ಸ್ಥಳೀಯರೇ ರಸ್ತೆಅಭಿವೃದ್ಧಿ ಪಡಿಸಿದರು !


Team Udayavani, Mar 21, 2019, 6:34 AM IST

21-march-8.jpg

ವಿಟ್ಲ : ಅಳಿಕೆ ಗ್ರಾಮದಲ್ಲಿ ಪ್ರಧಾನಮಂತ್ರಿ ಗ್ರಾಮ ಸಡಕ್‌ ಯೋಜನೆ ಯಡಿಯಲ್ಲಿ ರಸ್ತೆ ಮಂಜೂರಾಗಿದೆ ಎಂಬ ರಾಜಕೀಯ ಧುರೀಣರ ಮಾತನ್ನು ನಂಬಿ 9 ವರ್ಷ ಕಳೆದರೂ ರಸ್ತೆಯಾಗಲಿಲ್ಲವೆಂದು ಬೇಸತ್ತ ಗ್ರಾಮಸ್ಥರೇ ಮಹಾತ್ಮಾಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯ ಮೂಲಕ ರಸ್ತೆ ನಿರ್ಮಾಣ ಮಾಡಿ, ಭೇಷ್‌ ಎನಿಸಿದ್ದಾರೆ.

ಪ್ರಧಾನಮಂತ್ರಿ ಗ್ರಾಮ ಸಡಕ್‌ ಯೋಜನೆಯಡಿ 2010-11ನೇ ಸಾಲಿನಲ್ಲಿ ಅಳಿಕೆ ಸತ್ಯಸಾಯಿ ವಿಹಾರದಿಂದ ಮೆಣಸಿನ ಗಂಡಿ ಮೂಲಕವಾಗಿ ಕೆಳಗಿನ ಮುಳಿಯ ಸೇರುವ 6.42 ಕಿ.ಮೀ. ರಸ್ತೆಗೆ 341.50 ಲಕ್ಷ ರೂ. ಮಂಜೂರಾಗಿತ್ತು. ಕಳೆದ 9 ವರ್ಷಗಳಿಂದ ಮಂಜೂರಾಗಿರುವ ಬಗ್ಗೆ ರಾಜಕಾರಣಿಗಳು ಘೋಷಿಸುತ್ತಿದ್ದರು ಹೊರತಾಗಿ ರಸ್ತೆ ನಿರ್ಮಾಣಕ್ಕೆ ಅನುದಾನ ಬಿಡುಗಡೆಯಾಗಿರಲಿಲ್ಲ.

ಚುನಾವಣೆ ಬಂದಾಗಲೆಲ್ಲ ಭರವಸೆ ಸಿಗುತ್ತಿತ್ತು. ಆದರೆ ರಸ್ತೆ ಅಭಿವೃದ್ಧಿಯಾಗಲೇ ಇಲ್ಲ. ತೀರಾ ಹದಗೆಟ್ಟು ಹೋದ ಪ್ರದೇಶದ ರಸ್ತೆಗೆ ಕಾಂಕ್ರೀಟ್‌ ಮಾಡುವುದಕ್ಕೆ ಸ್ಥಳೀಯರು ಸಜ್ಜಾದರು. ಉದ್ಯೋಗ ಖಾತ್ರಿ ಯೋಜನೆಯ ಮೂಲಕ 20ಕ್ಕೂ ಅಧಿಕ ಸ್ಥಳೀಯ ನಿವಾಸಿಗಳು ಜತೆಯಾಗಿ ಸುಮಾರು 6 ಲಕ್ಷ ರೂ. ವೆಚ್ಚದಲ್ಲಿ 128 ಮೀ. ಉದ್ದಕ್ಕೂ ಕಾಂಕ್ರೀಟ್‌ ಕಾರ್ಯ ಮಾಡಿದ್ದಾರೆ. ರಾಜಕಾರಣಿಗಳು ಮತ ಯಾಚನೆಗೆ ಆಗಮಿಸುವ ವೇಳೆ ಈ ರಸ್ತೆ ಕಾಮಗಾರಿಯನ್ನು ತೋರಿಸಿ, ಇದನ್ನು ನಾವೇ ಅಭಿವೃದ್ಧಿ ಪಡಿಸಿದ್ದು ಎನ್ನುತ್ತಿದ್ದಾರೆ.

ಭರವಸೆ ನೀಡಿದವರು ಬರಲೇ ಇಲ್ಲ
ಅಳಿಕೆ, ಗಂಗೆಮೂಲೆ, ಮೆಣಸಿನಗಂಡಿ, ದೂಜಮೂಲೆ, ಮುಳಿಯ ನೆಕ್ಕರೆ, ಕೆಳಗಿನ ಮುಳಿಯವಾಗಿ ನೆಕ್ಕಿತ್ತಪುಣಿ ಸೇರುವ ಈ ರಸ್ತೆಯಲ್ಲಿ 100ಕ್ಕೂ ಅಧಿಕ ಮನೆಗಳಿವೆ. ಇದು ಈ ಊರಿನ ಪ್ರಮುಖ ಸಂಪರ್ಕ ರಸ್ತೆಯಾಗಿದ್ದು, ಮಳೆಗಾಲದಲ್ಲಿ ವಾಹನ ಸಂಚಾರ ಕಷ್ಟಕರವಾಗಿತ್ತು. ರೋಗಿಯನ್ನು ಗದ್ದೆ, ತೋಡಿನ ಬದಿಗಳಲ್ಲಿ ಹೊತ್ತು ಆಸ್ಪತ್ರೆ ಸೇರುವ ಪರಿಸ್ಥಿತಿ ಇತ್ತು. ಹಿಂದಿನ ಲೋಕಸಭಾ ಚುನಾವಣೆ ಸಮಯ ಭರವಸೆ ನೀಡಿ ಹೋದ ವ್ಯಕ್ತಿಗಳು  ಮಾತ್ರ ಬಳಿಕ ಇತ್ತ ಆಗಮಿಸಲೇ ಇಲ್ಲ. ಯಾವ ಭರವಸೆಗೂ ಕಾಯದೇ ನಮ್ಮ ರಸ್ತೆಯನ್ನು ನಾವೇ ಅಭಿವೃದ್ಧಿಪಡಿಸುತ್ತೇವೆ ಎನ್ನುತ್ತಿದ್ದಾರೆ ರಸ್ತೆ ಫಲಾನುಭವಿಗಳು.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.