ಬೆಳ್ತಂಗಡಿಯ 292 ಮತಗಟ್ಟೆಗಳಲ್ಲಿ ಮತದಾನ ಆರಂಭ: ಶಾಸಕ ಹರೀಶ್ ಪೂಂಜ ಮತದಾನ
Team Udayavani, Dec 27, 2020, 8:31 AM IST
ಬೆಳ್ತಂಗಡಿ: ತಾಲೂಕಿನಲ್ಲಿ 46 ಗ್ರಾ.ಪಂ.ಗಳ 634 ಸ್ಥಾನಗಳಿಗೆ 292 ಮತಗಟ್ಟೆಗಳಲ್ಲಿ ಮುಂಜಾನೆ 7ಗಂಟೆಯಿಂದಲೇ ಮತದಾನ ಆರಂಭಗೊಂಡಿದೆ. ಶಾಸಕ ಹರೀಶ್ ಪೂಂಜ ಅವರು ಕುಟುಂಬ ಸಮೇತರಾಗಿ ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದರು.
46 ಗ್ರಾ.ಪಂ.ಗಳ ಒಟ್ಟು 631 ಸ್ಥಾನಗಳ ಪೈಕಿ ಒಟ್ಟು 6 ಗ್ರಾ.ಪಂ.ಗಳ 7 ಸ್ಥಾನಗಳಿಗೆ ಅವಿರೋಧವಾಗಿ ಆಯ್ಕೆ ನಡೆದಿದೆ. ಪ್ರಸಕ್ತ 624 ಸ್ಥಾನಗಳಿಗೆ ರವಿವಾರ ಮತದಾನ ಆರಂಭಗೊಂಡಿದೆ.
ಬೆಳ್ತಂಗಡಿ ತಾಲೂಕಿನ 2,04205 ಮತದಾರರು ಇಂದು ಒಟ್ಟು 1439 ಅಭ್ಯರ್ಥಿಗಳ ಭವಿಷ್ಯ ಬರೆಯಲಿದ್ದಾರೆ. ಚಳಿ ಮಧ್ಯೆಯೂ ಉತ್ಸಾಹದಿಂದ ಮುಂಜಾನೆಯೇ ಮತದಾನಕ್ಕೆ ಸರತಿ ಸಾಲು ಕಂಡುಬಂತು.
1605 ಮಂದಿ ಸಿಬಂದಿ ನೇಮಕ
ಒಟ್ಟು 1605 ಮಂದಿ ಮತಗಟ್ಟೆ ಸಿಬಂದಿಗಳನ್ನು ನೇಮಿಸಲಾಗಿದೆ. ಮತಗಟ್ಟೆ ಅಧಿಕಾರಿ-321 (ಪಿಆರ್ಒ), ಒಂದನೇ ಮತಗಟ್ಟೆ ಅಧಿಕಾರಿ-321 (ಎಪಿಆರ್ಒ), 2ನೇ, 3ನೇ ಮತಗಟ್ಟೆ ಅಧಿಕಾರಿ- 642, ಡಿ ಗ್ರೂಪ್ ಸಿಬಂದಿ- 321 ಒಟ್ಟು 1605 ಮಂದಿ ನೇಮಿಸಲಾಗಿದೆ.
20 ಸೆಕ್ಟರ್
ಚುನಾವಣೆಗೆ 46 ಗ್ರಾಮ ಪಂಚಾಯಿತಿಗಳನ್ನು 20 ಸೆಕ್ಟರ್ ಆಗಿ ವಿಂಗಡಿಸಲಾಗಿದೆ. ಈಗಾಗಲೇ ಅತೀ ಸೂಕ್ಷ್ಮ, ಸೂಕ್ಷ್ಮ ಮತಗಟ್ಟೆಗಳಿವೆ. ವೇಣೂರು ಹಾಗೂ ಬೆಳ್ತಂಗಡಿ ನಕ್ಸಲ್ ಪೀಡಿತ ಪ್ರದೇಶದಲ್ಲಿ ಎಎನ್ಎಫ್ 2 ತಂಡ ಕಾರ್ಯಾಚರಣೆ ನಡೆಸಿದೆ.
ಇದನ್ನೂ ಓದಿ:ಗ್ರಾ.ಪಂ. ಚುನಾವಣೆ: ಎರಡನೇ ಹಂತದ ಮತದಾನ ಆರಂಭ
1 ಡಿವೈಎಸ್ಪಿ, 2 ಸಿಪಿಐ, 8 ಪಿಎಸ್ಐ, 12 ಎಎಸ್ಐ, 22 ಮಂದಿ ಎಚ್ಸಿ ಮತ್ತು ಪಿಸಿಗಳು 92 ಹಾಗೂ 170 ಹೋಂಗಾರ್ಡ್ಗಳನ್ನು ನಿಯೋಜಿಸಲಾಗಿದೆ. ಕೆಎಸ್ಆರ್ ಪಿ ಒಂದು ತಂಡ ಮತ್ತು ಜಿಲ್ಲಾ ಸಶಸ್ತ್ರ ಪಡೆಗಳು 4 ತಂಡಗಳು ಚುನಾವಣೆಗೆ ನಿಯೋಜಿಸಲಾಗಿದೆ.
ಮದುವೆ ಸಂಭ್ರಮದ ಮಧ್ಯೆ ಬಂದು ಮತಹಾಕಿದ ಸಹೋದರಿಯರು
ಮುಂಡಾಜೆ ಗ್ರಾಮದ ಕೂಳೂರು ನಿವಾಸಿ ಇಬ್ರಾಹಿಂ ಕೂಳೂರು ಅವರ ಇಬ್ಬರು ಮಕ್ಕಳಾದ ಝುಹುರಾ ಮತ್ತು ಖೈರುನ್ನಿಸಾ ಸಹೋದರಿಯರು ತಮ್ಮದೇ ಮದುವೆ ಸಂಭ್ರಮದ ಮಧ್ಯೆ ಮುಂಡಾಜೆ ಗ್ರಾಮದ 103 ಭಾಗ ಸಂಖ್ಯೆಯ ಮತಕೇಂದ್ರಕ್ಕೆ ಆಗಮಿಸಿ ತಮ್ಮ ಹಕ್ಕು ಚಲಾಯಿಸುವ ಮೂಲಕ ಸಾಮಾಜಿಕ ಬದ್ಧತೆ ಮೆರೆದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
Dharmasthala; ಕೆಎಸ್ಸಾರ್ಟಿಸಿ ಬಸ್ನಡಿ ಸಿಲುಕಿ ಮಹಿಳೆ ಸಾವು
ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್ ವಶಕ್ಕೆ
Aranthodu ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಹಲ್ಲೆ
MUST WATCH
ಹೊಸ ಸೇರ್ಪಡೆ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ
ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್
ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್