ಪುತ್ತೂರು, ಬೆಳ್ತಂಗಡಿ: ಕ್ಯಾಂಪ್ಕೋದಿಂದ ಖರೀದಿ ಆರಂಭ

ಎಪಿಎಂಸಿಯಿಂದ ಶೂನ್ಯ ಬಡ್ಡಿದರದಲ್ಲಿ ಅಡಮಾನ ಸಾಲ

Team Udayavani, Apr 14, 2020, 5:46 AM IST

ಪುತ್ತೂರು, ಬೆಳ್ತಂಗಡಿ: ಕ್ಯಾಂಪ್ಕೋದಿಂದ ಖರೀದಿ ಆರಂಭ

ಪುತ್ತೂರು: ಕೋವಿಡ್ 19 ಲಾಕ್‌ಡೌನ್‌ ಹಿನ್ನೆಲೆಯಲ್ಲಿ ರೈತರ ಸಂಕಷ್ಟಕ್ಕೆ ಸ್ಪಂದಿಸಿರುವ ಪುತ್ತೂರು ಎಪಿಎಂಸಿ ಹಾಗೂ ಕ್ಯಾಂಪ್ಕೋ ಸಂಸ್ಥೆಗಳು ಸೋಮವಾರದಿಂದ ಅಡಿಕೆ ಅಡಮಾನ ಸಾಲ ಹಾಗೂ ಅಡಿಕೆ ಖರೀದಿ ಪ್ರಕ್ರಿಯೆ ಆರಂಭಿಸಿವೆ.

ಅಡಮಾನ ಸಾಲ ಯೋಜನೆಯಡಿ ಸೋಮವಾರ 8 ಮಂದಿಗೆ ಶೂನ್ಯ ಬಡ್ಡಿ ದರದ ಸಾಲ ನೀಡಲಾಯಿತು. ಎಪಿಎಂಸಿಯು ಅಡಿಕೆ ಅಡಮಾನವಿರಿ ಸುವ ರೈತರಿಗೆ 3 ತಿಂಗಳ ಅವಧಿಗೆ 50 ಸಾ. ರೂ. ಅನ್ನು ಶೂನ್ಯ ಬಡ್ಡಿಯಲ್ಲಿ ನೀಡುತ್ತಿದೆ. ಈ ಮೊತ್ತದ ಸಾಲಕ್ಕೆ ರೈತರು 3.50 ಕ್ವಿಂ. ಅಡಿಕೆಯನ್ನು ಎಪಿಎಂಸಿ ದಾಸ್ತಾನು ಮಳಿಗೆಯಲ್ಲಿರಿಸಬೇಕು. 3 ತಿಂಗಳ ಅನಂತರ ಸಾಲವನ್ನು ನವೀಕರಣ ಮಾಡುವ ಚಿಂತನೆಯೂ ಇದೆ.
ಅಡಿಕೆ ಅಡಮಾನ ಸಾಲ ನೀಡು ವುದರಿಂದ ರೈತರ ಆರ್ಥಿಕ ಪರಿಸ್ಥಿತಿ ಸುಧಾರಿಸಬಹುದು ಎಂಬ ಹಿನ್ನೆಲೆಯಲ್ಲಿ ಶಾಸಕ ಸಂಜೀವ ಮಠಂದೂರು ಹಾಗೂ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ನಿರ್ದೇಶನದಂತೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಎಪಿಎಂಸಿ ಅಧ್ಯಕ್ಷ ದಿನೇಶ್‌ ಮೆದು ತಿಳಿಸಿದರು.

ಪ್ರಾ. ಕೃಷಿ ಪತ್ತಿನ ಸ. ಸಂಘಗಳಲ್ಲಿಯೂ ಅಡಿಕೆ ಅಡಮಾನವಿಟ್ಟು ಸಾಲ ನೀಡುವ ಯೋಜನೆ ಅನುಷ್ಠಾನಗೊಂಡಿದೆ. ಆದರೆ ಅಲ್ಲಿ ಬಡ್ಡಿ ಸಹಿತ ಸಾಲ ನೀಡಲಾಗುತ್ತಿದೆ. ಮುಂದೆ ಕಡಬ ಎಪಿಎಂಸಿಯಲ್ಲೂ ಇದೇ ರೀತಿಯ ಸಾಲ ಯೋಜನೆ ಆರಂಭಿಸಲು ಚಿಂತಿಸಲಾಗಿದೆ ಎಂದು ದಿನೇಶ್‌ ಮೆದು ತಿಳಿಸಿದ್ದಾರೆ. ರೈತರಿಗೆ ಸಾಲದ ಚೆಕ್‌ ವಿತರಣೆ ಸಂದರ್ಭದಲ್ಲಿ ಎಪಿಎಂಸಿ ನಿರ್ದೇಶಕ ಕಾರ್ತಿಕ್‌ ರೈ ಬೆಳ್ಳಿಪ್ಪಾಡಿ, ಎಪಿಎಂಸಿ ಕಾರ್ಯದರ್ಶಿ ರಾಮಚಂದ್ರ ಉಪಸ್ಥಿತರಿದ್ದರು.

ಕ್ಯಾಂಪ್ಕೋದಿಂದ ಖರೀದಿ ಆರಂಭ
ಜಿಲ್ಲೆಯ 9 ಕ್ಯಾಂಪ್ಕೋ ಕೇಂದ್ರಗಳಲ್ಲಿ ಸೋಮವಾರ ಅಡಿಕೆ ಖರೀದಿಸಲಾಯಿತು. ಓರ್ವ ಸದಸ್ಯನಿಂದ ತಿಂಗಳಿಗೆ 1 ಕ್ವಿಂ. ಅಥವಾ 25 ಸಾ. ರೂ. ಮೌಲ್ಯದ ಅಡಿಕೆ ಖರೀದಿಸಲು ಕ್ಯಾಂಪ್ಕೋ ನಿರ್ಧರಿಸಿದೆ. ಪುತ್ತೂರು ಕೇಂದ್ರದಲ್ಲಿ 22 ಮಂದಿ ಅಡಿಕೆ ಮಾರಾಟ ಮಾಡಿದರು. ಜಿಲ್ಲೆಯ 9 ಕಡೆಗಳಲ್ಲಿನ ಕೇಂದ್ರಗಳಲ್ಲೂ ಸೋಮವಾರ ರೈತರಿಂದ ಅಡಿಕೆ ಖರೀದಿ ನಡೆಸಲಾಗಿದೆ.

ಬೆಳ್ತಂಗಡಿ: ಕ್ಯಾಂಪ್ಕೋದಿಂದ 50 ಕ್ವಿಂಟಾಲ್‌ ಕೊಕ್ಕೊ ಖರೀದಿ
ಬೆಳ್ತಂಗಡಿ: ಜಿಲ್ಲೆಯ 9 ಕಡೆಗಳಲ್ಲಿ ಕ್ಯಾಂಪ್ಕೋ ಅಡಿಕೆ ಹಾಗೂ ಕೋಕ್ಕೋ ಖರೀದಿಗೆ ವ್ಯವಸ್ಥೆ ಮಾಡಲಾಗಿದ್ದು, ಬೆಳ್ತಂಗಡಿ ಕ್ಯಾಂಪ್ಕೋ ಕೇಂದ್ರದಲ್ಲಿ ಸೋಮವಾರ 50 ಕ್ವಿಂಟಾಲ್‌ ಕೊಕ್ಕೊ ಖರೀದಿ ನಡೆಸಲಾಗಿದೆ.

ಕೊಕ್ಕೊ ಮಾರಾಟಕ್ಕೆ ರೈತರಿಗೆ ಯಾವುದೇ ಮಿತಿ ಹೇರದಿರುವುದರಿಂದ ಸೋಮವಾರ ಒಟ್ಟು 107 ಮಂದಿ ಸದಸ್ಯರಿಂದ 50 ಕ್ವಿಂಟಾಲ್‌ ಕೊಕ್ಕೊ ಖರೀದಿಸಲಾಗಿದೆ. ಮಾಸ್ಕ್ ಧರಿಸಿ ಅಂತರ ಕಾಯ್ದುಕೊಂಡು ವ್ಯವಹಾರ ನಡೆಸಲು ಸೂಚಿಸಲಾಗಿತ್ತು.

ಎ.14ರಂದು ಅಡಿಕೆ ಖರೀದಿ
ಮಂಗಳವಾರ, ಬುಧವಾರ, ಶುಕ್ರವಾರ ಅಡಿಕೆ ಖರೀದಿಗೆ ಅವಕಾಶ ನೀಡಲಾಗಿದೆ. ಈಗಾಗಲೆ ಬೆಳ್ತಂಗಡಿಯಲ್ಲಿ ಎ.14ರಂದು 20 ಸದಸ್ಯರಿಗೆ ಟೋಕನ್‌ ನೀಡಲಾಗಿದ್ದು, ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಖರೀದಿ ಕೇಂದ್ರ ತೆರೆದಿರುತ್ತದೆ.

ಟಾಪ್ ನ್ಯೂಸ್

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

1-S-M

TIME’s : 100 ಪ್ರಭಾವಿಗಳ ಪಟ್ಟಿಯಲ್ಲಿ ಸಾಕ್ಷಿ

ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ

ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

CAR-D

Sullia: ರಸ್ತೆ ಬದಿ ನಿಲ್ಲಿಸಿದ್ದ ಕಾರಿಗೆ ಕಂಟೈನರ್‌ ಢಿಕ್ಕಿ

Belthangady ಪಿಕಪ್‌ ಹಿಮ್ಮುಖವಾಗಿ ಚಲಿಸಿ ವ್ಯಕ್ತಿ ಸಾವು

Belthangady ಪಿಕಪ್‌ ಹಿಮ್ಮುಖವಾಗಿ ಚಲಿಸಿ ವ್ಯಕ್ತಿ ಸಾವು

Sullia ವಿದ್ಯುತ್‌ ಲೈನ್‌ಗೆ ಬಿದ್ದ ಮರ; ಹಾನಿ,ವಿದ್ಯುತ್‌ ವ್ಯತ್ಯಯ

Sullia ವಿದ್ಯುತ್‌ ಲೈನ್‌ಗೆ ಬಿದ್ದ ಮರ; ಹಾನಿ,ವಿದ್ಯುತ್‌ ವ್ಯತ್ಯಯ

Uppinangady ದ್ವಿಚಕ್ರ ವಾಹನಕ್ಕೆ ಟ್ಯಾಂಕರ್‌ ಢಿಕ್ಕಿ; ಮಗು ಸಹಿತ ದಂಪತಿಗೆ ಗಾಯ

Uppinangady ದ್ವಿಚಕ್ರ ವಾಹನಕ್ಕೆ ಟ್ಯಾಂಕರ್‌ ಢಿಕ್ಕಿ; ಮಗು ಸಹಿತ ದಂಪತಿಗೆ ಗಾಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

1-S-M

TIME’s : 100 ಪ್ರಭಾವಿಗಳ ಪಟ್ಟಿಯಲ್ಲಿ ಸಾಕ್ಷಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.