Vitla: ಸಾಹಿತಿ, ನಿವೃತ್ತ ಅಧ್ಯಾಪಕ ವಿ. ಮ. ಭಟ್ ನಿಧನ
Team Udayavani, Dec 16, 2023, 3:02 PM IST
ವಿಟ್ಲ: ಮಕ್ಕಳ ಸಾಹಿತಿ, ಅಡ್ಯನಡ್ಕ ಜನತಾ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅಧ್ಯಾಪಕರಾಗಿ ಸುದೀರ್ಘ ಸೇವೆ ಸಲ್ಲಿಸಿ ನಿವೃತ್ತರಾಗಿದ್ದ ವಾಟೆ ಮಹಾಲಿಂಗ ಭಟ್(ವಿ.ಮ.ಭಟ್)(87) ಅವರು ಡಿ.15ರಂದು ನಿಧನ ಹೊಂದಿದರು.
ಅವರು ಪತ್ನಿ, ಪುತ್ರ, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.
ಬಹುಮುಖ ವ್ಯಕ್ತಿತ್ವ ಹೊಂದಿದ್ದ ಅವರು ಅಡಿಕೆ ಬೆಳೆಗಾರರ ಸಂಘ, ಕೃಷಿ ಸಂಘಟನೆಯಲ್ಲಿ ಕ್ರಿಯಾಶೀಲರಾಗಿದ್ದರು. ಅವರು ಅಡ್ಯನಡ್ಕ ಜನತಾ ವಿದ್ಯಾಸಂಸ್ಥೆಗಳ ಆಡಳಿತ ಮಂಡಳಿ ಅಡ್ಯನಡ್ಕ ಎಜುಕೇಶನಲ್ ಸೊಸೈಟಿಯ ಹಿರಿಯ ಸದಸ್ಯರಾಗಿದ್ದರು. ಉತ್ತಮ ಕೃಷಿಕರಾಗಿದ್ದ ಅವರು ಅಡಿಕೆ ಪತ್ರಿಕೆಯ ಸಂಪಾದಕ ಮಂಡಳಿಯ ಸದಸ್ಯರೂ ಆಗಿದ್ದರು. ಮಕ್ಕಳ ಸಾಹಿತ್ಯಕ್ಕೆ ವಿಶೇಷ ಕೊಡುಗೆ ನೀಡಿದ್ದ ಅವರು ಹಲವಾರು ಕೃತಿಗಳನ್ನು ರಚಿಸಿದ್ದು, ಸಾಹಿತ್ಯ ಸಂಘಟನೆಗಳಲ್ಲಿ ತೊಡಗಿಸಿಕೊಂಡಿದ್ದರು. ಅವರು ಹವ್ಯಾಸಿ ಯಕ್ಷಗಾನ ಕಲಾವಿದರಾಗಿದ್ದು ಅವರಿಗೆ “ಸಾಧನಾ ಪಥಿಕ ವಾಟೆ” ಗೌರವ ಗ್ರಂಥ ಸಹಿತ ಅಭಿನಂದನ ಕಾರ್ಯಕ್ರಮ 2020ರಲ್ಲಿ ಸಂಪನ್ನಗೊಂಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ
Karnataka ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು
Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು
Bidar; ಹಣ ಹಂಚುವ ದೂರು: ನಾಗಮಾರಪಳ್ಳಿ ಮನೆಯಲ್ಲಿ ಪರಿಶೀಲನೆ
Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ