ಪ್ರಾಪಂಚಿಕ ಜ್ಞಾನವುಳ್ಳ ಆಧುನಿಕ ಗೃಹಿಣಿಯನ್ನು ಗೌರವಿಸಿ: ಹೆಗ್ಗಡೆ

ಧರ್ಮಸ್ಥಳದಲ್ಲಿ 51ನೇ ವರ್ಷದ ಉಚಿತ ಸಾಮೂಹಿಕ ವಿವಾಹ

Team Udayavani, May 4, 2023, 7:20 AM IST

ಪ್ರಾಪಂಚಿಕ ಜ್ಞಾನವುಳ್ಳ ಆಧುನಿಕ ಗೃಹಿಣಿಯನ್ನು ಗೌರವಿಸಿ: ಹೆಗ್ಗಡೆ

ಬೆಳ್ತಂಗಡಿ: ಹಿಂದಿನ ಕಾಲದಲ್ಲಿ ವಿವಾಹವೆಂಬುದು ಹೆತ್ತವರಿಗೆ ಸಂಕಷ್ಟ ತರುವಂಥದ್ದಾಗಿತ್ತು. ಸಾಲ ಮಾಡಿ ಜೀತದಾಳುವಾಗುವ ಸ್ಥಿತಿ ನಿರ್ಮಾಣವಾಗಿತ್ತು. ಇದನ್ನು ತಡೆಯಲು ಶ್ರೀ ಕ್ಷೇತ್ರ ಧರ್ಮಸ್ಥಳ ಉಚಿತ ಸಾಮೂಹಿಕ ವಿವಾಹದ ನಿರ್ಧಾರ ಕೈಗೊಂಡಿತು. ಇಂದು ಸುಧಾರಣೆಯಾಗಿದೆ. ಗೃಹಿಣಿ ಪ್ರಾಂಪಚಿಕ ಜ್ಞಾನವುಳ್ಳ ಆಧುನಿಕ ಮಹಿಳೆಯಾಗಿದ್ದಾಳೆ. ಆಕೆಯನ್ನು ಗೌರವಿಸಿ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಹೇಳಿದರು.

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಬುಧವಾರ ಸಂಜೆ 6.40ರ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ ಅಮೃತವರ್ಷಿಣಿ ಸಭಾಭವನದಲ್ಲಿ ನಡೆದ 51ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾ ರಂಭದಲ್ಲಿ ಹಸೆಮಣೆ ಏರಿದ 201 ಜೋಡಿ ವಧೂವರರನ್ನು ಹರಸಿ ಮಾತನಾಡಿದರು.

ಪತಿ-ಪತ್ನಿ ಪರಸ್ಪರ ಹೊಂದಾಣಿಕೆ, ತಾಳ್ಮೆ ಮತ್ತು ಸಹನೆಯಿಂದ ಸುಖ-ಕಷ್ಟವನ್ನು ಸಮಾನವಾಗಿ ಸ್ವೀಕರಿಸಿ ಅನುಭವಿಸಿ, ಸಾರ್ಥಕ ದಾಂಪತ್ಯ ಜೀವನ ನಡೆಸಬೇಕು. ಆಗ ಮನೆಯೇ ಮಂದಿರವಾಗುತ್ತದೆ ಎಂದರು.

ಕನ್ನಡದ ಚಲನಚಿತ್ರ ನಟ ದರ್ಶನ್‌ ತೂಗುದೀಪ್‌ ಮಾತನಾಡಿ, ಧರ್ಮಸ್ಥಳವೆಂಬ ಪವಿತ್ರ ಪುಣ್ಯ ಕ್ಷೇತ್ರದಲ್ಲಿ ನನ್ನ ವಿವಾಹವೂ ನೆರ ವೇರಿತ್ತು.ಹೆಗ್ಗಡೆಯವರ ಆಶೀರ್ವಾದ ದಿಂದ ಇಂದು ಹಂತಕ್ಕೇರಿದ್ದೇನೆ ಎಂದರು. ನೂತನ ದಂಪತಿಗಳು ಪರಸ್ಪರ ಅರಿತುಕೊಂಡು, ಗೌರವಿಸಿ ಬಾಳಿ ಎಂದರು.

ಹೇಮಾವತಿ ವೀ. ಹೆಗ್ಗಡೆ, ಶ್ರದ್ಧಾ ಅಮಿತ್‌, ಡಿ. ಸುರೇಂದ್ರ ಕುಮಾರ್‌, ಅನಿತಾ ಸುರೇಂದ್ರ ಕುಮಾರ್‌, ಸುಪ್ರಿಯಾ ಹಷೇìಂದ್ರ ಕುಮಾರ್‌, ಶ್ರುತಾ ಜಿತೇಶ್‌ ಮತ್ತು ವಿಧಾನಪರಿಷತ್‌ ಸದಸ್ಯ ಪ್ರತಾಪಸಿಂಹ ನಾಯಕ್‌ ಉಪಸ್ಥಿತರಿದ್ದರು.

ಡಿ. ಹಷೇìಂದ್ರ ಕುಮಾರ್‌ ಸ್ವಾಗತಿಸಿದರು. ಶ್ರೀನಿವಾಸ ರಾವ್‌ ಧರ್ಮಸ್ಥಳ ವಂದಿಸಿದರು. ದಿವ್ಯ ಕುಮಾರಿ ನಿರ್ವಹಿಸಿದರು, ಎ. ವೀರು ಶೆಟ್ಟಿ ಕಾರ್ಯಕ್ರಮ ಸಂಯೋಜಿ ಸಿದರು.
ಆಯಾ ಜಾತಿಯ ಸಂಪ್ರದಾ ಯ ದಂತೆ ಮದುವೆಯ ಧಾರ್ಮಿಕ ವಿಧಿ- ವಿಧಾನಗಳನ್ನು ನಡೆಸಲಾಯಿತು.

ಪ್ರಮಾಣ ವಚನ
ನೂತನ ವಧು-ವರರು ಪ್ರೀತಿ- ವಿಶ್ವಾಸದಿಂದ ಒಬ್ಬರಿಗೊಬ್ಬರು ವಂಚನೆ ಮಾಡದೆ, ಯಾವುದೇ ದುರಾ ಭ್ಯಾಸಕ್ಕೂ ತುತ್ತಾಗದೆ ಬದುಕುವುದಾಗಿ ತುಳು ಹಾಗೂ ಕನ್ನಡ ಭಾಷೆಯಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

ವಿಶೇಷ ಜೋಡಿ
1972ರಿಂದ ಈವರೆಗೆ ನಡೆದ ವಿವಾಹದಲ್ಲಿ 12,777ನೇ ಜೋಡಿ ಯಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಿಬಂದಿ ಬಂಟ್ವಾಳ ತಾಲೂಕು ನೋಡೆಲ್‌ ಅಧಿಕಾರಿಯಾಗಿರುವ ಪ್ರಸಾದ್‌ ಮತ್ತು ಕೋಲಾರದಲ್ಲಿ ಜ್ಞಾನ ವಿಕಾಸದ ಸಮನ್ವಯಧಿಕಾರಿ ಅಶ್ವಿ‌ನಿ ಎಸ್‌. ದಂಪತಿಯನ್ನು ವಿಶೇಷವಾಗಿ ಗೌರವಿಸಲಾಯಿತು.

52 ಅಂತರ್ಜಾತಿ ಜೋಡಿ
ಹೊರರಾಜ್ಯಗಳಾದ ಕೇರಳ 3, ಆಂಧ್ರಪ್ರದೇಶದ 1 ಜೋಡಿ ವಿವಾಹವಾದರು. ದ.ಕ. ಜಿಲ್ಲೆಯ ಬೆಳ್ತಂಗಡಿ 5, ಪುತ್ತೂರು-6, ಮಂಗಳೂರು-5, ಉಡುಪಿ ಜಿಲ್ಲೆಯಿಂದ ಅತೀ ಹೆಚ್ಚು 24, ಉತ್ತರ ಕನ್ನಡ 17, ಶಿವಮೊಗ್ಗ 16, ಚಿಕ್ಕಮಗಳೂರಿನ 14, ಮೈಸೂರು 13, ಹಾಸನ 11, ಬೆಂಗಳೂರು 10, ತುಮಕೂರು 10 ಅತೀ ಹೆಚ್ಚು ಜೋಡಿ ಸೇರಿ ರಾಜ್ಯದ 22 ಜಿಲ್ಲೆಗಳಿಂದ ಬಂದಿದ್ದು, ಇದರಲ್ಲೂ 52 ಜೋಡಿಗಳು ಅಂತರ್ಜಾತಿ ವಿವಾಹವಾಗಿದ್ದಾರೆ. ಪರಿಶಿಷ್ಟ ಜಾತಿಯ 52 ಜೋಡಿ ಸೇರಿ ಒಟ್ಟು 37 ಸಮುದಾಯದ 201 ಜೋಡಿಗಳ ವಿವಾಹಕ್ಕೆ ಕ್ಷೇತ್ರ ಸಾಕ್ಷಿಯಾಯಿತು.

ಅನುಕರಣೀಯ ವ್ಯಕ್ತಿತ್ವ
ಉಚಿತ ಸಾಮೂಹಿಕ ವಿವಾಹಕ್ಕೆ ನಟ ದರ್ಶನ್‌ ಅವರನ್ನು ಕರೆಸಲಾಗಿದೆ. ರಾಜ್ಯದ ಜನತೆ ಅವರ ಅಭಿಮಾನಿಗಳು, ನಾನೂ ಅಭಿಮಾನಿ. ತೆರೆಯಾಚೆಗೂ ಇರುವ ಅವರ ಶ್ರೇಷ್ಠ ವ್ಯಕ್ತಿತ್ವ ಹಾಗೂ ಬದ್ಧತೆ ಅನುಕರಣೀಯ.
– ಡಾ| ಡಿ. ವೀರೇಂದ್ರ ಹೆಗ್ಗಡೆ, ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ

201 ವಿಶೇಷ ಜೋಡಿಗಳು
ಕೂಲಿ ಕಾರ್ಮಿಕರು – 57
ಕೃಷಿಕರು – 13
ವ್ಯಾಪಾರ – 13
ಚಾಲಕ – 35
ಖಾಸಗಿ ಉದ್ಯೋಗ – 75
ಸರಕಾರಿ ಉದ್ಯೋಗಿಗಳು – 1
ಮರದ ಕೆಲಸ – 5
ಮೀನುಗಾರಿಕೆ – 2

ಟಾಪ್ ನ್ಯೂಸ್

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.