ಬೆಳ್ತಂಗಡಿ: ಮೀನು ಹಿಡಿಯಲು ಹೋದ ವ್ಯಕ್ತಿ ಅನುಮಾನಸ್ಪದವಾಗಿ ನಾಪತ್ತೆ!
Team Udayavani, Dec 8, 2020, 4:13 PM IST
ಬೆಳ್ತಂಗಡಿ: ತಾಲೂಕಿನ ಉಜಿರೆ ಗ್ರಾಮದ ಶಿವಾಜಿ ನಗರ ರೆಂಜಳ ನಿವಾಸಿ ಅನುಮಾನಸ್ಪದ ರೀತಿಯಲ್ಲಿ ನಾಪತ್ತೆಯಾದ ಘಟನೆ ನಡೆದಿದೆ.
ಉಜಿರೆ ಶಿವಾಜಿ ನಗರದ ರೆಂಜಳ ನಿವಾಸಿ ರಮೇಶ್ (48) ಎಂಬುವರು ಡಿ.7ರಂದು ಸಂಜೆ 5 ಗಂಟೆ ಬಳಿಕ ನಾಪತ್ತೆಯಾಗಿದ್ದಾರೆ.
ಅವರ ಮೊಬೈಲ್ ಫೋನ್ ಇಂದು ಬೆಳಗ್ಗೆ 10 ಗಂಟೆ ಬಳಿಕ ಸ್ವಿಚ್ಡ್ ಆಫ್ ಆಗಿತ್ತು ಎಂದು ಅವರ ಸಹೋದರ ತಿಳಿಸಿದ್ದಾರೆ. ಬೆಳ್ತಂಗಡಿ ಸೋಮಾವತಿ ನದಿಯ ಜಾಕ್ ವೆಲ್ ಸಮೀಪ ದಡದಲ್ಲಿ ಇಂದು ಸಂಜೆ ಅವರ ಉಡುಗೆ ಮತ್ತು ಮೀನು ಹಿಡಿಯುವ ಬಲೆ, ಮೊಬೈಲ್ ಪತ್ತೆಯಾಗಿದೆ.
ಇದನ್ನೂ ಓದಿ:ವಿವಾಹ ಪ್ರಸ್ತಾಪಕ್ಕೆ ನಕಾರ: ಪ್ರಿಯತಮೆ ತಂದೆಯನ್ನು ಹತ್ಯೆಗೈದ ಪ್ರಿಯಕರ!
ಸ್ಥಳಕ್ಕೆ ಅಗ್ನಿಶಾಮಕ ದಳ, ಪೊಲೀಸ್ ಇಲಾಖೆ ಭೇಟಿ ನೀಡಿ ನದಿಯಲ್ಲಿ ಶೋಧಕಾರ್ಯ ಮುಂದುವರೆಸಿದೆ. ಮುಳುಗು ತಜ್ಞ ಇಸ್ಮಾಯಿಲ್ ಸಂಜಯ ನಗರ ನದಿಯಲ್ಲಿ ಮುಳುಗಿ ಪರಿಶೀಲಿಸಿದ್ದಾರೆ.
ರಮೇಶ್ ಕೂಲಿ ಕೆಲಸಕ್ಕೆ ಹೋಗುತ್ತಿದ್ದು, ಕಳೆದ ಎರಡು ವರ್ಷಗಳಿಂದ ಮೀನು ಹಿಡಿಯಲು ತೆರಳುತ್ತಿರಲಿಲ್ಲ. ಸದ್ಯ ರಮೇಶ್ ಏಕಾಏಕಿ ನಾಪತ್ತೆಯಾಗಿದ್ದು, ಅವರೊಂದಿಗೆ ಮೀನು ಹಿಡಿಯಲು ಮತ್ತೊಬ್ಬ ವ್ಯಕ್ತಿ ಹೋಗಿರುವ ಕುರಿತು ಸಿಸಿ ಕ್ಯಾಮರದಲ್ಲಿ ದಾಖಲಾಗಿದೆ. ಆ ವ್ಯಕ್ತಿಯ ಬಗ್ಗೆಯೂ ಇದುವರೆಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ.
ಶೋಧಕಾರ್ಯ ಮುಂದುವರೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
MUST WATCH
ಹೊಸ ಸೇರ್ಪಡೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್ ಆಫ್ ಅಟಾರ್ನಿ, ದೂರು ದಾಖಲು