“ಸಾಮಾಜಿಕ ಸಮಸ್ಯೆ ಪರಿಹರಿಸಲು ಗರಿಷ್ಠ ಪ್ರಯತ್ನ’

2ನೇ ಹೆಚ್ಚುವರಿ ಸಿವಿಲ್‌, ಜೆಎಂಎಫ್‌ಸಿ ನ್ಯಾಯಾಲಯ ಉದ್ಘಾಟನೆ

Team Udayavani, May 28, 2019, 6:00 AM IST

w-13

ಪುತ್ತೂರು: ನ್ಯಾಯದ ನಿರೀಕ್ಷೆಯಲ್ಲಿ ಬರುವ ಜನರ ನಿರೀಕ್ಷೆಗೆ ಚ್ಯುತಿ ಬಾರದಂತೆ ನ್ಯಾಯ ಒದಗಿಸುವ ಜವಾಬ್ದಾರಿ ನ್ಯಾಯಾಲಯಕ್ಕಿದೆ. ನ್ಯಾಯಾಧೀಶರು ಮತ್ತು ವಕೀಲರು ಸೇರಿ ಸಮಾಜದ ಸಮಸ್ಯೆಗಳನ್ನು ಬಗೆಹರಿಸಲು ಗರಿಷ್ಠ ಪ್ರಯತ್ನ ಮಾಡಬೇಕು ಎಂದು ಪುತ್ತೂರು ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ರುಡಾಲ್ಫ್ ಪಿರೇರಾ ಹೇಳಿದರು.

ನೂತನವಾಗಿ ಪುತ್ತೂರಿಗೆ ಮಂಜೂರಾದ ಎರಡನೇ ಹೆಚ್ಚುವರಿ ಸಿವಿಲ್‌ ಮತ್ತು ಜೆಎಂ ಎಫ್‌ಸಿ ನ್ಯಾಯಾಲಯವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಪುತ್ತೂರಿನಲ್ಲಿ ಅಧಿಕಾರ ಸ್ವೀಕರಿಸಿದ ಅವರು 150 ವರ್ಷಗಳ ಇತಿಹಾಸ ಹೊಂದಿರುವ ಪುತ್ತೂರಿನ ನ್ಯಾಯಾಲಯದಲ್ಲಿ ಕರ್ತವ್ಯ ನಿರ್ವಹಣೆ ಅವಕಾಶ ಲಭಿಸಿರುವುದು ಖುಷಿ ನೀಡಿದೆ ಎಂದರು.

ಪಾರದರ್ಶಕ ನ್ಯಾಯ
ನ್ಯಾಯಾಧೀಶರು ಹಾಗೂ ನ್ಯಾಯವಾದಿ ಗಳು ಪರಸ್ಪರ ಸಹಕಾರ ಮನೋ ಭಾವದೊಂದಿಗೆ ಕೆಲಸ ನಿರ್ವಹಿಸುವ ಮೂಲಕ ನ್ಯಾಯಾಲಯ ವ್ಯವಸ್ಥೆಯ ಗೌರವ ಹೆಚ್ಚಿಸಬಹುದು. ಕ್ಲಪ್ತ ಹಾಗೂ ಪಾರದರ್ಶಕವಾಗಿ ನ್ಯಾಯ ಒದಗಿಸುವ ಆವಶ್ಯಕತೆ ಇಂದು ಇದೆ. ಕಲಿಕೆ ಎಂಬುದಕ್ಕೆ ಕೊನೆಯೇ ಇಲ್ಲದಿರುವುದರಿಂದ ಎಲ್ಲ ರಿಂದಲೂ ತಿಳಿದುಕೊಂಡು ಸಮನ್ವಯದಿಂದ ಕೆಲಸ ಮಾಡಬೇಕು ಎಂದು ಹೇಳಿದರು.

ಸಹಕಾರ ನಿರೀಕ್ಷೆ
ಪ್ರಧಾನ ಹಿರಿಯ ಸಿವಿಲ್‌ ನ್ಯಾಯಾ ಧೀಶ ಮಂಜುನಾಥ್‌ ಮಾತನಾಡಿ, ನ್ಯಾಯಾಲಯ ವ್ಯವಸ್ಥೆಗೆ ಅಪಾರ ಗೌರವ ನೀಡುವ ಪುತ್ತೂರಿನಲ್ಲಿ ಕೆಲಸ ಮಾಡಲು ತುಂಬಾ ಖುಷಿ ಇದೆ. ವ್ಯವಸ್ಥೆಗೆ ತಪ್ಪಾಗುವಂತಹ ಯಾವುದೇ ಪ್ರಕರಣಗಳು ಇಲ್ಲಿ ನಡೆಯುವುದಿಲ್ಲ. ಇಂತಹ ಉತ್ತಮ ಸಹಕಾರವನ್ನು ಮುಂದೆಯೂ ನೀಡಬೇಕು ಎಂದು ವಿನಂತಿಸಿದರು.

ಕಲಾಪಕ್ಕೆ ಚಾಲನೆ
ಹಾಲಿ 5 ಕೋರ್ಟುಗಳಿರುವ ಪುತ್ತೂರಿಗೆ 6ನೇ ಕೋರ್ಟು ರೂಪದಲ್ಲಿ ಮಂಜೂರಾದ 2ನೇ ಹೆಚ್ಚುವರಿ ಸಿವಿಲ್‌ ಮತ್ತು ಜೆಎಂಎಫ್‌ಸಿ ನ್ಯಾಯಾಲಯ ವ್ಯವಸ್ಥೆಯನ್ನು ಮಿನಿ ವಿಧಾನಸೌಧದ ಬಳಿಯ ಮಧ್ಯಸ್ಥಿಕಾ ಕೇಂದ್ರದಲ್ಲಿ ನ್ಯಾಯಾಧೀಶ ರುಡಾಲ್ಫ್ ಪಿರೇರ ಅವರು ಉದ್ಘಾಟಿಸಿದರು. ಅನಂತರ ಆರಂಭಿಕ ನ್ಯಾಯಾಲಯ ಕಲಾಪಕ್ಕೆ ಚಾಲನೆ ನೀಡಲಾಯಿತು.

ಆನೆಮಜಲಿನಲ್ಲಿ ಕೋರ್ಟ್‌
ಪುತ್ತೂರು ವಕೀಲರ ಸಂಘದ ಅಧ್ಯಕ್ಷ ಮನೋಹರ್‌ ಕೆ.ವಿ. ಸ್ವಾಗತಿಸಿ ಮಾತ ನಾಡಿ, 2016ರಲ್ಲಿ ನೂತನ ಕೋರ್ಟ್‌ಗೆ ನೋಟಿಫಿಕೇಶನ್‌ ಆಗಿತ್ತು ಎಂದು ತಿಳಿಸಿದರು. ಬೇಸಗೆ ರಜೆಯ ಸಂದರ್ಭ ಅನಿರೀಕ್ಷಿತವಾಗಿ ಮಂಜೂರಾತಿ ಲಭಿಸಿದೆ. ಮುಂದೆ ಬನ್ನೂರು ಆನೆಮಜಲಿನಲ್ಲಿ ನಿರ್ಮಾಣವಾಗುವ ನ್ಯಾಯಾಲಯ ಸಂಕೀರ್ಣದಲ್ಲಿ ಎಲ್ಲ ನ್ಯಾಯಾಲಯ ವ್ಯವಸ್ಥೆಗಳು ಒಂದೇ ಕಡೆ ಕಾರ್ಯನಿರ್ವಹಿಸಲಿವೆ ಎಂದರು.

ಹೆಚ್ಚುವರಿ ಹಿರಿಯ ಸಿವಿಲ್‌ ನ್ಯಾಯಾಧೀಶೆ ಲತಾದೇವಿ ಜಿ.ಎ., 1ನೇ ಹೆಚ್ಚುವರಿ ಸಿವಿಲ್‌ ನ್ಯಾಯಾಧೀಶ ಕಿಶನ್‌ ಬಿ. ಮಡಲಗಿ, ಪುತ್ತೂರು ವಕೀಲರ ಸಂಘದ ಪದಾಧಿಕಾರಿಗಳಾದ ಸುರೇಶ್‌ ರೈ, ಮಂಜುನಾಥ ಎನ್‌.ಎಸ್‌. ವೆಂಕಟೇಶ್‌ ಎನ್‌., ಮಮತಾ, ದಿವ್ಯರಾಜ್‌ ಹೆಗ್ಡೆ ಉಪಸ್ಥಿತರಿದ್ದರು.
ಪುತ್ತೂರು ವಕೀಲರ ಸಂಘದ ನಿಕಟಪೂರ್ವ ಅಧ್ಯಕ್ಷ ಭಾಸ್ಕರ ಕೋಡಿಂಬಾಳ ಕಾರ್ಯಕ್ರಮ ನಿರ್ವಹಿಸಿದರು. ವಕೀಲರ ಸಂಘದ ಸದಸ್ಯರು, ಸಿಬಂದಿ ವರ್ಗದವರು ಉಪಸ್ಥಿತರಿದ್ದರು.

ನ್ಯಾಯಾಧೀಶರಿಗೆ ಸ್ವಾಗತ
ಪುತ್ತೂರಿನ ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾಗಿ ನೂತನವಾಗಿ ಆಗಮಿಸಿದ ರುಡಾಲ್ಫ್ ಪಿರೇರ ಹಾಗೂ ಎರಡನೇ ಹೆಚ್ಚುವರಿ ಸಿವಿಲ್‌ ನ್ಯಾಯಾಧೀಶರಾಗಿ ಆಗಮಿಸಿದ ವೆಂಕಟೇಶ ಎನ್‌. ಅವರನ್ನು ಸ್ವಾಗತಿಸಿ ಗೌರವಿಸಲಾಯಿತು.

ಟಾಪ್ ನ್ಯೂಸ್

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.