ಕೆಸರು ಗದ್ದೆ ಕ್ರೀಡಾಕೂಟದಲ್ಲಿ 100ಕ್ಕೂ ಅಧಿಕ ಪ್ರಶಸ್ತಿ

 ಗ್ರಾಮೀಣ ಪ್ರತಿಭೆಯ ದಾಖಲೆ ; ಕಂಬಳ ಓಟಗಾರನಾಗಿಯೂ ತರಬೇತಿ

Team Udayavani, Dec 13, 2021, 6:53 PM IST

ಕೆಸರು ಗದ್ದೆ ಕ್ರೀಡಾಕೂಟದಲ್ಲಿ 100ಕ್ಕೂ ಅಧಿಕ ಪ್ರಶಸ್ತಿ

ಸುಬ್ರಹ್ಮಣ್ಯ: ಕಡಬ ತಾಲೂಕಿನ ರೆಂಜಿಲಾಡಿ ಗ್ರಾಮದ ತಿರುಮಲೇಶ್ವರ ಸಾಕೋಟೆ ಎಂಬ ಯುವಕ ತುಳುನಾಡಿನ ಕೆಸರು ಗದ್ದೆ ಕ್ರೀಡಾಕೂಟದಲ್ಲಿ ನೂರಕ್ಕೂ ಅಧಿಕ ಪ್ರಶಸ್ತಿ ಪಡೆದು ದಾಖಲೆ ನಿರ್ಮಿಸಿದ್ದಾರೆ. ಇದೀಗ ತಿರುಮಲೇಶ್ವರ ಇತ್ತೀಚೆಗೆ ನೆಲ್ಯಾಡಿ ಹಾರ್ಪಳದಲ್ಲಿ ನಡೆದ ಕೆಸರುಗದ್ದೆ ಕ್ರೀಡಾಕೂಟದಲ್ಲಿ ಎರಡು ಪ್ರಶಸ್ತಿ ಪಡೆದು ತನ್ನ ಪ್ರಶಸ್ತಿಗಳ ಸಂಖ್ಯೆಯನ್ನು 104ಕ್ಕೆ ಏರಿಸಿದ್ದಾರೆ.

ತಿರುಮಲೇಶ್ವರ ಕೆಸರು ಗದ್ದೆ ಕ್ರೀಡಾ ಕೂಟದಲ್ಲಿ ಮೊದಲಿಗೆ ಭಾಗವಹಿಸಿದ್ದು ಕಾವಿನಮೂಲೆಯಲ್ಲಿ. ಅಲ್ಲಿ ಯಾವುದೇ ಪ್ರಶಸ್ತಿ ಪಡೆಯಲು ಸಾಧ್ಯವಾಗದಿದ್ದರೂ ಛಲ ಬಿಡದ ಅವರು, ಮುಂದೆ ರೆಂಜಿಲಾಡಿಯ ನೂಜಿಬೈಲ್‌ನಲ್ಲಿ ನಡೆದ ಕೆಸರು ಗದ್ದೆ ಕ್ರೀಡಾಕೂಟದಲ್ಲಿ ಮೊದಲ ಪ್ರಶಸ್ತಿ ಪಡೆದರು. ಬಳಿಕ ತುಳುನಾಡಿನ ಹಲವೆಡೆ ನಿರಂತರವಾಗಿ ಕೆಸರು ಗದ್ದೆ ಕ್ರೀಡಾಕೂಟದಲ್ಲಿ ಭಾಗವಹಿಸಿ 104 ಪ್ರಶಸ್ತಿ ಪಡೆದು ಸಾಧನೆ ಮೆರೆದಿದ್ದಾರೆ. ತಿರುಮಲೇಶ್ವರ ಕೆಲವು ಕಡೆ ಸೋಲನ್ನು ಅನುಭವಿಸಿದ್ದಾರೆ. ಆದರೆ ಅವರು ತನ್ನ ಸಾಧನೆಯ ಛಲದಿಂದ ಯಾವುತ್ತೂ ಹಿಂದೆ ಸರಿಯಲಿಲ್ಲ.

26 ವರ್ಷದ ತಿರುಮಲೇಶ್ವರ ಅಂಗಡಿ ಉದ್ಯಮ ನಡೆಸುವ ಜತೆಗೆ ಕೃಷಿಯನ್ನೂ ಮಾಡುತ್ತಾರೆ. ಬಿಡುವಿನ ವೇಳೆಯಲ್ಲಿ ಕೆಸರು ಗದ್ದೆ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಪ್ರಸ್ತುತ ನೂಜಿಬೈಲ್‌ ತುಳುನಾಡ ತುಡರ್‌ ಯುವಕ ಮಂಡಲದ ಅಧ್ಯಕ್ಷರಾಗಿ, ತೆಗ್‌ರ್‌ ತುಳುಕೂಟದ ಸದಸ್ಯರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ಕಂಬಳದಲ್ಲೂ ಆಸಕ್ತಿ ಹೊಂದಿರುವ ಇವರು ಕಂಬಳದ ಕೋಣಗಳ ಓಡಿಸುವ ತರಬೇತಿಯನ್ನು ಮೂಡುಬಿದಿರೆಯಲ್ಲಿ ಪಡೆಯುತ್ತಿದ್ದಾರೆ. ತನ್ನ ಗದ್ದೆಯಲ್ಲಿ ಬೆಳಗ್ಗೆ ಬೇಗ ಎದ್ದು ಓಟದ ತರಬೇತಿ ನಡೆಸುವ ಇವರು ಕೆಸರು ಗದ್ದೆ ಕ್ರೀಡಾಕೂಟದ ಆಸಕ್ತ ಯುವಕರನ್ನು ಈ ಕ್ರೀಡೆಗೆ ಆಹ್ವಾನಿಸಿ ಅವರನ್ನು ಪ್ರೋತ್ಸಾಹಿಸುತ್ತಿದ್ದಾರೆ. ಜತೆಗೆ ಕೆಸರುಗದ್ದೆ ಕ್ರೀಡಾಕೂಟ ಆಯೋಜಿ ಸುವಲ್ಲಿಯೂ ಸಹಕಾರ ನೀಡುತ್ತಿದ್ದಾರೆ.

ಕೆಸರು ಗದ್ದೆ ಕ್ರೀಡಾಕೂಟ
ತುಳುನಾಡಿನ ಅಪ್ಪಟ ಗ್ರಾಮೀಣ ಸೊಗಡಿನ, ಸಂಸ್ಕೃತಿಯ ಪ್ರತೀಕ ಕೆಸರು ಗದ್ದೆ ಕ್ರೀಡಾಕೂಟ. ಇದು ಕೆಸರು ಗದ್ದೆಯಲ್ಲಿ ನಡೆಯುತ್ತದೆ. ಕೊಯ್ಲು ಮುಗಿದ ಬಳಿಕ ಈ ಕ್ರೀಡಾಕೂಟ ಸಂಘಟನೆಗಳ ನೇತೃತ್ವದಲ್ಲಿ ಆಯೋಜನೆಗೊಳ್ಳುತ್ತದೆ. ಕೆಸರು ಗದ್ದೆ ಓಟ, ಹಿಮ್ಮುಖ ಓಟ, ರಿಲೇ, ಗೋಣಿಚೀಲ ಓಟ, ಹಗ್ಗಜಗ್ಗಾಟ, ಕಬಡ್ಡಿ, ಮಡಿಕೆ ಒಡಿಯುವುದು, ನಿಧಿ ಶೋಧ, ಉಪ್ಪು ಮೂಟೆ ಸೇರಿದಂತೆ 30ರಿಂದ 50 ಬಗೆಯ ಸ್ಪರ್ಧೆಗಳು ನಡೆಯುತ್ತವೆ.

ಶ್ಲಾಘನೀಯ
ಕೆಸರು ಗದ್ದೆ ಕ್ರೀಡಾಕೂಟ ನನ್ನ ಆಸಕ್ತಿಯ ಕ್ಷೇತ್ರ. ಇಲ್ಲಿ ಆಡುವುದು ಮನಸ್ಸಿಗೆ ಉಲ್ಲಾಸ ನೀಡುವ ಜತೆಗೆ ಪ್ರತಿಭೆ ಅನಾವರಣ ಮಾಡಲು ಸಾಧ್ಯ. ಕೆಸರು ಗದ್ದೆ ಆಯೋಜನೆ ಪ್ರಸ್ತುತ ಹೆಚ್ಚಿನ ಸಂಖ್ಯೆಯಲ್ಲಿ ನಡೆಯುತ್ತಿರುವುದು ಶ್ಲಾಘನೀಯ.
-ತಿರುಮಲೇಶ್ವರ ಸಾಕೋಟೆ, ರೆಂಜಿಲಾಡಿ

-ದಯಾನಂದ ಕಲ್ನಾರ್

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.