ಜಾನುವಾರು ಚರ್ಮಗಂಟು ರೋಗ: ಬಂಟ್ವಾಳದಲ್ಲಿ ಮೊದಲ ಶಂಕಿತ ಪ್ರಕರಣ ಪತ್ತೆ; 1 ದನ ಸಾವು


Team Udayavani, Oct 14, 2022, 7:50 AM IST

ಜಾನುವಾರು ಚರ್ಮಗಂಟು ರೋಗ : ಬಂಟ್ವಾಳದಲ್ಲಿ ಮೊದಲ ಶಂಕಿತ ಪ್ರಕರಣ ಪತ್ತೆ; 1 ದನ ಸಾವು

ಬಂಟ್ವಾಳ: ರಾಜ್ಯದ ಹಲವು ಜಿಲ್ಲೆಗಳಲ್ಲಿ ಕಾಣಿಸಿಕೊಂಡು ಆತಂಕ ಮೂಡಿಸಿರುವ ಜಾನುವಾರುಗಳ ಚರ್ಮಗಂಟು ರೋಗ ಇದೇ ಮೊದಲ ಬಾರಿಗೆ ದ.ಕ.ಜಿಲ್ಲೆಯಲ್ಲಿ ಕಾಣಿಸಿಕೊಂಡಿದ್ದು, ಬಂಟ್ವಾಳ ತಾಲೂಕು ಬಿಳಿಯೂರು ಗ್ರಾಮದ ಒಂದೇ ಮನೆಯ ಮೂರು ದನಗಳಲ್ಲಿ ಶಂಕಿತ ಪ್ರಕರಣ ಪತ್ತೆಯಾಗಿದೆ. ಅದರಲ್ಲಿ ಒಂದು ದನ ಈಗಾಗಲೇ ಮೃತಪಟ್ಟಿದ್ದು, ಎರಡು ದನಗಳು ಚಿಕಿತ್ಸೆಯ ಬಳಿಕ ಬಹುತೇಕ ಗುಣಮುಖವಾಗಿವೆ.

ದ.ಕ.ಜಿಲ್ಲಾ ಪಶು ಪಾಲನ ಇಲಾಖೆಯ ಮಾಹಿತಿ ಪ್ರಕಾರ ಬಿಳಿಯೂರಿನ ಮಲ್ಲಡ್ಕದಲ್ಲಿ ಕಾಣಿಸಿಕೊಂಡ ಶಂಕಿತ ಪ್ರಕರಣಕ್ಕೆ ಅ. 8ರಿಂದ ಕೆಎಂಎಫ್‌ ವೈದ್ಯರು ಚಿಕಿತ್ಸೆ ನೀಡಿದ್ದಾರೆ.  ಒಂದು ದನ ಅ. 11ರಂದು ಮೃತಪಟ್ಟಿದೆ. ಆದರೆ ಉಳಿದ 2 ದನಗಳು

ಬಹುತೇಕ ಗುಣಮುಖವಾಗಿವೆ.  ದನ ಚರ್ಮಗಂಟು ರೋಗ ದಿಂದ ಸತ್ತಿಲ್ಲ, ಅದಕ್ಕೆ ಬೇರೆ ಕಾಯಿಲೆಯೂ ಇತ್ತು ಎನ್ನಲಾಗಿದೆ.

ಈ ಖಾಯಿಲೆಯ ಮುಂಜಾಗ್ರತ ಕ್ರಮವಾಗಿ ಪ್ರಕರಣ ಕಂಡುಬಂದ ಮನೆಯ ಸುತ್ತಲೂ ಸೇರಿದಂತೆ ಗ್ರಾಮದ ಬಹುತೇಕ ಜಾನುವಾರುಗಳಿಗೆ ಎಲ್‌ಎಸ್‌ಡಿ ಲಸಿಕೆ ನೀಡಲಾಗಿದ್ದು, ಜತೆಗೆ ಸೊಳ್ಳೆಗಳ ನಿಯಂತ್ರಣಕ್ಕಾಗಿ ಫಾಗಿಂಗ್‌ ಕಾರ್ಯವನ್ನೂ ಮಾಡಲಾಗಿದೆ. ಜತೆಗೆ ಪ್ರದೇಶದ ಮನೆಗಳಿಗೆ ಮುಂಜಾಗ್ರತ ಕ್ರಮಗಳನ್ನೂ ತಿಳಿಸಲಾಗಿದೆ.

ಬಿಳಿಯೂರು ಪ್ರದೇಶದಲ್ಲಿ ಸುಮಾರು 600 ದನಗಳಿಗೆ ಲಸಿಕೆಗಳನ್ನು ನೀಡಲಾಗಿದ್ದು, ಉಳಿದಂತೆ ಜಿಲ್ಲೆಗೆ ಪೂರೈಕೆಯಾಗಿ ರುವ 2000 ಲಸಿಕೆಗಳಲ್ಲಿಗೋಶಾಲೆಗಳ ದನಗಳಿಗೆ ನೀಡುವ ಕಾರ್ಯಮಾಡಲಾಗಿದೆ. ಸತ್ತಿರುವ ದನದ ಕುರಿತು ಇಲಾಖೆಯು ಸರಕಾರಕ್ಕೆ ವರದಿ ನೀಡಿದ್ದು,  20 ಸಾವಿರ ರೂ. ಪರಿಹಾರ ಸಿಗುವ ಸಾಧ್ಯತೆ ಇದೆ.

ಲಸಿಕೆ-ಫಾಗಿಂಗ್‌ ಕಾರ್ಯ :

ಬಿಳಿಯೂರಿನಲ್ಲಿ ಜಿಲ್ಲೆಯ ಮೊದಲ ಶಂಕಿತ ಪ್ರಕರಣ ಕಂಡುಬಂದಿದ್ದು, ಈಗಾಗಲೇ ಸುತ್ತಮುತ್ತಲ ಪ್ರದೇಶದಲ್ಲಿ ಲಸಿಕೆ ಹಾಗೂ ಸೊಳ್ಳೆಗಳ ನಿಯಂತ್ರಣಕ್ಕೆ ಫಾಗಿಂಗ್‌ ಕಾರ್ಯವನ್ನು ನಡೆಸಿದ್ದೇವೆ. ಜಿಲ್ಲೆಗೆ ಬಂದಿರುವ 2 ಸಾವಿರ ಲಸಿಕೆಗಳನ್ನು ಈಗಾಗಲೇ ನೀಡಲಾಗಿದ್ದು, ಹೆಚ್ಚಿನ ಲಸಿಕೆಗಳಿಗೆ ಬೇಡಿಕೆ ಸಲ್ಲಿಸಲಾಗಿದೆ. ಜತೆಗೆ ಸತ್ತಿರುವ ದನಕ್ಕೆ  ಸರಕಾರದಿಂದ ಸಿಗುವ ಪರಿಹಾರಕ್ಕೂ ವ್ಯವಸ್ಥೆ ಮಾಡಲಾಗುತ್ತಿದೆ.ಅರುಣ್‌ಕುಮಾರ್‌ ಶೆಟ್ಟಿ ಉಪನಿರ್ದೇಶಕರು, ಪಶು ಪಾಲನಾ  ಇಲಾಖೆ. ದ.ಕ.ಜಿಲ್ಲೆ

ಟಾಪ್ ನ್ಯೂಸ್

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqwqe

Pilikula; ಎ. 29, ಮೇ ತಿಂಗಳ ಎಲ್ಲ ಸೋಮವಾರವೂ ಪಿಲಿಕುಳ ಮುಕ್ತ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

6-court

Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.