ಮಾಣಿ-ಸಂಪಾಜೆ ಹೆದ್ದಾರಿ ಮೇಲ್ದರ್ಜೆಗೆ

ಕಾಮಗಾರಿ ನಡೆಸಲು 26 ಕೋಟಿ ರೂ. ಮಂಜೂರು 

Team Udayavani, Sep 25, 2019, 5:00 AM IST

r-22

ಪುತ್ತೂರು: ಮಾಣಿ – ಮೈಸೂರು ರಸ್ತೆ ರಾಷ್ಟ್ರೀಯ ಹೆದ್ದಾರಿ-275 ಆಗಿ ಮೇಲ್ದರ್ಜೆಗೇರಿದ ಬಳಿಕ ಮಾಣಿಯಿಂದ ಸಂಪಾಜೆ ತನಕ ನಿಯತಕಾಲಿಕ ನವೀಕರಣ ಅಂದರೆ ಮರು ಡಾಮರು ಕಾಮಗಾರಿ ನಡೆಸಲು ರಾ.ಹೆ. ಇಲಾಖೆಯಿಂದ 26 ಕೋಟಿ ರೂ. ಮಂಜೂರಾಗಿದೆ. ಜತೆಗೆ ಹೆದ್ದಾರಿಯ ಚತುಷ್ಪಥ ಯೋಜನೆ ಕನಸೂ ಗರಿಗೆದರಿದೆ.

ಮಾಣಿ-ಮೈಸೂರು ರಾಜ್ಯ ಹೆದ್ದಾರಿಯನ್ನು ವರ್ಷದ ಹಿಂದೆ ರಾ.ಹೆ. ಹೆದ್ದಾರಿಯನ್ನಾಗಿಸಿದ್ದು, ಮಾಣಿ-ಮೈಸೂರು-ಬೆಂಗಳೂರು ಎಂದು ನಾಮಕರಣ ಮಾಡಲಾಗಿದೆ. ಮಾಣಿಯಿಂದ ಕುಶಾಲನಗರದವರೆಗಿನ ಹೆದ್ದಾರಿ ಮಂಗಳೂರು ವಿಭಾಗಕ್ಕೆ, ಅನಂತರ ಮೈಸೂರು ವಿಭಾಗಕ್ಕೆ ಬರುತ್ತಿದೆ. ಮಂಗಳೂರು ವಿಭಾಗದ ಮಡಿಕೇರಿ ಉಪ ವಿಭಾಗ ವ್ಯಾಪ್ತಿಯಲ್ಲಿ ಸಂಪಾಜೆಯಿಂದ ಕುಶಾಲನಗರದವರೆಗೆ ನಿಯತಕಾಲದ ನವೀಕರಣ (ಪಿಆರ್‌) ಮುಗಿದಿದ್ದು, ಮಂಗಳೂರು ಉಪ ವಿಭಾಗ ವ್ಯಾಪ್ತಿಗೆ 26 ಕೋಟಿ ರೂ. ಮಂಜೂರಾಗಿದೆ.

ಕಾಮಗಾರಿ ಹೀಗೆ…
ಮಾಣಿಯಿಂದ ಜಾಲಸೂರು ವರೆಗಿನ ಕಾಮಗಾರಿಗೆ 14 ಕೋಟಿ ರೂ. ಮತ್ತು ಜಾಲಸೂರು ನಿಂದ ಸಂಪಾಜೆ ವರೆಗಿನ ಕಾಮಗಾರಿಗೆ 12 ಕೋಟಿ ರೂ. ಮಂಜೂರಾಗಿದೆ. ಇದರಲ್ಲಿ ಮರು ಡಾಮರು ಕಾಮಗಾರಿ, ಹೆದ್ದಾರಿ ಪಕ್ಕದ ಅಪಾಯ ಕಾರಿ ಹೊಂಡ, ಬಾವಿ, ಕೆರೆಗಳನ್ನು ಮುಚ್ಚುವುದು, . ತಡೆಗೋಡೆ ನಿರ್ಮಾಣ, ಸೂಚನ ಫಲಕ ಅಳವಡಿಕೆ, ಸೆಂಟರ್‌ ಮಾರ್ಕಿಂಗ್‌, ರಸ್ತೆ ಭುಜ ಸಮರ್ಪಕಗೊಳಿಸುವುದು, ಅಪಾಯಕಾರಿ ತಿರುವು ನೇರಗೊಳಿಸುವ ಕಾಮಗಾರಿ ನಡೆಯಲಿದೆ. 5 ಕೋಟಿ ರೂ. ಹೆಚ್ಚಿನ ಮೊತ್ತದ ಕಾಮಗಾರಿಗಳಾದರೆ ಅದನ್ನು ಇಪಿಸಿ ಮೋಡ್‌ (ಎಂಜಿನಿಯರಿಂಗ್‌ ಪ್ರೊಕ್ಯೂರ್‌ವೆುಂಟ್‌ ಆ್ಯಂಡ್‌ ಕನ್‌ಸ್ಟ್ರಕ್ಷನ್‌) ಮಾದರಿಯಲ್ಲಿ ಟೆಂಡರ್‌ ಮಾಡಲಾಗುತ್ತದೆ. ಹೆದ್ದಾರಿ ಇಲಾಖೆ ರೀಜನಲ್‌ ಆಫೀಸರ್‌ ಹಂತದಲ್ಲಿ ಈ ಪ್ರಕ್ರಿಯೆ ಇದೆ. ಮಾರ್ಚ್‌ ಒಳಗೆ ಕಾಮಗಾರಿ ಮುಗಿಸಬೇಕಾದ ಗಡುವು ಇದೆ. ಮಾಣಿ – ಮೈಸೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಮೈಸೂರಿನಿಂದ ಮುಂದಕ್ಕೆ ಹಾಲಿ ಇರುವ ಚತುಷ್ಪಥವನ್ನು ಷಟ³ಥ ಮಾಡುವ ಯೋಜನೆ ಇದೆ.

ಮಾಣಿಯಿಂದ ಮೈಸೂರು ತನಕ ಇನ್ನೂ ದ್ವಿಪಥವೇ ಇದೆ. ಈಗಾಗಲೇ ಮೈಸೂರು ವಿಭಾಗ ವ್ಯಾಪ್ತಿಯಲ್ಲಿ ಹೆದ್ದಾರಿ ಚತುಷ್ಪಥಕ್ಕೆ ಪ್ರಾಧಿಕಾರ ಪ್ರಸ್ತಾವನೆ ಸಿದ್ಧಪಡಿಸಿದೆ. ಮಂಗಳೂರು ವಿಭಾಗದಲ್ಲಿ ಉಳಿಕೆಯಾಗಿರುವ ನವೀಕರಣ ಕಾಮಗಾರಿ ಮುಗಿದ ಬಳಿಕ ಚತುಷ್ಪಥ ಯೋಜನೆಗೆ ಚಾಲನೆ ಸಿಗುವ ಸಂಭವವಿದೆ. 10 ಸಾವಿರ ಪಿಸಿಯು (ಪ್ಯಾಸೆಂಜರ್‌ ಕಾರ್‌ ಯುನಿಟ್‌) ದಾಟಿದರೆ ಅದನ್ನು ಚತುಷ್ಪಥ ಮಾಡಬೇಕು ಎಂಬ ನಿಯಮವಿದ್ದು, ಪ್ರಸ್ತುತ ಮಾಣಿ -ಮೈಸೂರು ಹೆದ್ದಾರಿಯ ಪಿಸಿಯು 12 ಸಾವಿರ ದಾಟಿದೆ. ಆದರೆ ಹೆದ್ದಾರಿಯನ್ನು ಬಿಟ್ಟುಕೊಡುವಂತೆ ಇದುವರೆಗೆ ಪ್ರಾಧಿಕಾರದಿಂದ ನಮಗೆ ಪತ್ರ ಬಂದಿಲ್ಲ. ಬಂದ ಬಳಿಕ ಕ್ರಮ ಕೈಗೊಳ್ಳಲಾಗುವುದು ಎಂದು ಹೆದ್ದಾರಿ ಇಲಾಖೆ ಕಾರ್ಯನಿರ್ವಾಹಕ ಎಂಜಿನಿಯರ್‌ ಸುಬ್ಬರಾಮ ಹೊಳ್ಳ ತಿಳಿಸಿದ್ದಾರೆ.

5 ಅಪಘಾತ ವಲಯ ಸೇತುವೆ
ಹೆದ್ದಾರಿಯ ಮಂಗಳೂರು ಉಪ ವಿಭಾಗ ವ್ಯಾಪ್ತಿಯ ಐದು ಸೇತುವೆಗಳನ್ನು ಅಪಾಯಕಾರಿ ವಲಯ ಎಂದು ಹೆದ್ದಾರಿ ಇಲಾಖೆ ಗುರುತಿಸಿದ್ದು, ಮೇಲಧಿಕಾರಿಗಳ ಮೂಲಕ ಸರಕಾರಕ್ಕೆ ವರದಿ ಸಲ್ಲಿಸಿದೆ. ಪುತ್ತೂರು – ಸುಳ್ಯ ಮಧ್ಯೆ ಸಿಗುವ ಸಂಪ್ಯ, ಸಂಟ್ಯಾರು, ಕುಂಬ್ರ ಸಮೀಪದ ಪರ್ಪುಂಜ, ಶೇಖಮಲೆ ಮತ್ತು ಅಮಿcನಡ್ಕ ಸೇತುವೆಗಳನ್ನು ಅಪಘಾತ ವಲಯ ಎಂದು ಪರಿಗಣಿಸಲಾಗಿದೆ. 5 ಸೇತುವೆಗಳ ಅಭಿವೃದ್ಧಿಗೆ ಒಟ್ಟು 11.50 ಕೋಟಿ ರೂ. ಅನುದಾನದ ಪ್ರಸ್ತಾವನೆ ಸಲ್ಲಿಸಲಾಗಿದೆ ಮತ್ತು ಆದ್ಯತೆಯಲ್ಲಿ ಪರಿಗಣಿಸುವಂತೆ ಮನವಿ ಮಾಡಲಾಗಿದೆ.

ಐದು ಸೇತುವೆಗಳ ವರದಿ ಪೊಲೀಸ್‌ ಇಲಾಖೆ ಮೂಲಕ ರಸ್ತೆ ಸುರಕ್ಷತಾ ಸಮಿತಿಯ ಮುಂದೆಯೂ ಸಲ್ಲಿಕೆಯಾಗಲಿದೆ. ಸಮಿತಿಯಲ್ಲಿರುವ ನಿಧಿಯನ್ನು ಬಳಸಿ ಸೇತುವೆ ವಲಯದ ನವೀಕರಣ ಕಾರ್ಯ ನಡೆಸುವ ಅವಕಾಶ ಇದೆ. ಇದಲ್ಲದೆ, ರಾಷ್ಟ್ರೀಯ ಹೆದ್ದಾರಿ ಇಲಾಖೆ ಪ್ರತ್ಯೇಕ ಅನುದಾನ ಬಿಡುಗಡೆ ಮಾಡುವ ಅವಕಾಶವೂ ಇದೆ. ಅನುದಾನ ಬಿಡುಗಡೆಗೆ ಒಂದಷ್ಟು ಸಮಯಾವಕಾಶ ಹಿಡಿಯುವ ಸಾಧ್ಯತೆ ಕಾರಣದಿಂದ ಸೇತುವೆಗಳಲ್ಲಿ ತಾತ್ಕಾಲಿಕ ನವೀಕರಣ, ತಡೆ ನಿರ್ಮಾಣ ಕಾಮಗಾರಿಯನ್ನು ಆರಂಭಿಸಲಾಗಿದೆ.

ಟೆಂಡರ್‌ ಪ್ರಕ್ರಿಯೆ
ಹೆದ್ದಾರಿಯ ಮಾಣಿ – ಸಂಪಾಜೆ ತನಕ 26 ಕೋಟಿ ರೂ. ವೆಚ್ಚದಲ್ಲಿ ನವೀಕರಣ ಕಾಮಗಾರಿ ಟೆಂಡರ್‌ ಪ್ರಕ್ರಿಯೆ ಹಂತದಲ್ಲಿದೆ. ಈ ಕಾಮಗಾರಿ ಮಾರ್ಚ್‌ ತಿಂಗಳೊಳಗೆ ಮುಕ್ತಾಯಗೊಳ್ಳಲಿದೆ. ಸೇತುವೆಗಳ ಅಭಿವೃದ್ಧಿಗೆ ಸಂಬಂಧಿಸಿದಂತೆಯೂ ವರದಿ ಸಿದ್ಧಪಡಿಸಲಾಗಿದೆ. ಅನುದಾನ ಬಿಡುಗಡೆಯಾದ ಕೂಡಲೇ ಕಾಮಗಾರಿ ನಡೆಸಲಾಗುವುದು.
– ಸುಬ್ಬರಾಮ ಹೊಳ್ಳ , ರಾ. ಹೆ. ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್‌

ರಾಜೇಶ್‌ ಪಟ್ಟೆ

ಟಾಪ್ ನ್ಯೂಸ್

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.