ರಸ್ತೆಯ ಅಂಚಿನಲ್ಲೇ ಸಂತೆ ವ್ಯಾಪಾರ!


Team Udayavani, Aug 20, 2019, 5:10 AM IST

w-32

ಪುತ್ತೂರು: ನಗರದ ಹೃದಯಭಾಗದಲ್ಲಿರುವ ಸರಕಾರಿ ಕಚೇರಿಗಳನ್ನು ಸಂಪರ್ಕಿಸುವ ರಸ್ತೆಗಳು ಸೋಮವಾರ ಸಂತೆ ಮಾರುಕಟ್ಟೆಗಳಾಗಿ ಪರಿವರ್ತನೆಗೊಂಡಿದ್ದವು. ಕಾರಣ, ಪ್ರತಿ ಸೋಮವಾರ ಸಂತೆ ನಡೆಯುವ ಕಿಲ್ಲೆ ಮೈದಾನ ಗಣೇಶೋತ್ಸವದ ಹಿನ್ನೆಲೆಯಲ್ಲಿ ಸಿದ್ಧಗೊಳ್ಳುತ್ತಿರುವುದು.

ಕಿಲ್ಲೆ ಮೈದಾನದಲ್ಲಿ ಶ್ರೀ ದೇವತಾ ಸಮಿತಿಯ ವತಿಯಿಂದ ವರ್ಷಂಪ್ರತಿಯಂತೆ ಗಣೇಶೋತ್ಸವ ನಡೆಯುವ ಸಂದರ್ಭದಲ್ಲಿ ಕಿಲ್ಲೆ ಮೈದಾನದ ಸಂತೆ ಪಕ್ಕದ ರಸ್ತೆ ಬದಿಗೆ ವರ್ಗಾವಣೆಯಾಗುತ್ತದೆ. ಪತ್ರಿಕಾ ಭವನದ ಸುತ್ತಲಿನ ನಾಲ್ಕು ರಸ್ತೆಗಳು ಈ ವಾರದ ಸೋಮವಾರದಿಂದ ಮುಂದಿನ ನಾಲ್ಕು ಸೋಮವಾರ ಸಂತೆ ವ್ಯಾಪಾರಿಗಳು, ಗ್ರಾಹಕರಿಂದ ತುಂಬಿರುತ್ತವೆ.

ಸೆ. 2ರಿಂದ 8ರ ತನಕ ಕಿಲ್ಲೆ ಮೈದಾನದಲ್ಲಿ ಮಹಾ ಗಣೇಶೋತ್ಸವ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಶೀಟ್ ಅಳವಡಿಸುವುದು ಸಹಿತ ವಿವಿಧ ಸಿದ್ಧತೆಗಳು ನಡೆಯುತ್ತಿವೆ. ಇದರಿಂದ ಪುತ್ತೂರಿನ ಸೋಮವಾರ ಸಂತೆ ವ್ಯಾಪಾರಿಗಳು ಆ. 19ರಿಂದ ಮತ್ತು ಸೆ. 9ರ ತನಕದ ಸೋಮವಾರ ವ್ಯಾಪಾರಕ್ಕಾಗಿ ರಸ್ತೆ ಬದಿಯನ್ನೇ ಅವಲಂಬಿಸಬೇಕಾಗಿದೆ.

ಒಂದು ವರ್ಷ ಇರಲಿಲ್ಲ
ಹಲವು ವರ್ಷಗಳಿಂದ ಗಣೇಶೋತ್ಸವದ ಸಂದರ್ಭ ಬರುವ ಸೋಮವಾರ ಸಂತೆ ಇದೇ ರೀತಿ ಕಿಲ್ಲೆ ಮೈದಾನ ಪರಿಸರದ ರಸ್ತೆ ಬದಿಗಳಲ್ಲೇ ನಡೆಯುತ್ತದೆ. ಒಂದು ವರ್ಷ ಮಾತ್ರ ಸಹಾಯಕ ಆಯುಕ್ತರ ಆದೇಶದಂತೆ ಕಿಲ್ಲೆ ಮೈದಾನದ ಸಂತೆ ಎಪಿಎಂಸಿಗೆ ಸ್ಥಳಾಂತರಗೊಂಡಿದ್ದರಿಂದ ಈ ಪ್ರಮೇಯ ಬಂದಿರಲಿಲ್ಲ. ಈಗ ಸಂತೆ ಮತ್ತೆ ಕಿಲ್ಲೆ ಮೈದಾನಕ್ಕೆ ಬಂದಿರುವುದರಿಂದ ಗಣೇ ಶೋತ್ಸವ ಸಂದರ್ಭದ ಸೋಮವಾರ ಸಂತೆ ರಸ್ತೆ ಬದಿಯಲ್ಲೇ ನಡೆಯಬೇಕು.

ಕಿಲ್ಲೆ ಮೈದಾನದ ಸಂತೆ ವ್ಯಾಪಾರ ರಸ್ತೆ ಬದಿಯಲ್ಲಿ ನಡೆಯುವುದಕ್ಕೆ ಸಾರ್ವಜನಿಕ ವಲಯದಿಂದಲೂ ಆಕ್ಷೇಪ ಇರುವುದಿಲ್ಲ. ಆದರೆ ಸರಕಾರಿ ಕಚೇರಿ, ಸರಕಾರಿ ಆಸ್ಪತ್ರೆಗಳಿಗೆ ಬರುವವರಿಗೆ ಮಾತ್ರ ಒಂದಷ್ಟು ಸಮಸ್ಯೆ ಉಂಟಾಗುತ್ತದೆ.

ಪುತ್ತೂರು ಸಂತೆ ವ್ಯವಹಾರಕ್ಕೆ ಸೂಕ್ತ ಕಟ್ಟೆ ನಿರ್ಮಾಣ ಮಾಡಬೇಕೆಂಬ ಆಗ್ರಹಕ್ಕೆ ಇನ್ನೂ ಬೆಲೆ ಸಿಕ್ಕಿಲ್ಲ. ನಗರಸಭೆಯು ನಗರೋತ್ಥಾನ ಯೋಜನೆಯಲ್ಲಿ 1 ಕೋಟಿ ರೂ. ಅನುದಾನ ಇರಿಸಿದೆ, ಹಳೆಯ ಸಮುದಾಯ ಭವನದ ಬಳಿ ಜಾಗ ಗುರುತಿಸಲಾಗಿದೆ ಎನ್ನುತ್ತಿದೆಯಾದರೂ ಕಟ್ಟೆ ನಿರ್ಮಾಣ ಕಾಮಗಾರಿ ಮಾತ್ರ ಇನ್ನೂ ಆಗಿಲ್ಲ. ಸಾಂಪ್ರದಾಯಿಕವಾಗಿ ಧಾರ್ಮಿಕ ಹಿನ್ನೆಲೆಯೊಂದಿಗೆ ಕಿಲ್ಲೆ ಮೈದಾನದಲ್ಲಿ ಗಣೇಶೋತ್ಸವ ಯಥಾಸ್ಥಿತಿಯಲ್ಲಿ ನಡೆಯಬೇಕು. ಹೀಗಾಗಿ ಪ್ರತ್ಯೇಕ ಕಟ್ಟೆ ಇಲ್ಲದ ಸಂತೆ ಇನ್ನು ಕೆಲವು ಸೋಮವಾರಗಳಲ್ಲಿ ರಸ್ತೆ ಬದಿಯಲ್ಲೇ ನಡೆಯಬೇಕು.

ಸಂತೆ ಕಟ್ಟೆ ನಿರ್ಮಾಣ ಆಗಿಲ್ಲ
ಪುತ್ತೂರು ಸಂತೆ ವ್ಯವಹಾರಕ್ಕೆ ಸೂಕ್ತ ಕಟ್ಟೆ ನಿರ್ಮಾಣ ಮಾಡಬೇಕೆಂಬ ಆಗ್ರಹಕ್ಕೆ ಇನ್ನೂ ಬೆಲೆ ಸಿಕ್ಕಿಲ್ಲ. ನಗರಸಭೆಯು ನಗರೋತ್ಥಾನ ಯೋಜನೆಯಲ್ಲಿ 1 ಕೋಟಿ ರೂ. ಅನುದಾನ ಇರಿಸಿದೆ, ಹಳೆಯ ಸಮುದಾಯ ಭವನದ ಬಳಿ ಜಾಗ ಗುರುತಿಸಲಾಗಿದೆ ಎನ್ನುತ್ತಿದೆಯಾದರೂ ಕಟ್ಟೆ ನಿರ್ಮಾಣ ಕಾಮಗಾರಿ ಮಾತ್ರ ಇನ್ನೂ ಆಗಿಲ್ಲ. ಸಾಂಪ್ರದಾಯಿಕವಾಗಿ ಧಾರ್ಮಿಕ ಹಿನ್ನೆಲೆಯೊಂದಿಗೆ ಕಿಲ್ಲೆ ಮೈದಾನದಲ್ಲಿ ಗಣೇಶೋತ್ಸವ ಯಥಾಸ್ಥಿತಿಯಲ್ಲಿ ನಡೆಯಬೇಕು. ಹೀಗಾಗಿ ಪ್ರತ್ಯೇಕ ಕಟ್ಟೆ ಇಲ್ಲದ ಸಂತೆ ಇನ್ನು ಕೆಲವು ಸೋಮವಾರಗಳಲ್ಲಿ ರಸ್ತೆ ಬದಿಯಲ್ಲೇ ನಡೆಯಬೇಕು.

ಟಾಪ್ ನ್ಯೂಸ್

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.