ಬಂಟ್ವಾಳ: ನೇತ್ರಾವತಿ ನದಿಗೆ ಹಾರಿದ ಯುವಕನನ್ನು ರಕ್ಷಿಸಿದ ಸ್ಥಳೀಯ ಈಜುಗಾರರು
Team Udayavani, Oct 19, 2020, 11:31 AM IST
ಬಂಟ್ವಾಳ: ಪಾಣೆಮಂಗಳೂರಿನ ಹಳೆ ಸೇತುವೆಯಿಂದ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯನ್ನು ಯುವಕರ ತಂಡ ರಕ್ಷಿಸಿದ ಘಟನೆ ಸೋಮವಾರ ಬೆಳಿಗ್ಗೆ ನಡೆದಿದೆ.
ಆತ್ಮಹತ್ಯೆಗೆ ಯತ್ನಿಸಿದ ಯುವಕನನ್ನು ಹಾಸನ ಜಿಲ್ಲೆಯ ಕುಮಾರ್ ಎಂದು ಗುರುತಿಸಲಾಗಿದೆ. ಈತ ಮಂಗಳೂರು- ಬೆಂಗಳೂರು ಸಂಚರಿಸುವ ಖಾಸಗಿ ಬಸ್ಸಿನಲ್ಲಿ ಚಾಲಕನಾಗಿ ಕೆಲಸ ಮಾಡುತ್ತಿದ್ದ. ಸದ್ಯ ಯುವಕನಿಗೆ ಬಂಟ್ವಾಳ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಇಂದು ಬೆಳಿಗ್ಗೆ 8.15 ರ ಸುಮಾರಿಗೆ ತನ್ನ ಖಾಕಿ ಸಮವಸ್ತ್ರ ಧರಿಸಿಕೊಂಡೇ ಯುವಕ ಸೇತುವೆಯ ಮೇಲಿಂದ ನದಿಗೆ ಹಾರಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದಾನೆ. ಇದನ್ನು ಕಂಡ ಸ್ಥಳೀಯರು ಈಜುಗಾರ ಮಹಮ್ಮದ್ ಅವರಿಗೆ ಮಾಹಿತಿ ತಿಳಿಸಿದ್ದಾರೆ. ದೋಣಿಯ ಮೂಲಕ ತೆರಳಿದ ಮಹಮ್ಮದ್ ಯುವಕನ್ನು ನೀರಿನಿಂದ ಮೇಲಿದ್ದು ಬಂಟ್ವಾಳ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಕಾರ್ಯಚರಣೆಯಲ್ಲಿ ಮಹಮ್ಮದ್ ಅವರಿಗೆ ಶಿಹಾಬ್ ಮತ್ತು ಸ್ವಾಲಿ ಎಂಬ ಇಬ್ಬರು ಯುವಕರು ಸಹಕಾರ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ
Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್ರಾಜ್ ಮೌರ್ಯ
Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?