ಬಿ.ಸಿ.ರೋಡು ಜಕ್ರಿಬೆಟ್ಟು ಹೆದ್ದಾರಿ ಕಾಮಗಾರಿ ಸಂಚಾರ ನಿಷೇಧ ಆದೇಶಕ್ಕೆ ಡಿಸಿಗೆ ಪತ್ರ
Team Udayavani, Jun 23, 2020, 5:48 PM IST
ಬಂಟ್ವಾಳ: ಕೆಸರುಮಯಗೊಂಡಿರುವ ಬಿ.ಸಿ.ರೋಡು ಜಕ್ರಿಬೆಟ್ಟು ಹೆದ್ದಾರಿಯ ಕಾಮಗಾರಿಯ ಹಿನ್ನೆಲೆಯಲ್ಲಿ 20 ದಿನಗಳ ಕಾಲ ಸಂಚಾರ ನಿಷೇಧಕ್ಕೆ ಆದೇಶ ನೀಡುವಂತೆ ರಾಷ್ಟ್ರೀಯ ಹೆದ್ದಾರಿ ಇಲಾಖೆಯು ದ.ಕ.ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದೆ.
ಮಂಗಳವಾರ ರಾಷ್ಟ್ರೀಯ ಹೆದ್ದಾರಿ ಇಲಾಖೆಯ ಇಇ ಜಿ.ಎನ್.ಹೆಗ್ಡೆ ಹಾಗೂ ಎಇಇ ಎಚ್.ಪಿ.ರಮೇಶ್ ಅವರ ನಿಯೋಗ ಹೆದ್ದಾರಿಯನ್ನು ಪರಿಶೀಲನೆ ನಡೆಸಿದ್ದು, ಒಂದೆರಡು ದಿನಗಳಲ್ಲಿ ಹೆದ್ದಾರಿಯ ಒಂದುಯ ಬದಿ 7 ಮೀ. ಕಾಂಕ್ರೀಟ್ ಕಾಮಗಾರಿ ಪೂರ್ಣಗೊಳ್ಳಲಿದ್ದು, ಕ್ಯೂರಿಂಗ್ಗಾಗಿ 20 ದಿನಗಳ ಸಮಯಾವಕಾಶ ಬೇಕಿರುವುದರಿಂದ ಸಂಚಾರ ನಿಷೇಧಕ್ಕೆ ಮನವಿ ಮಾಡಿದೆ.
ಸಂಚಾರ ನಿಷೇಧದ ಹಿನ್ನೆಲೆಯಲ್ಲಿ ಬಿ.ಸಿ.ರೋಡುನಿಂದ ಬೆಳ್ತಂಗಡಿಗೆ ಸಾಗುವ ಘನ ವಾಹನಗಳು ಬಿ.ಸಿ.ರೋಡು ಉಪ್ಪಿನಂಗಡಿ ಗುರುವಾಯನಕರೆ ಹೆದ್ದಾರಿಯಲ್ಲಿ ಸಂಚರಿಸಬೇಕು. ಲಘು ವಾಹನಗಳು ಬಂಟ್ವಾಳ ಪೇಟೆಯ ಮೂಲಕ ಸಾಗುವುದಕ್ಕೆ ಕ್ರಮಕೈಗೊಳ್ಳಲು ಎಸ್ಪಿಗೆ ಸೂಚಿಸಲು ಪತ್ರದಲ್ಲಿ ತಿಳಿಸಲಾಗಿದೆ.
ಎಂಆರ್ಪಿಎಲ್ ಪೈಪುಲೈನ್ ಕಾಮಗಾರಿಯನ್ನು ಕೂಡ ವೇಗವಾಗಿ ನಡೆಸುವಂತೆ ಅಽಕಾರಿಗಳು ಸೂಚಿಸಿದ್ದು, ಜತೆಗೆ ಹೆದ್ದಾರಿಯ ಕಾಮಗಾರಿಯನ್ನು ಶೀಘ್ರವಾಗಿ ಮುಗಿಸುವಂತೆ ಸೂಚಿಸಿದ್ದಾರೆ. ರಾ.ಹೆ.ಇಲಾಖೆಯ ಜೆಇ ಕೇಶವಮೂರ್ತಿ, ಎಇ ಕೀರ್ತಿ ಅಮೀನ್, ಗುತ್ತಿಗೆಯ ಸಂಸ್ಥೆಯ ಶರಣ್ ಗೌಡ, ದಾಮೋದರ್ ಎಂ.ಕೆ. ಜತೆಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು
MUST WATCH
ಹೊಸ ಸೇರ್ಪಡೆ
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ