“ಜಲಸಂರಕ್ಷಣೆ ಒಲವು ಎಲ್ಲೆಡೆ ಪಸರಿಸಲಿ’

ನಾರಾವಿ: ನದಿಗಳ ಸಾಂಪ್ರದಾಯಿಕ ಕಟ್ಟ ನಿರ್ಮಾಣಕ್ಕೆ ಚಾಲನೆ

Team Udayavani, Dec 10, 2019, 4:02 AM IST

ed-17

ವೇಣೂರು: ಜನಸಂಖ್ಯೆ ಹೆಚ್ಚಳವಾಗುತ್ತಿದ್ದಂತೆ ನೀರಿನ ಬೇಡಿಕೆಯೂ ಹೆಚ್ಚಾಗುತ್ತಿದೆ. ಮುಂದಿನ ದಿನಗಳಲ್ಲಿ ನೀರಿನ ಸಮಸ್ಯೆ ಕಾಡದಿರಬೇಕಾದರೆ ಅಂತರ್ಜಲ ಮಟ್ಟ ಹೆಚ್ಚಳವಾಗಬೇಕು. ನದಿಗಳಲ್ಲಿ ಹರಿಯುವ ನೀರನ್ನು ತಡೆಯುವ ಎನ್ನೆಸ್ಸೆಸ್‌ನ ಕಾರ್ಯ ಎಲ್ಲರಿಗೂ ಸ್ಫೂರ್ತಿ ದಾಯಕ. ಈ ಮೂಲಕ ಜಲಸಂರಕ್ಷಣೆ ಒಲವು ಎಲ್ಲೆಡೆ ಪಸರಿಸಲಿ ಎಂದು ತಹಶೀಲ್ದಾರ್‌ ಗಣಪತಿ ಶಾಸ್ತ್ರಿ ಹೇಳಿದರು.

ಮೂಡುಬಿದಿರೆ ಆಳ್ವಾಸ್‌ ಕಾಲೇಜು ಎನ್ನೆಸ್ಸೆಸ್‌ ಘಟಕ, ನಾರಾವಿ ಗ್ರಾ.ಪಂ., ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನ, ಊರವರ ಸಹಕಾರದಲ್ಲಿ ನಾರಾವಿ ಜಿ.ಪಂ. ಸದಸ್ಯ ಪಿ. ಧರಣೇಂದ್ರ ಕುಮಾರ್‌ ನೇತೃತ್ವದಲ್ಲಿ ಸೋಮವಾರ ನಾರಾವಿ ಫಲ್ಗುಣಿ ನದಿಗೆ ಜಲ ಸಾಕ್ಷರತೆ ಮೂಡಿಸುವ ಸಾಂಪ್ರದಾಯಿಕ ಕಟ್ಟ ನಿರ್ಮಾಣಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಜಿ.ಪಂ. ಸದಸ್ಯ ಪಿ. ಧರಣೇಂದ್ರ ಕುಮಾರ್‌ ಮಾತ ನಾಡಿ, ಕಳೆದ ಬಾರಿ ವಿವಿಧ ಗ್ರಾಮದ ಸುಮಾರು 10 ಕಡೆಗಳಲ್ಲಿ ವಿವಿಧ ಕಾಲೇಜಿನ ಎನ್ನೆನ್ನೆಸ್‌ ವಿದ್ಯಾರ್ಥಿಗಳ ಸಹಕಾರದಲ್ಲಿ ಸಾಂಪ್ರದಾಯಿಕ ಕಟ್ಟ ನಿರ್ಮಿಸಲಾಗಿತ್ತು. ಈ ಬಾರಿ ಈಗಾಗಲೇ 19 ಗ್ರಾ.ಪಂ.ಗಳ 50 ಕಡೆಗಳಲ್ಲಿ ಕಟ್ಟ ನಿರ್ಮಿಸಲು ಬೇಡಿಕೆ ಬಂದಿದೆ. ಕೃಷಿಕರು, ವಿವಿಧ ಕಾಲೇಜುಗಳ ಎನ್ನೆನ್ನೆಸ್‌ ವಿದ್ಯಾರ್ಥಿ ಗಳು, ಜನಪ್ರತಿನಿಧಿಗಳು, ಅಧಿಕಾರಿಗಳ ಸಹಕಾರದಲ್ಲಿ ಕಟ್ಟ ನಿರ್ಮಾಣ ಮಾಡಲಾಗು ವುದು. ಕೃಷಿ ಇಲಾಖೆ, ಜಲಾನಯನ, ಜಿ.ಪಂ. ಎಂಜಿನಿಯರಿಂಗ್‌ ವಿಭಾಗದಿಂದ ಅಲ್ಲಲ್ಲಿ ನಿರ್ಮಿಸಲಾದ ಕಿಂಡಿ ಅಣೆಕಟ್ಟುಗಳಿಗೆ ಹಲಗೆ ಹಾಕಿ ಪುನಶ್ಚೇತನಗೊಳಿಸುವ ಕಾರ್ಯ ಮಾಡಲಾಗುವುದು ಎಂದು ತಿಳಿಸಿದರು.

ಆಳ್ವಾಸ್‌ ಕಾಲೇಜಿನ ಎನ್ನೆಸ್ಸೆಸ್‌ ಘಟಕದ ಶಿಬಿರಾಧಿಕಾರಿ ಪ್ರೊ| ವಸಂತ್‌ ಮಾತನಾಡಿ, ನಮ್ಮ ಘಟಕದಿಂದ ಈ ಬಾರಿ 7 ಕಡೆಗಳಲ್ಲಿ ನದಿಗೆ ಕಟ್ಟ ನಿರ್ಮಿಸುವ ಯೋಜನೆ ಇದೆ. ಕಳೆದ 10 ವರ್ಷಗಳಿಂದ ನಮ್ಮ ಘಟಕವು ಈ ಕಾರ್ಯ ಮಾಡುತ್ತಿದ್ದು, ಜನಮನ್ನಣೆ ವ್ಯಕ್ತವಾಗುತ್ತಿದೆ. ಘಟಕದಿಂದ ಜಲಜಾಗೃತಿ ಮೂಡಿಸಿರುವ ತೃಪ್ತಿ ಇದೆ ಎಂದರು.

ಆಳ್ವಾಸ್‌ ಕಾಲೇಜಿನ ಸುಮಾರು 100 ಮಂದಿ ಎನ್ನೆಸ್ಸೆಸ್‌ ವಿದ್ಯಾರ್ಥಿ – ವಿದ್ಯಾರ್ಥಿನಿಯರು ಜಲಸಂರಕ್ಷಣೆಯ ಶ್ರಮದಾನದಲ್ಲಿ ಪಾಲ್ಗೊಂಡಿದ್ದರು. ನಾರಾವಿ ಗ್ರಾ.ಪಂ. ಅಧ್ಯಕ್ಷ ರವೀಂದ್ರ ಪೂಜಾರಿ, ಸದಸ್ಯರು, ಕಂದಾಯ ನಿರೀಕ್ಷಕ ಪಾವಡಪ್ಪ ದೊಡ್ಡಮನಿ, ಗ್ರಾಮಲೆಕ್ಕಿಗರಾದ ನಾರಾಯಣ ಕುಲಾಲ್‌, ಅಕ್ಷತ್‌, ಸುಜಿತ್‌, ಶಿಬಿರಾಧಿ ಕಾರಿಗಳಾದ ಪ್ರೊ| ವಿನೋದ್‌ ಕುಮಾರ್‌, ಪ್ರೊ| ದೀಕ್ಷಿತಾ, ಪ್ರೊ| ಸಂಗೀತಾ ಶ್ಯಾನುಭೋಗ್‌ ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.

ಹಾರೆ ಹಿಡಿದ ತಹಶೀಲ್ದಾರ್‌
ಜಲಸಂರಕ್ಷಣೆ ಎಂಬುದು ಪುಣ್ಯ ಕಾರ್ಯ. ಜಲಸಾಕ್ಷರತೆಯ ಮನಸ್ಥಿತಿ ಎಲ್ಲ ವಿದ್ಯಾರ್ಥಿಗಳಲ್ಲಿ ಹಾಗೂ ಸಾರ್ವಜನಿಕರಲ್ಲಿ ಮೂಡಬೇಕು ಎಂದು ತಿಳಿಸಿದ ತಹಶೀಲ್ದಾರ್‌ ತಾವೇ ಹಾರೆ-ಪಿಕ್ಕಾಸು ಹಿಡಿಯುವ ಮೂಲಕ ಕಟ್ಟ ನಿರ್ಮಾಣ ಕಾರ್ಯದಲ್ಲಿ ಪಾಲ್ಗೊಂಡು ವಿದ್ಯಾರ್ಥಿಗಳನ್ನು ಹುರಿದುಂಬಿಸಿದರು. ತಹಶೀಲ್ದಾರ್‌ ಕಳೆದ ಬಾರಿಯೂ ವೇಣೂರಿನ ಹಲವು ಕಡೆಗಳಲ್ಲಿ ಸಾಂಪ್ರದಾಯಿಕ ಕಟ್ಟ ನಿರ್ಮಾಣದಲ್ಲಿ ಪಾಲ್ಗೊಂಡಿದ್ದರು.

ಪೋಲು ತಡೆಗೆ ಕ್ರಮ
ಉಚಿತವಾಗಿ ಒದಗಿಸಲಾಗಿರುವ ಕೃಷಿ ನೀರಾವರಿ ವಿದ್ಯುತ್‌ ವ್ಯವಸ್ಥೆಯಲ್ಲಿ ನೀರನ್ನು ಮಿತವ್ಯಯವಾಗಿ ಬಳಸಬೇಕಿದೆ. ಬೇಸಗೆ ಕಾಲದಲ್ಲಿ ನೀರಿನ ಬೇಡಿಕೆ ಹೆಚ್ಚಾಗುತ್ತದೆ. ನೀರಿನ ಪೋಲನ್ನು ತಪ್ಪಿಸಲು ನಿಯಂತ್ರಣ ಹೇರುವ ಬಗ್ಗೆ ಚಿಂತನೆ ನಡೆಸಲಾಗಿದೆ
– ಗಣಪತಿ ಶಾಸ್ತ್ರಿ, ತಹಶೀಲ್ದಾರ್‌

ಟಾಪ್ ನ್ಯೂಸ್

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.