ಸೇತುವೆ ಕಾಮಗಾರಿ ವೇಳೆ ನದಿಯಲ್ಲಿ ಬಾಕಿಯಾದ ಲಾರಿ!
ನೇತ್ರಾವತಿಯಲ್ಲಿ ಏಕಾಏಕಿ ನೀರು ಹೆಚ್ಚಳ
Team Udayavani, Nov 16, 2022, 7:50 AM IST
ಬಂಟ್ವಾಳ: ನೇತ್ರಾವತಿ ನದಿಯಲ್ಲಿ ಮಂಗಳವಾರ ಏಕಾಏಕಿ ನೀರಿನ ಹರಿವು ಏರಿಕೆಯಾಗಿದ್ದು, ಪಾಣೆಮಂಗಳೂರಿನಲ್ಲಿ ಹೊಸ ಸೇತುವೆ ನಿರ್ಮಾಣದ ಕಾಮಗಾರಿಯಲ್ಲಿ ನಿರತವಾಗಿರುವ ಲಾರಿಯೊಂದು ನದಿಯ ಮಧ್ಯದಲ್ಲಿ ಬಾಕಿಯಾದ ಘಟನೆ ಮಂಗಳವಾರ ಸಂಭವಿಸಿದೆ. ಬಳಿಕ ಜೆಸಿಬಿ ಸಹಾಯದಿಂದ ಲಾರಿಯನ್ನು ಬದಿಗೆ ಸರಿಸಲಾಯಿತು.
ಮಳೆಗಾಲಕ್ಕೆ ಮುನ್ನವೇ ಸೇತುವೆಯ ಬಹುತೇಕ ಪಿಲ್ಲರ್ಗಳು ನಿರ್ಮಾಣಗೊಂಡಿದ್ದು, ಮಳೆಯ ವೇಳೆ ಕಾಮಗಾರಿ ಸ್ಥಗಿತಗೊಳಿಸ ಲಾಗಿತ್ತು. ಪ್ರಸ್ತುತ ಕಾಮಗಾರಿ ಮತ್ತೆ ಆರಂಭ ಗೊಂಡಿದ್ದು, ನದಿಗೆ ಮಣ್ಣು ತುಂಬಿಸಿ ಲಾರಿಗಳ ಸಾಗಾಟಕ್ಕಾಗಿ ತಾತ್ಕಾಲಿಕ ರಸ್ತೆ ನಿರ್ಮಿಸಲಾಗಿದೆ.
ಮಂಗಳವಾರ ಲಾರಿಯೊಂದು ನದಿಗೆ ಮಣ್ಣು ಹಾಕಿ ಹಿಂದಿರುಗು ವಷ್ಟರಲ್ಲಿ ನೀರು ಹೆಚ್ಚಳವಾಗಿ ಒಂದು ಭಾಗದ ಮಣ್ಣು ಕೊಚ್ಚಿ ಹೋದ ಪರಿಣಾಮ ಲಾರಿ ಮಧ್ಯದಲ್ಲೇ ಸಿಲುಕಿಕೊಂಡಿತು.ಅಣೆಕಟ್ಟುಗಳಲ್ಲಿನ ನೀರಿನ ವ್ಯತ್ಯಾಸ ಹೀಗಾಗಲು ಕಾರಣ ಎನ್ನಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Loksabha Election; ದೇಶದಲ್ಲಿ ಹಂತ-1: ಮತ ಇಂದು
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು