ಮಾಣಿ-ಮೈಸೂರು ಹೆದ್ದಾರಿ ಕಾಮಗಾರಿ ತಾತ್ಕಾಲಿಕವಾಗಿ ಮುಂದಕ್ಕೆ
Team Udayavani, Mar 25, 2020, 4:55 AM IST
ಪುತ್ತೂರು: ರಾಜ್ಯ ಹೆದ್ದಾರಿಯಿಂದ ರಾಷ್ಟ್ರೀಯ ಹೆದ್ದಾರಿಯಾಗಿ ಮೇಲ್ದರ್ಜೆಗೇರಿರುವ ಮಾಣಿ-ಮೈಸೂರು ರಸ್ತೆಯಲ್ಲಿ ಮರು ಡಾಮರು ಕಾಮಗಾರಿ ನಡೆಯುತ್ತಿದ್ದು, ಕೋವಿಡ್-19 ಮುನ್ನೆಚ್ಚರಿಕೆ ಕ್ರಮದ ಹಿನ್ನೆಲೆಯಲ್ಲಿ ಮಂಗಳವಾರದಿಂದ ಕಾಮಗಾರಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ರಾ.ಹೆ. ಯ ಮಾಣಿ-ಸಂಪಾಜೆ ವ್ಯಾಪ್ತಿಯ 71.6 ಕಿ.ಮೀ. ರಸ್ತೆಯನ್ನು ಎರಡು ವಿಭಾಗಗಳಲ್ಲಿ ಮರು ಡಾಮರು ಕಾಮಗಾರಿ ನಡೆಸಲಾಗುತ್ತಿದೆ. 0-40 ಕಿ.ಮೀ. ವ್ಯಾಪ್ತಿಯ ಮಾಣಿಯಿಂದ ಜಾಲೂÕರು ಹಾಗೂ ಹಾಗೂ ಜಾಲಸೂರಿನಿಂದ ಸಂಪಾಜೆ ತನಕದ 31.6 ಕಿ.ಮೀ. ರಸ್ತೆಯನ್ನು ಪ್ರತ್ಯೇಕ ಟೆಂಡರ್ಗಳಿಗೆ ವಹಿಸಲಾಗಿದೆ. 0-40 ಕಿ.ಮೀ. ತನಕ 14 ಕೋಟಿ ರೂ. ಹಾಗೂ ಹಾಗೂ ಅನಂತರದ 31.6 ಕಿ.ಮೀ. ವ್ಯಾಪ್ತಿಗೆ 10.23 ಕೋಟಿ ರೂ. ಟೆಂಡರ್ ಆಗಿದೆ.
ಕೊರೋನಾ ಇಫೆಕ್ಟ್
ಹಾಲಿ ಕೊರೋನಾ ವೈರಸ್ ನಿಯಂತ್ರಣದ ದೃಷ್ಟಿಯಿಂದ ಎಲ್ಲ ಸರಕಾರಿ ಹಾಗೂ ಖಾಸಗಿ ಸಂಸ್ಥೆ, ಕೆಲಸಗಾರರಿಗೆ ರಜೆ ನೀಡಲಾಗಿದೆ. ಸಮುದಾಯ ಸೇರುವ ಹಾಗೂ ವಾಹನಗಳ ಸಂಚಾರ ಇರುವ ರಸ್ತೆಯಾಗಿರುವುದರಿಂದ ರಸ್ತೆ ಅಭಿವೃದ್ಧಿಯಲ್ಲಿ ಕೆಲಸ ಮಾಡುವ ಕಾರ್ಮಿಕರ ಹಿತದೃಷ್ಟಿಯಿಂದ ಮಾ. 30ರ ತನಕ ಕಾಮಗಾರಿಯನ್ನು ಸ್ಥಗಿತ ಗೊಳಿಸ ಲಾಗಿದೆ. ಸರಕಾರದ ಆದೇಶ ನೋಡಿ ಕೊಂಡು ಕಾಮಗಾರಿಯನ್ನು ಮುಂದು ವರಿಸುವ ಚಿಂತನೆ ನಡೆಸ ಲಾಗುವುದು ಎಂದು ರಾ.ಹೆ. ಹೆದ್ದಾರಿ ಸಹಾಯಕ ಎಂಜಿನಿಯರ್ ನಾಗರಾಜ್ ತಿಳಿಸಿದ್ದಾರೆ.
ಎ. 15: ಮುಕ್ತಾಯದ ಗುರಿ
ಮಾಣಿಯಿಂದ ಸಂಪ್ಯ ತನಕದ ಸುಮಾರು 18 ಕಿ.ಮೀ. ಹಾಗೂ ಜಾಲೂÕರಿನಿಂದ 15 ಕಿ.ಮೀ. ಡಾಮರು ಕಾಮಗಾರಿ ಪೂರ್ತಿಗೊಳಿಸಲಾಗಿದೆ. ಇನ್ನು 22 ಕಿ.ಮೀ. ಹಾಗೂ 16.6 ಕಿ.ಮೀ. ಸೇರಿ ಒಟ್ಟು ಸುಮಾರು 37.6 ಕಿ.ಮೀ. ಮರು ಡಾಮರು ಕಾಮಗಾರಿ ಬಾಕಿ ಇದೆ. ಒಂದೆರಡು ದಿನಗಳಲ್ಲಿ ವಾಹನಗಳ ಸಂಚಾರ ಕಡಿಮೆ ಇದ್ದ ಕಾರಣಕ್ಕೆ ಕಾಮಗಾರಿ ವೇಗವನ್ನೂ ಪಡೆದುಕೊಂಡಿತ್ತು. ಎ. 15ಕ್ಕೆ ಕಾಮಗಾರಿಯನ್ನು ಪೂರ್ತಿಗೊಳಿಸುವ ಗುರಿ ಇರಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
MUST WATCH
ಹೊಸ ಸೇರ್ಪಡೆ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ