ಕಲ್ಲುಗುಡ್ಡೆ-ಕಡಬ ಮಧ್ಯೆ ಸರಕಾರಿ ಬಸ್‌ ಓಡಾಡಲಿ

ದಿನದ ಮೂರು ಹೊತ್ತು ಬಸ್ಸಿಗಾಗಿ ಸಾರ್ವಜನಿಕರ ಆಗ್ರಹ

Team Udayavani, Jun 15, 2019, 5:00 AM IST

Q-17

ಸಾಂದರ್ಭಿಕ ಚಿತ್ರ

ಕಲ್ಲುಗುಡ್ಡೆ: ನೂತನ ತಾಲೂಕು ಕೇಂದ್ರ ಕಡಬದಿಂದ ನೂಜಿಬಾಳ್ತಿಲ ಗ್ರಾಮದ ಕಲ್ಲುಗುಡ್ಡೆಗೆ ದಿನದ ಮೂರು ಹೊತ್ತು ಸರಕಾರಿ ಬಸ್ಸಿನ ವ್ಯವಸ್ಥೆ ಮಾಡುವಂತೆ ಹಲವು ವರ್ಷಗಳಿಂದ ಆಗ್ರಹಗಳು ಕೇಳಿಬರುತ್ತಿದ್ದರೂ ಬೇಡಿಕೆ ಕನಸಾಗಿಯೇ ಉಳಿದಿದ್ದು, ಈ ಬಾರಿಯಾದರೂ ಇಲ್ಲಿಗೆ ಸಾರಿಗೆ ವ್ಯವಸ್ಥೆ ಮಾಡಿಸುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ. ತಾಲೂಕು ಕೇಂದ್ರ ಕಡಬದಿಂದ ಕೇವಲ 10 ಕಿ.ಮೀ. ದೂರದಲ್ಲಿರುವ ಕಲ್ಲುಗುಡ್ಡೆಗೆ ಇಂದಿಗೂ ಸಾರಿಗೆ ವ್ಯವಸ್ಥೆಯಲ್ಲಿ ಹಿಂದುಳಿದಿದೆ. ಈ ಭಾಗದ ಜನತೆ ಇಂದಿಗೂ ಕಡಬ ಹಾಗೂ ಇತರ ಪ್ರದೇಶಗಳಿಗೆ ಪ್ರಯಾಣಿಸಲು ಖಾಸಗಿ ವಾಹನಗಳನ್ನೇ ಬಳಸುತ್ತಿದ್ದಾರೆ.

ವಿದ್ಯಾರ್ಥಿಗಳಿಗೂ ಸಂಕಟ
ಸರಿಯಾದ ಸಾರಿಗೆ ವ್ಯವಸ್ಥೆ ಇಲ್ಲದೆ ಸಾರ್ವಜನಿಕರು, ವಿದ್ಯಾರ್ಥಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಲ್ಲಿಂದ ಕಡಬ ಹಾಗೂ ಇತರೆಡೆಗೆ ನಿತ್ಯ ಪ್ರಯಾ ಣಿಸುವವರು ಖಾಸಗಿ ವಾಹನವನ್ನೇ ಅವಲಂಭಿಸಬೇಕಾಗಿದ್ದು, ಕೆಲವೊಮ್ಮೆ ನಿಗದಿತ ಸಮಯಕ್ಕೆ ತಲುಪಲಾಗದೇ ತೊಂದರೆ ಅನು ಭವಿಸುತ್ತಿದ್ದಾರೆ. ಶಾಲಾ ಸಮಯಕ್ಕೆ ಹೊಂದಿಕೆಯಾಗುವಂತೆ ಬಸ್‌ ವ್ಯವಸ್ಥೆ ಮಾಡಿದರೆ ಉತ್ತಮ ಎನ್ನುತ್ತಾರೆ ವಿದ್ಯಾರ್ಥಿಗಳು.

ಮೂರು ಹೊತ್ತು ಬಸ್ಸು ಬರಲಿ
ಕಲ್ಲುಗುಡ್ಡೆಯಿಂದ ಬೆಳಗ್ಗೆ 7.15ಕ್ಕೆ ಮಂಗಳೂರಿಗೆ ಕೆ.ಎಸ್‌.ಆರ್‌.ಟಿ.ಸಿ. ಬಸ್ಸೊಂದು ಸಂಚರಿಸುತ್ತಿದ್ದು, ಆ ಬಳಿಕ ಕಡಬ ಭಾಗಕ್ಕೆ ಪ್ರಯಾಣಿಸಲು ಖಾಸಗಿ ವಾಹನವನ್ನೇ ಬಳಸಬೇಕಾಗಿದೆ. ಹೀಗಾಗಿ ಬೆಳಗ್ಗೆ, ಮಧ್ಯಾಹ್ನ ಹಾಗೂ ಸಂಜೆ ಕಲ್ಲುಗುಡ್ಡೆ – ಕಡಬ ಮಧ್ಯೆ ಸರಕಾರಿ ಬಸ್ಸು ಓಡಾಡುವ ವ್ಯವಸ್ಥೆ ಮಾಡುವಂತೆ ಸಾರ್ವಜನಿಕರು ಆಗ್ರಹಿಸುತ್ತಿದ್ದಾರೆ. ಈ ಬಗ್ಗೆ ಗ್ರಾಮಸಭೆಗಳಲ್ಲಿಯೂ ನಿರ್ಣಯ ಕೈಗೊಳ್ಳಲಾಗಿದೆ. ಆದರೆ ಸಾರಿಗೆ ವ್ಯವಸ್ಥೆ ಮಾತ್ರ ಇನ್ನೂ ಲಭ್ಯವಾಗಿಲ್ಲ. ಇನ್ನಾದರೂ ಕಲ್ಲುಗುಡ್ಡೆ-ಕಡಬ ಮಧ್ಯೆ ಸಾರಿಗೆ ವ್ಯವಸ್ಥೆ ಮಾಡಲು ಅಧಿಕಾರಿಗಳು, ಜನಪ್ರತಿನಿಧಿಗಳು ಕ್ರಮಕೈಗೊಳ್ಳಲಿ ಎಂಬುವುದೇ ಗ್ರಾಮಸ್ಥರ ಆಗ್ರಹ.

 ಪರಿಶೀಲಿಸಿ ಕ್ರಮ
ಕಲ್ಲುಗುಡ್ಡೆ ಭಾಗಕ್ಕೆ ಕಡಬದಿಂದ ಯಾವ ಸಮಯದಲ್ಲಿ ಸರಕಾರಿ ಬಸ್ಸಿನ ಅಗತ್ಯವಿದೆ ಎನ್ನುವುದರ ಕುರಿತು ಸ್ಥಳೀಯ ಗ್ರಾಮ ಪಂಚಾಯತ್‌ನಿಂದ ವರದಿ ಕಳುಹಿಸಿಕೊಟ್ಟಲ್ಲಿ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು.
-ಮುರಳೀಧರ್‌, ಕ.ರಾ.ರ.ಸಾ.ನಿ. ಪುತ್ತೂರು.

ಮನವಿ ಸಲ್ಲಿಕೆ
ಸಾರ್ವಜನಿಕರ, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕಡಬ-ಕಲ್ಲುಗುಡ್ಡೆ ಮಧ್ಯೆ ಸರಕಾರಿ ಬಸ್‌ ವ್ಯವಸ್ಥೆಗೆ ಗ್ರಾ.ಪಂ.ನಿಂದ ನಾವು ಪ್ರಯತ್ನಿಸುತ್ತಿದ್ದೇವೆ. ಕೆ.ಎಸ್‌.ಆರ್‌.ಟಿ.ಸಿ. ಪುತ್ತೂರು ವಿಭಾಗಕ್ಕೆ ಕಡಬ-ಕಲ್ಲುಗುಡ್ಡೆ-ಎಂಜಿರ ಮಧ್ಯೆ ಬಸ್‌ನ ವ್ಯವಸ್ಥೆ ಮಾಡುವಂತೆ ಹಾಗೂ ಸಮಯ, ಇತರ ಮಾಹಿತಿಯನ್ನು ಶೀಘ್ರ ಕಳುಹಿಸಿ, ಮನವಿ ಮಾಡಲಾಗುವುದು.
– ಸದಾನಂದ ಗೌಡ, ಅಧ್ಯಕ್ಷರು ಗ್ರಾ.ಪಂ. ನೂಜಿಬಾಳ್ತಿಲ.

ಟಾಪ್ ನ್ಯೂಸ್

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

8-

Kaniyoor: ಕೆರೆ ಸ್ವಚ್ಛಗೊಳಿಸುವಾಗ ಮುಳುಗಿ ವ್ಯಕ್ತಿ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-BVR-1

Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!

1-y-a

Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.