ಆಸ್ತಿ ತೆರಿಗೆ ಪರಿಷ್ಕರಿಸದಂತೆ ಪತ್ರ

ಪುತ್ತೂರು ನಗರಸಭೆ ಸಾಮಾನ್ಯ ಸಭೆಯಲ್ಲಿ ನಿರ್ಣಯ

Team Udayavani, Mar 25, 2022, 9:57 AM IST

aasti

ಪುತ್ತೂರು: ಕೋವಿಡ್‌ನಿಂದ ಜನರು ಆರ್ಥಿಕ ಸಂಕಷ್ಟದಲ್ಲಿದ್ದಾರೆ. ಹೀಗಾಗಿ ಈ ಬಾರಿ ಆಸ್ತಿ ತೆರಿಗೆ ಪರಿಷ್ಕರಿಸದೆ ಹಿಂದಿನ ವರ್ಷದ ತೆರಿಗೆ ದರವನ್ನೇ ಮುಂದುವರಿಸುವಂತೆ ಸರಕಾರಕ್ಕೆ ಪತ್ರ ಬರೆಯಲು ನಗರಸಭೆ ಸಾಮಾನ್ಯ ಸಭೆ ನಿರ್ಧರಿಸಿದೆ.

ಪುತ್ತೂರು ನಗರಸಭೆಯ ಸಾಮಾನ್ಯ ಸಭೆಯು ಅಧ್ಯಕ್ಷ ಜೀವಂಧರ್‌ ಜೈನ್‌ ಅಧ್ಯಕ್ಷತೆಯಲ್ಲಿ ನಗರಸಭೆ ಸಭಾಂಗಣದಲ್ಲಿ ನಡೆಯಿತು. ನಗರ ಸ್ಥಳೀಯ ಸಂಸ್ಥೆಗಳ ಆರ್ಥಿಕ ಸಬಲೀಕರಣ ಕಾಯ್ದೆಗಳನ್ವಯ ಪ್ರತೀ ಹಣಕಾಸು ವರ್ಷದ ಮಾರುಕಟ್ಟೆ ಮಾರ್ಗಸೂಚಿ ಬೆಲೆಗಳನ್ನು ಆಧರಿಸಿ ಆಸ್ತಿ ತೆರಿಗೆ ಪರಿಷ್ಕರಣೆ ಮಾಡಬೇಕಿದ್ದು, ಈ ಬಗ್ಗೆ ಪ್ರಸ್ತಾವಿಸಲಾಯಿತು. ನಗರಸಭೆ ಸದಸ್ಯ ಭಾಮಿ ಅಶೋಕ್‌ ಶೆಣೈ, ವಿಪಕ್ಷ ಸದಸ್ಯ ಶಕ್ತಿ ಸಿನ್ಹಾ ಮಾತನಾಡಿ, ಎರಡು ವರ್ಷ ಗಳ ಕೋವಿಡ್‌ ಸಂಕಷ್ಟದಿಂದ ಜನರು ತೊಂದರೆಯಲ್ಲಿದ್ದಾರೆ. ಹೀಗಾಗಿ ಇನ್ನಷ್ಟು ಹೊರೆ ಆಗುವ ಕಾರಣ ಹಿಂದಿನ ತೆರಿಗೆ ಯನ್ನೇ ಮುಂದುವರಿಸುವಂತೆ ಆಗ್ರಹಿಸಿದರು.

ಸರಕಾರಕ್ಕೆ ಪತ್ರ ಬರೆಯೋಣ ಎಂದು ಜೀವಂಧರ್‌ ಜೈನ್‌ ತಿಳಿಸಿದರು. ಜಿಲ್ಲಾಧಿಕಾರಿಗೆ ಪತ್ರ ನಗರಸಭೆಯಲ್ಲಿ ಬಳಕೆಗೆಂದು 21 ವಿವಿಧ ವಾಹನಗಳಿದ್ದು, ನಿತ್ಯವು ತ್ಯಾಜ್ಯ ನಿರ್ವಹಣೆಯಿಂದ ಆಗಾಗ್ಗೆ ದುರಸ್ತಿ ಮಾಡಬೇಕಾಗುತ್ತದೆ. ನಿಯಮಾವಳಿಯಂತೆ ಸ್ಥಳೀಯ ಪ್ರಾದೇಶಿಕ ಸಾರಿಗೆ ಅಧಿಕಾರಿಯಿಂದ ತಾಂತ್ರಿಕ ವರದಿ ಪಡೆದು ದರಪಟ್ಟಿ/ ಟೆಂಡರ್‌ ಆಹ್ವಾನಿಸಿ ದುರಸ್ತಿ ಪಡಿಸಬೇಕಾಗಿದೆ. 50 ಸಾವಿರ ರೂ.ಗಿಂತ ಅಧಿಕ ಮೊತ್ತದ ದುರಸ್ತಿಗೆ ಡಿಸಿ ಅನುಮತಿ ಬೇಕಾಗಿದೆ. ಈ ವಿಳಂಬ ಕಾರ್ಯದಿಂದ ಘನತ್ಯಾಜ್ಯ ನಿರ್ವಹಣೆಗೆ ಅಡಚಣೆ ಉಂಟಾಗುತ್ತಿದೆ. ಹೀಗಾಗಿ ಸಕಾಲದಲ್ಲಿ ಕಾರ್ಯನಿರ್ವಹಣೆಗೆ ಅನುಕೂಲವಾಗುವಂತೆ ವಾಹನಗಳ ನಿರ್ವಹಣೆಗೆ ತಾ| ಮಟ್ಟ ಅಥವಾ ನಗರಸಭೆ ಹಂತದಲ್ಲಿ ದುರಸ್ತಿ ಕಾರ್ಯಾಗಾರ ನಡೆಸಲು ಡಿಸಿಗೆ ಪ್ರಸ್ತಾವನೆ ಸಲ್ಲಿಸಲು ನಿರ್ಧರಿಸಲಾಯಿತು.

1 ಕೋ.ರೂ.ಕ್ರಿಯಾ ಯೋಜನೆ ಅಮೃತ ನಿರ್ಮಲ ನಗರ ಯೋಜನೆ ಯಡಿ ಪುತ್ತೂರು ನಗರಸಭೆಗೆ 1 ಕೋ. ರೂ. ಅನುದಾನ ಮಂಜೂರುಗೊಂಡಿದ್ದು ಬನ್ನೂರು ಆರ್‌ಟಿಒ ಕಚೇರಿ ಬಳಿಯಿಂದ ನೆಕ್ಕಿಲ ತನಕ 55 ಲಕ್ಷ ರೂ., ನಗರಸಭೆ ವ್ಯಾಪ್ತಿಯಲ್ಲಿ ಪೌರ ಕಾರ್ಮಿಕರ ವಿಶ್ರಾಂತಿಗಾಗಿ ಕಂಟೈನರ್‌ ಅಳವಡಿಕೆ, ನಗರಸಭೆಗೆ 6,000 ಲೀ. ಸಾಮರ್ಥ್ಯದ ಸಕ್ಕಿಂಗ್‌ ಯಂತ್ರ ಖರೀದಿ ಮಾಡಲು ಕ್ರಿಯಾ ಯೋಜನೆಗೆ ಅನುಮೋದನೆ ನೀಡಲಾಯಿತು.

ಉಪಾಧ್ಯಕ್ಷೆ ವಿದ್ಯಾ ಆರ್‌. ಗೌರಿ, ಸ್ಥಾಯೀ ಸಮಿತಿ ಅಧ್ಯಕ್ಷ ಬಾಲಚಂದ್ರ, ಪೌರಾಯುಕ್ತ ಮಧು ಎಸ್‌. ಮನೋಹರ್‌ ಮತ್ತಿತರರು ಉಪಸ್ಥಿತರಿದ್ದರು.

ವೈಜ್ಞಾನಿಕವಾಗಿ ಹಂಪ್ಸ್‌ ಅಳವಡಿಸಿ

ನಗರದ ವಿವಿಧ ಭಾಗದಲ್ಲಿ ಹಂಪ್ಸ್‌ ಅಳವಡಿಸಲಾಗಿದ್ದು, ಕೆಲವೆಡೆ ಅಪಘಾತ ಉಂಟಾಗಿರುವ ಬಗ್ಗೆ ವರದಿಯಾಗಿದೆ. ಹೀಗಾಗಿ ವಾಹನ ಸವಾರರಿಗೆ ಅರಿವು ಆಗುವಂತೆ ಬಣ್ಣ ಬಳಿಕೆಯುವಿಕೆ ಸೇರಿ ವಿವಿಧ ಕ್ರಮ ಕೈಗೊಂಡು ವೈಜ್ಞಾನಿಕ ಮಾದರಿಯಲ್ಲಿ ಹಂಪ್ಸ್‌ ನಿರ್ಮಿಸುವುದು ಸೂಕ್ತ ಎಂದು ಶಕ್ತಿ ಸಿನ್ಹಾ ಸಲಹೆ ನೀಡಿದರು.

ಚರಂಡಿ ದುರಸ್ತಿಗೆ 40 ಲಕ್ಷ ರೂ. ಅನುದಾನ ಸಾಲದು

ನಗರಸಭೆಯ 31 ವಾರ್ಡ್‌ಗಳಲ್ಲಿನ ಚರಂಡಿ, ಮುಖ್ಯ ರಾಜಕಾಲುವೆಯಲ್ಲಿ ಹೂಳೆತ್ತುವ ಕಾರ್ಯವು ಮಳೆಗಾಲದ ಪೂರ್ವಭಾವಿಯಾಗಿ ನಡೆಯಲಿದ್ದು, 40 ಲಕ್ಷ ರೂ. ಅಂದಾಜು ಪಟ್ಟಿಯನ್ನು ಮಂಡಿಸಲಾಯಿತು. ಭಾಮಿ ಅಶೋಕ್‌ ಶೆಣೈ, ಶಕ್ತಿ ಸಿನ್ಹಾ ಪ್ರತಿಕ್ರಿಯಿಸಿ, 40 ಲಕ್ಷ ರೂ. ಕಡಿಮೆ ಆಗಿದೆ. ಮೊತ್ತ ಹೆಚ್ಚಳ ಮಾಡುವಂತೆ ಆಗ್ರಹಿಸಿದರು. 5ರಿಂದ 10 ವಾರ್ಡ್‌ ತನಕ ಕಾಮಗಾರಿಯ ನಿರ್ವಹಣೆಯ ಟೆಂಡರ್‌ ನೀಡುವಂತೆ ಸದಸ್ಯ ರಿಯಾಜ್‌ ಸಲಹೆ ನೀಡಿದರು. ಈ ಬಾರಿ ಏಕ ಟೆಂಡರ್‌ ಇಲ್ಲ. 10 ವಾರ್ಡ್‌ನಂತೆ ನೀಡಲಾಗುವುದು ಎಂದು ಜೀವಂಧರ್‌ ಜೈನ್‌ ತಿಳಿಸಿದರು

ಟಾಪ್ ನ್ಯೂಸ್

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Missing Case ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು

Missing Case ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.