ವಿದ್ಯಾರ್ಥಿನಿ ದೀಕ್ಷಾಳ ಮನೆಗೆ ಶಾಸಕ, ಬಿಇಓ ಭೇಟಿ: ಹೊಸ ಮನೆ ನಿರ್ಮಾಣದ ಭರವಸೆ


Team Udayavani, Jun 30, 2021, 12:04 PM IST

ವಿದ್ಯಾರ್ಥಿನಿ ದೀಕ್ಷಾಳ ಮನೆಗೆ ಶಾಸಕ, ಬಿಇಓ ಭೇಟಿ: ಹೊಸ ಮನೆ ನಿರ್ಮಾಣದ ಭರವಸೆ

ಪುತ್ತೂರು: ಚಿಕ್ಕಮುಡ್ನೂರು ಗ್ರಾಮದ ಕುಂಬುರ್ಗ ನಿವಾಸಿ, ಮಂಗಳೂರು ದಕ್ಷಿಣದ ಮುತ್ತೂರಿನ ಕರ್ನಾಟಕ ಪಬ್ಲಿಕ್ ಸ್ಕೂಲ್ನಲ್ಲಿ ಎಸೆಸೆಲ್ಸಿ ವಿದ್ಯಾರ್ಥಿನಿಯಾಗಿರುವ ದೀಕ್ಷಾ ಶೆಟ್ಟಿ ಅವರ ಮನೆ ಕುಸಿದ ಹಿನ್ನೆಲೆಯಲ್ಲಿ ಸ್ಥಳಕ್ಕೆ ಮಂಗಳವಾರ ಪುತ್ತೂರು ಶಾಸಕ ಸಂಜೀವ ಮಠಂದೂರು, ಕ್ಷೇತ್ರ ಶಿಕ್ಷಣಾಕಾರಿ ಲೋಕೇಶ್ ಸಹಿತ ಹಲವರು ಭೇಟಿ ನೀಡಿ ಸಮಸ್ಯೆ ಆಲಿಸಿ ಧೈರ್ಯ ತುಂಬಿದರು.

ವಿದ್ಯಾರ್ಥಿನಿ ತಂದೆ, ತಾಯಿ, ಸಹೋದರ ವಾಸವಾಗಿದ್ದ ಮನೆಯು ಮಳೆ ಕಾರಣದಿಂದ ಜೂ.28ರಂದು ಕುಸಿದಿತ್ತು. ಇಂಥ ಪರಿಸ್ಥಿತಿಯಲ್ಲಿ ಎಸೆಸೆಲ್ಸಿ ಪರೀಕ್ಷೆಗೆ ಸಿದ್ಧವಾಗುವುದು ಹೇಗೆ ಎಂಬ ಅವಳ ಆತಂಕವನ್ನು ಮಂಗಳವಾರ ಉದಯವಾಣಿ ವರದಿ ಪ್ರಕಟಿಸಿ ಸಂಬಂಧಪಟ್ಟವರ ಗಮನ ಸೆಳೆದಿತ್ತು.

ಸೋಮವಾರವೇ ಬನ್ನೂರು ಗ್ರಾ.ಪಂ. ಅಧ್ಯಕ್ಷೆ ಜಯ ರಮೇಶ್ ಅವರ ನೇತೃತ್ವದಲ್ಲಿ ಈ ಕುಟುಂಬವನ್ನು ಗ್ರಾ.ಪಂ. ಸಭಾಭವನ ಕಟ್ಟಡಕ್ಕೆ ಸ್ಥಳಾಂತರಿಸಿ ಆಸರೆ ನೀಡಲಾಗಿದೆ. ಶಾಸಕ ಸಂಜೀವ ಮಠಂದೂರು ಮನೆಯವರ ಸಮಸ್ಯೆ ಆಲಿಸಿ ಬಳಿಕ ಮಾಧ್ಯಮದೊಂದಿಗೆ ಮಾತನಾಡಿ, ದಾಖಲೆಪತ್ರಗಳ ಇಲ್ಲದೆ ಈ ಕುಟುಂಬಕ್ಕೆ ಸರಕಾರದ ಸವಲತ್ತು ಸಿಗುತಿಲ್ಲ. ಪಕ್ಷದ ಹಾಗೂ ಸಮಾಜದ ಸಹಕಾರದಿಂದ ಹೊಸ ಮನೆ ನಿರ್ಮಿಸಿಕೊಡಲಾಗುವುದು. ಅಲ್ಲಿಯ ತನಕ ಗ್ರಾ.ಪಂ.ಮೂಲಕ ವಾಸಕ್ಕೆ ತಾತ್ಕಾಲಿಕ ಮನೆ ವ್ಯವಸ್ಥೆ ಹಾಗೂ ಅಗತ್ಯ ಆಹಾರದ ವ್ಯವಸ್ಥೆ ಒದಗಿಸಲಾಗುವುದು ಎಂದರು. ಇದೇ ಸಂದರ್ಭದಲ್ಲಿ ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಸಹಜ್ ರೈ ಬಳಜ್ಜ ನೇತೃತ್ವದಲ್ಲಿ ಆಹಾರ ಕಿಟ್ ವಿತರಿಸಲಾಯಿತು.

ಪುತ್ತೂರಿನಲ್ಲಿ ಪರೀಕ್ಷೆಗೆ ಅವಕಾಶ:

ವಿದ್ಯಾರ್ಥಿನಿ ಬಯಸಿದರೆ ಕೊಂಬೆಟ್ಟು ಪ್ರೌಢಶಾಲೆಯಲ್ಲಿ ಎಸೆಸೆಲ್ಸಿ ಪರೀಕ್ಷೆ ಬರೆಯಲು ಅವಕಾಶ ನೀಡುವುದಾಗಿ ಪುತ್ತೂರು ಬಿಇಓ ತಿಳಿಸಿದರು. ಸದ್ಯ ಆಕೆ ತಾನು ಕುಪ್ಪೆಪದವಿನ ಸಂಬಂಧಿಕರ ಮನೆಯಿಂದ ಶಾಲೆಗೆ ತೆರಳುತ್ತಿದ್ದು ಬುಧವಾರ ಅಲ್ಲಿಗೆ ತೆರಳಿ ಅಲ್ಲೇ ಪರೀಕ್ಷೆ ಬರೆಯುವುದಾಗಿ ತಿಳಿಸಿದ್ದಾಳೆ ಎಂದು ಬಿಇಓ ಲೋಕೇಶ್ ಅವರು ಉದಯವಾಣಿಗೆ ಮಾಹಿತಿ ನೀಡಿದ್ದಾರೆ.

ಸಹೋದರ ಕೊಂಬೆಟ್ಟು ಪ್ರೌಢಶಾಲೆಗೆ ದಾಖಲು :

ಆಕೆಯ ಸಹೋದರ ವಿಕಾಸ್ ಸ್ಥಳೀಯ ಶಾಲೆಯೊಂದರಲ್ಲಿ 7 ನೇ ತರಗತಿ ಪೂರ್ಣಗೊಳಿಸಿದ್ದಾನೆ. 8 ನೇ ತರಗತಿಗೆ ಪುತ್ತೂರು ಕೊಂಬೆಟ್ಟು ಸರಕಾರಿ ಪ್ರೌಢಶಾಲೆಗೆ ದಾಖಲಿಸುವಂತೆ ಸಿಆರ್ಪಿಗೆ ಸೂಚಿಸಿದ ಬಿಇಓ ಲೋಕೇಶ್ ಅವರು ಬುಧವಾರವೇ ದಾಖಲಾತಿ ಮಾಡುವಂತೆ ನಿರ್ದೇಶಿಸಿದರು.

ವಿವಿಧ ಸಂಘಟನೆಗಳ ಭರವಸೆ:

ಕುಸಿದ ಮನೆ ಪುನರ್ ನಿರ್ಮಾಣಕ್ಕೆ ಪುತ್ತೂರು ಬಂಟರ ಸಂಘವು ನೆರವು ನೀಡುವ ಭರವಸೆ ನೀಡಿದೆ. ಇನ್ನೊಂದೆಡೆ ಕಾಂಗ್ರೆಸ್ ಮುಖಂಡ ಹೇಮನಾಥ ಶೆಟ್ಟಿ ಅಭಿಮಾನಿ ಬಳಗವು ಈ ಕುಟುಂಬಕ್ಕೆ ದರ್ಬೆಯಲ್ಲಿ ತಾತ್ಕಾಲಿಕ ಮನೆ ಒದಗಿಸುವ ಜತೆಗೆ ಮುಂಬರುವ ದಿನಗಳಲ್ಲಿ ಹೊಸ ಮನೆ ನಿರ್ಮಿಸಿ ಕೊಡುವ ಆಶ್ವಾಸನೆ ನೀಡಿದೆ.

ಟಾಪ್ ನ್ಯೂಸ್

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.