ್ತೆ ಹಚ್ಚಿ ಅವರಿಂದಲೇ ಶುಚಿಗೊಳಿಸಿದ ಕೊಳ್ನಾಡಿನ ಯುವಕರು

Charmadi Ghat ಬಸ್-ಸ್ಕೂಟರ್ ಅಪಘಾತ: ಓರ್ವ ಸಾವು, ಸಹಸವಾರ ಗಂಭೀರ

Belthangady: ರಸ್ತೆ ವಿಚಾರದಲ್ಲಿ ಕುಟುಂಬದ ನಡುವೆ ಹೊಡೆದಾಟ

Sulliapadavu: ಮರದ ದಿಮ್ಮಿ ಮೈಮೇಲೆ ಬಿದ್ದು ವ್ಯಕ್ತಿ ಮೃತ್ಯು
MUST WATCH

ಪಾಕ್ ಆಕ್ರಮಿತ ಪ್ರದೇಶದಲ್ಲಿ ತಲೆಯೆತ್ತಿದ ಶಾರದಾ ಪೀಠ | ಏನಿದರ ಹಿನ್ನೆಲೆ ?

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ
ಹೊಸ ಸೇರ್ಪಡೆ

ChatGPT: ಪ್ರಧಾನಿ ಮೋದಿ ಭೇಟಿಯಾದ ಚಾಟ್ ಜಿಪಿಟಿ ಸೃಷ್ಟಿಕರ್ತ ಸ್ಯಾಮ್ ಆಲ್ಟ್ಮನ್

Singer arrested : ಅಪ್ರಾಪ್ತೆ ಮೇಲೆ ಅತ್ಯಾಚಾರಗೈದು,ಆಕ್ಷೇಪಾರ್ಹ ಫೋಟೋ ಪೋಸ್ಟ್; ಗಾಯಕ ಬಂಧನ

HUNSUR: ಜಿಂಕೆಯನ್ನು ಬೇಟೆಯಾಡಿ ಮಾಂಸ ತಿನ್ನುತ್ತಿರುವ ಚಿರತೆ; ವಿಡಿಯೋ

ಟಿಕೆಟ್ ಖಚಿತ, ಕಾಮಿಡಿ ಉಚಿತ, ಖುಷಿ ನಿಶ್ಚಿತ!: ‘ದರ್ಬಾರ್’ ಸಿನಿಮಾ ಇಂದು ಬಿಡುಗಡೆ

ಹೊಸಬರ ಗದಾಯುದ್ಧ ಬಿಡುಗಡೆ