ಕಡಬ: ಆನೆ ದಾಳಿ ಪ್ರಕರಣ… ಘಟನಾ ಸ್ಥಳಕ್ಕೆ ಸಚಿವ ಎಸ್.ಅಂಗಾರ ಭೇಟಿ
Team Udayavani, Feb 20, 2023, 8:10 PM IST
ಸುಬ್ರಹ್ಮಣ್ಯ: ಕಡಬ ತಾಲೂಕಿನ ರೆಂಜಿಲಾಡಿಯಲ್ಲಿ ಸೋಮವಾರ ಬೆಳಗ್ಗೆ ಆನೆ ದಾಳಿಗೊಳಗಾಗಿ ಇಬ್ಬರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನಾ ಸ್ಥಳಕ್ಕೆ ಸ್ಥಳೀಯ ಶಾಸಕ, ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ ಅವರು ಸಂಜೆ ವೇಳೆ ಭೇಟಿ ನೀಡಿದರು.
ಘಟನಾ ಸ್ಥಳಕ್ಕೆ ಭೇಟಿ ನೀಡಿ ಘಟನೆಯ ಬಗ್ಗೆ ಅಧಿಕಾರಿಗಳು ಹಾಗೂ ಸ್ಥಳೀಯರಿಂದ ಮಾಹಿತಿ ಪಡೆದು, ಮೃತ ರಂಜಿತಾ ಅವರ ಮನೆಗೆ ತೆರಳಿ ಮನೆಯವರಿಗೆ ಸಾಂತ್ವನ ತಿಳಿಸಿದರು.
ಕಾಡಾನೆ ಸೆರೆಹಿಡಿಯಲು ಮೈಸೂರಿನಿಂದ ಸಾಕು ಅನೆಗಳನ್ನು ತರಿಸಿಕೊಳ್ಳಲಾಗುವುದು. ಈ ನಿಟ್ಟಿನಲ್ಲಿ ಈಗಾಗಲೇ ಮೈಸೂರಿನಿಂದ ಆನೆಗಳು ಬರುತ್ತಿದ್ದು, ರಾತ್ರಿ ವೇಳೆಗೆ ಅಗಮಿಸುವ ನಿರೀಕ್ಷೆಯಿದೆ. ಬಳಿಕ ಸೆರೆಹಿಡಿಯುವ ಕಾರ್ಯ ನಡೆಸಲಾಗುವುದು ಎಂದ ಅವರು ಮೃತರ ಮನೆಯವರಿಗೆ ಸರಕಾರದ ವತಿಯಿಂದ ಪರಿಹಾರ ನೀಡಲಾಗುತ್ತದೆ ಎಂದರು. ರಾಜಕೀಯ ಮುಖಂಡರು, ಅರಣ್ಯ ಇಲಾಖೆಯ ಅಧಿಕಾರಿಗಳು ಜೊತೆಗಿದ್ದರು.
ಆನೆ ದಾಳಿಯಲ್ಲಿ ರೆಂಜಿಲಾಡಿ ಗ್ರಾಮದ ನೈಲದ ರಂಜಿತಾ (24) ಹಾಗೂ ರಮೇಶ್ ರೈ ನೈಲ (58) ಎಂಬರು ಮೃತರಾಗಿದ್ದರು.
ಇದನ್ನೂ ಓದಿ: ಉಳ್ಳಾಲ: ಹರೇಕಳದ ಒಂಟಿ ಮನೆಯಲ್ಲಿ ಮಹಿಳೆಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ