ಬೆಳಾಲು ವಿದ್ಯಾರ್ಥಿನಿ ಕವನ ಸಂಕಲನಕ್ಕೆ ಶಿಕ್ಷಣ ಸಚಿವರ ಮೆಚ್ಚುಗೆ
Team Udayavani, May 23, 2020, 10:36 AM IST
ಬೆಳ್ತಂಗಡಿ: ತಾಲೂಕಿನ ಬೆಳಾಲು, ಮಾಯಾ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 8ನೇ ತರಗತಿಯಲ್ಲಿದ್ದ ವಿದ್ಯಾರ್ಥಿನಿ ರೇಷ್ಮಾ ಬರೆದ “ಗುರುಕಾಣಿಕೆ’ ಎಂಬ ಕವನ ಸಂಕಲನ ಮೆಚ್ಚಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅಭಿನಂದನ ಪತ್ರ ಬರೆದಿದ್ದಾರೆ.
ಪ್ರೌಢ ಶಾಲೆಯಲ್ಲಿರುವಾಗಲೇ ಮನಸ್ಸಿನಲ್ಲಿ ಮೂಡಿದ ಭಾವನೆಗಳನ್ನು ಕವನಗಳ ರೂಪದಲ್ಲಿ ವ್ಯಕ್ತಪಡಿಸಿ ಕಾವ್ಯಲೋಕಕ್ಕೆ ತನ್ನ ಕಾಣಿಕೆ ಅರ್ಪಿಸುತ್ತಿರುವುದು ಖುಷಿಯ ಸಂಗತಿಯಾಗಿದೆ. ನಾಡು, ನುಡಿ, ರಾಷ್ಟ್ರ, ಗುರುಗಳು, ತಂದೆ, ತಾಯಿ ಹಾಗೂ ಪ್ರಕೃತಿ ಪ್ರೇಮದ ಕುರಿತ ಸಾಲುಗಳು ಮೆಚ್ಚುವಂತದ್ದು. ಸರಕಾರಿ ಶಾಲೆಯ ವಿದ್ಯಾರ್ಥಿನಿಯಾಗಿ ನೀನು ಎಲ್ಲರಿಗೂ ಮಾದರಿ ಎನ್ನಲು ಹೆಮ್ಮೆ ಅನಿಸುತ್ತದೆ. ಈ ಕಾವ್ಯ ಕೃಷಿಯನ್ನು ಮುಂದುವರಿಸಿ ಕನ್ನಡ ಸಾರಸ್ವತ ಲೋಕಕ್ಕೆ ಉತ್ತಮ ಕೃತಿಗಳು ಸಮರ್ಪಿತವಾಗಲಿ ಎಂದು ಶಿಕ್ಷಣ ಸಚಿವರು ಪತ್ರದಲ್ಲಿ ಹಾರೈಸಿದ್ದಾರೆ.
ಬೆಳಾಲು ಕೆರೆಕೋಡಿ ನಿವಾಸಿಯಾಗಿರು ರೇಷ್ಮಾ ಮಾಯಾ ಶಾಲೆಯಲ್ಲಿ 8ನೇ ತರಗತಿ ಪೂರ್ಣಗೊಳಿಸಿ ಪ್ರಸಕ್ತ ಬೆಳ್ತಂಗಡಿ ಸರಕಾರಿ ಪ್ರೌಢಶಾಲೆಯಲ್ಲಿ 9ನೇ ತರಗತಿ ವ್ಯಾಸಂಗ ಮಾಡುತ್ತಿದ್ದಾರೆ. ಕಲಿಕೆಯಲ್ಲೂ ತರಗತಿಗೆ ಪ್ರಥಮ ಸ್ಥಾನಿಯಾಗಿದ್ದು, ಪ್ರಬಂಧ, ಕವನ ಸಂಗ್ರಹ ಸೇರಿದಂತೆ ಹಲವಾರು ಚಟುವಟಿಕೆಯಲ್ಲೂ ಪ್ರತಿಭಾನ್ವಿತೆಯಾಗಿದ್ದಾಳೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು
MUST WATCH
ಹೊಸ ಸೇರ್ಪಡೆ
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್