ಕ್ಷೀರಭಾಗ್ಯ ಹಾಲಿನ ಪುಡಿ ಪ್ಯಾಕೆಟ್ ತ್ಯಾಜ್ಯವಾಗಿ ಪತ್ತೆ
Team Udayavani, May 18, 2022, 1:07 AM IST
ಸುಳ್ಯ: ಮಕ್ಕಳಿಗೆ ಒದಗಿಸಲಾಗುವ “ಕ್ಷೀರಭಾಗ್ಯ’ ಯೋಜನೆಯ ಹಾಲಿನ ಪುಡಿ ಪ್ಯಾಕೆಟ್ಗಳು ಸುಳ್ಯ ತಾಲೂಕಿನ ಐವರ್ನಾಡು ಗ್ರಾಮದ ಬೇಂಗಮಲೆ ಪ್ರದೇಶದಲ್ಲಿ ತ್ಯಾಜ್ಯವಾಗಿ ಪತ್ತೆಯಾಗಿವೆ.
ರಸ್ತೆ ಬದಿಯಲ್ಲಿ ತ್ಯಾಜ್ಯ ಎಸೆಯ ಲಾಗಿದೆ ಎಂದು ಬಂದ ದೂರಿನನ್ವಯ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಶ್ಯಾಮ್ಪ್ರಸಾದ್ ಅವರು ಸ್ಥಳ ಪರಿಶೀಲನೆ ನಡೆಸಿದಾಗ “ಕ್ಷೀರಭಾಗ್ಯ’ ಯೋಜನೆಯಡಿ ಮಕ್ಕಳಿಗೆ ಉಚಿತವಾಗಿ ವಿತರಿಸಬೇಕಾದ ಹಾಲಿನ ಪುಡಿ ಪ್ಯಾಕೆಟ್ಗಳು ಅವು ಎಂದು ತಿಳಿದು ಬಂತು.
ಹಾಲಿನ ಪುಡಿ ಪ್ಯಾಕೆಟ್ಗಳಿಂದ ಹೊರಚೆಲ್ಲಿದ ಸ್ಥಿತಿಯಲ್ಲಿತ್ತು. ಇವುಗಳು ಇಲ್ಲಿಗೆ ಹೇಗೆ ಬಂದವು ಎಂಬುದು ತಿಳಿದುಬಂದಿಲ್ಲ.
ಬೇಂಗಮಲೆ ವ್ಯಾಪ್ತಿಯಲ್ಲಿ ತ್ಯಾಜ್ಯ ಎಸೆಯುವ ಪ್ರಕರಣಗಳಲ್ಲಿ ಹಲವರನ್ನು ಪತ್ತೆ ಹಚ್ಚಿ ದಂಡ ವಿಧಿಸುವ ಕಾರ್ಯವನ್ನು ಐವರ್ನಾಡು ಗ್ರಾ. ಪಂ. ವತಿಯಿಂದ ಮಾಡಲಾಗುತ್ತಿದ್ದರೂ ತ್ಯಾಜ್ಯ ಎಸೆಯುವವರು ತಮ್ಮ ಕೃತ್ಯವನ್ನು ಮುಂದುವರಿಸುತ್ತಿದ್ದು, ಗ್ರಾ.ಪಂ.ಗೆ ಇದು ತಲೆನೋವಾಗಿ ಪರಿಣಮಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ
Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ
Telangana: ಜಾರ್ಖಂಡ್ ಗವರ್ನರ್ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ
Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ
ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ