ಜೀವನದಿ ನೇತ್ರಾವತಿಯಿದ್ದರೂ ಕುಡಿಯುವ ನೀರಿಗೆ ಬರ


Team Udayavani, Apr 4, 2019, 10:28 AM IST

Sudina-1

ಪುಂಜಾಲಕಟ್ಟೆ : ಜಿಲ್ಲೆಯ ಜೀವನದಿ ನೇತ್ರಾವತಿ ಮೈಯೊಡ್ಡಿ ಹರಿಯುವ ಸರಪಾಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ನೀರಿನ ಅಭಾವ ಕಂಡು ಬಂದಿದೆ. ಪಕ್ಕದಲ್ಲಿಯೇ ನದಿ ಹರಿಯುತ್ತಿದ್ದರೂ ಜನ ಕುಡಿಯುವ ನೀರಿಗೆ ತತ್ವಾರ ಪಡುವ ಸ್ಥಿತಿ ನಿರ್ಮಾಣಗೊಂಡಿದೆ.

ಸರಪಾಡಿ ಗ್ರಾ.ಪಂ. ವ್ಯಾಪ್ತಿಯ ಸರಪಾಡಿ ಬಹುತೇಕ ನೇತ್ರಾವತಿ ನದಿ ತಟದ ಪಕ್ಕದಲ್ಲಿದೆ. ಆದರೆ ಗ್ರಾ.ಪಂ.ವ್ಯಾಪ್ತಿಯ ಅಲ್ಲಿಪಾದೆ ಪರಿಸರದ ಸುಮಾರು 40 ಕುಟುಂಬಗಳು ಮಾತ್ರ ನೀರಿನ ಸಮಸ್ಯೆಗೆ ಒಳಗಾಗಿವೆ.

ಮಳೆಗಾಲದಲ್ಲಿ ಅಣೆಕಟ್ಟಿನಿಂದಾಗಿ ಮುಳುಗಡೆಯಾಗುವ ಪೆರ್ಲ- ಬೀಯ ಪಾದೆ ಪ್ರದೇಶ ಬೇಸಗೆಯಲ್ಲಿ ಬರಡಾಗಿದೆ. ಜನರು ಕುಡಿಯಲು ಹಾಗೂ ಕೃಷಿ ಉಳಿಸಲು ಖಾಸಗಿಯಾಗಿ ನದಿಗೆ ಪಂಪ್‌ ಅಳವಡಿಸಿ ಒಂದೂವರೆ ಕಿ.ಮೀ. ದೂರದವರೆಗೆ ಪೈಪ್‌ ಮೂಲಕ ನೀರು ಪೂರೈಸುವ ವ್ಯವಸ್ಥೆ ಕಲ್ಪಿಸಿ ಕೊಂಡಿದ್ದಾರೆ. ಅಲ್ಲಿಪಾದೆ ಯಲ್ಲಿ ಕೊಳವೆ ಬಾವಿ ಕೆಟ್ಟಿರು ವುದೇ ಇದಕ್ಕೆಲ್ಲ ಕಾರಣವಾಗಿದೆ.

ಕೈಕೊಟ್ಟ ಕೊಳವೆ ಬಾವಿಗಳು
ಅಲ್ಲಿಪಾದೆಯಲ್ಲಿ ಎರಡು ಕೊಳವೆ ಬಾವಿಗಳು ಕೈಕೊಟ್ಟಿವೆ. ಇಲ್ಲಿನ ಒಂದು ಕೊಳವೆಬಾವಿಯಲ್ಲಿ ಸಾಕಷ್ಟು ನೀರಿ ದ್ದರೂ ಪಂಪ್‌ ಅಳವಡಿಕೆಗೆ ತಾಂತ್ರಿಕ ತೊಂದರೆ ಬಂದ ಕಾರಣ ಅದರ ಉಪಯೋಗ ಕೈ ಬಿಟ್ಟು ಹೊಸ ಕೊಳವೆ ಬಾವಿ ಕೊರೆಸಲಾಯಿತು. ದುರಾ ದೃಷ್ಟವಶಾತ್‌ ಅದು ಬರಡಾ ದುದರಿಂದ ನೀರಿನ ಸಮಸ್ಯೆ ಬಿಗಡಾಯಿಸಿದೆ.

ಪ್ರಸ್ತುತ ಸ್ಥಳೀಯ ಸಂತ ಅಂತೋನಿ ಚರ್ಚ್‌ ನವರು ನದಿಯಿಂದ ಪಂಪ್‌ ಮೂಲಕ ಮೇಲೆತ್ತಿದ ನೀರನ್ನು ಪಂ. ಟ್ಯಾಂಕ್‌ಗೆ ಸರಬರಾಜು ಮಾಡುವ ಮೂಲಕ ಕುಡಿಯುವ ನೀರಿನ ಆಶ್ರಯ ಒದಗಿಸಿದ್ದಾರೆ. ಆದರೆ ಕೃಷಿ ಕಾರ್ಯಕ್ಕಾಗಿ ಜನರು ನೇತ್ರಾವತಿಗೆ ಪೈಪ್‌ ಅಳವಡಿಸಿ ಬಹುದೂರದಿಂದ ನೀರು ಸರಬರಾಜು ಗೊಳಿಸುತ್ತಿದ್ದಾರೆ. ಕಳೆದ ವರ್ಷ ಕೊಳವೆ ಬಾವಿಯಲ್ಲಿ ನೀರು ಬತ್ತಿ ಹೋಗಿ ಒಂದು ತಿಂಗಳು ಟ್ಯಾಂಕರ್‌ನಲ್ಲಿ ನೀರು ಪೂರೈಕೆ ನಡೆಸಲಾಗಿತ್ತು.

ಸರಪಾಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಸರಪಾಡಿ ಮತ್ತು ದೇವಶ್ಯಮೂಡೂರು ಗ್ರಾಮಗಳಿದ್ದು, ಹೆಚ್ಚಿನವರು ಖಾಸಗಿ ಬಾವಿ ಅಥವಾ ಖಾಸಗಿ ಕೊಳವೆ ಬಾವಿ ಯನ್ನು ಅವಲಂಬಿಸಿದ್ದಾರೆ. ಆದರೆ ಬಡ, ಮಧ್ಯಮ ವರ್ಗದವರು ಕುಡಿಯುವ ನೀರಿಗಾಗಿ ಗ್ರಾ.ಪಂ.ನ ಸಾರ್ವಜನಿಕ ನೀರಿನ ವ್ಯವಸ್ಥೆಯನ್ನೇ ಅವಲಂಬಿಸಬೇಕಾಗಿದೆ.

ಶಂಬೂರು ಎಎಂಆರ್‌ ಅಣೆಕಟ್ಟಿನಲ್ಲಿ ನೀರು ನಿಂತರೆ ನದಿಯಲ್ಲಿ ಸಾಧಾರಣ ನೀರಿರುತ್ತದೆ. ಒಂದೊಮ್ಮೆ ನೀರು ಬಿಟ್ಟರೆ ನೀರು ಬರಿದಾಗುತ್ತದೆ. ಮಂಗಳೂರಿಗೆ ಕುಡಿಯುವ ನೀರು ಪೂರೈಸಲು ತುಂಬೆ ಯಲ್ಲಿ ಕಟ್ಟಿರುವ ಅಣೆಕಟ್ಟಿನಿಂದಾಗಿ ಮೇಲ್ಭಾಗದ ಪ್ರದೇಶಗಳಿಗೆ ನೀರಿನ ಕೊರತೆಯಾಗುತ್ತದೆ. ಇದರಿಂದ ಅಂತ ರ್ಜಲ ಬತ್ತಿ ಹೋಗಿ ಕೊಳವೆ ಬಾವಿಯಲ್ಲಿ ನೀರು ಬತ್ತುತ್ತದೆ.

ಸರಪಾಡಿ ಗ್ರಾಮ ಪಂಚಾಯತ್‌ ಜನಸಂಖ್ಯೆ: ಸರಪಾಡಿ – 4,142, ದೇವಸ್ಯ ಮೂಡೂರು- 928,
ಒಟ್ಟು- 5,070.

ಕೊಳವೆ ಬಾವಿ: ಸರಪಾಡಿ-6, ದೇವಸ್ಯಮೂಡೂರು-2, ಒಟ್ಟು-8.
ಸರಕಾರಿ ಬಾವಿ: ಸರಪಾಡಿ-4, ದೇವಸ್ಯಮೂಡೂರು-2, ಒಟ್ಟು 6.
ಕೆರೆ: ಇಲ್ಲ
ಓವರ್‌ಹೆಡ್‌ಟ್ಯಾಂಕ್‌: ಸರಪಾಡಿ-8, ದೇವಸ್ಯಮೂಡೂರು-2, ಒಟ್ಟು 10.
ಖಾಸಗಿ ಕೊಳವೆ ಬಾವಿ: ಸರಪಾಡಿ-142, ದೇವಸ್ಯ ಮೂಡೂರು-28, ಒಟ್ಟು-170.

2,20,492 ರೂ. ಮೀಸಲು
ಪ್ರಸಕ್ತ ವರ್ಷ 14ನೇ ಹಣಕಾಸು ಯೋಜನೆಯಲ್ಲಿ 2,20,492 ರೂ. ಗಳನ್ನು ಕುಡಿಯುವ ನೀರಿಗಾಗಿ ಮೀಸಲಿರಿಸಲಾಗಿತ್ತು. ಉಳಿದಂತೆ ನಳ್ಳಿ, ಪೈಪ್‌ಲೈನ್‌ ದುರಸ್ತಿಗೆ ಪಂಚಾಯತ್‌ ತೆರಿಗೆ ಹಣವನ್ನು ಬಳಸಲಾಗಿದೆ ಎಂದು ಪಂಚಾಯತ್‌ ಅಭಿವೃದ್ಧಿ ಅಧಿಕಾರಿ ತಿಳಿಸಿದ್ದಾರೆ.

 ಬಹುಗ್ರಾಮ ಕುಡಿಯುವ ನೀರಿನ ಯೋಜನೆ
ಸರಪಾಡಿ ಗ್ರಾ.ಪಂ. ವ್ಯಾಪ್ತಿಯ ಅಲ್ಲಿಪಾದೆಯಲ್ಲಿ ನೀರಿನ ಸಮಸ್ಯೆ ಇದೆ. ಸರಪಾಡಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಅನುಮೋದನೆಗೊಂಡು ಅನುಷ್ಠಾನ ಹಂತದಲ್ಲಿದೆ. ಇಲ್ಲಿನ ನೀರಿನ ಸಮಸ್ಯೆಗೆ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯೇ ಶಾಶ್ವತ ಪರಿಹಾರವಾಗಿದೆ. ಕಾಮಗಾರಿ ಪ್ರಗತಿಯಲ್ಲಿದೆ.
 - ಧನಂಜಯ, ಪ್ರಭಾರ ಪಂ.ಅ. ಅಧಿಕಾರಿ, ಸರಪಾಡಿ ಗ್ರಾ.ಪಂ.

ರತ್ನದೇವ್‌ ಪುಂಜಾಲಕಟ್ಟೆ

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.