Belthangady: ಅಯೋಧ್ಯೆ ಪ್ರಾಣ ಪ್ರತಿಷ್ಠಾಪನೆಯಂದೇ ಗಂಡು ಮಗು ಜನನ
ಮಗುವಿಗೆ ಶ್ರೀರಾಮನೆಂದು ನಾಮಕರಣಕ್ಕೆ ದಂಪತಿ ತೀರ್ಮಾನ
Team Udayavani, Jan 23, 2024, 11:07 AM IST
ಬೆಳ್ತಂಗಡಿ: ಅಯೋಧ್ಯೆಯಲ್ಲಿ ಶ್ರೀ ರಾಮ ವಿರಾಜಮಾನನಾದ ದಿನದಂದೆ ಅಂದರೆ ಜ.22 ರಂದೇ ಬೆಳ್ತಂಗಡಿ ತಾಲೂಕಿನ ಉಜಿರೆ ಬೆನಕ ಆಸ್ಪತ್ರೆಯಲ್ಲಿ ತಾಯಿಯೊಬ್ಬರು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.
ಬೆಳ್ತಂಗಡಿ ತಾಲೂಕಿನ ಪಡಂಗಡಿ ಗ್ರಾಮದ ಬಸನಬೆಟ್ಟು ನಿವಾಸಿ ಪವಿತ್ರ ಜ.22 ರಂದು ಉಜಿರೆ ಬೆನಕ ಆಸ್ಪತ್ರೆಯಲ್ಲಿ ಬೆಳಗ್ಗೆ 6:20 ಕ್ಕೆ ಗಂಡು ಮಗುವಿಗೆ ಜನ್ಮ ನೀಡಿದ್ದು, ತಾಯಿ-ಮಗು ಆರೋಗ್ಯವಾಗಿದ್ದಾರೆ.
ಮಗುವಿನ ತಂದೆ ಖುಷಿಯಿಂದ ಬೆಂಗಳೂರಿನಿಂದ ಆಸ್ಪತ್ರೆಗೆ ಬಂದಿದ್ದು, ಸಂತಸ ವ್ಯಕ್ತಪಡಿಸಿದ್ದಾರೆ. ಅದಲ್ಲದೆ ನಿನ್ನೆ ಅಯೋಧ್ಯೆಯಲ್ಲಿ ರಾಮನ ಪ್ರಾಣಪ್ರತಿಷ್ಠಾಪನೆಯ ದಿನದಂದೇ ಗಂಡು ಮಗುವಿಗೆ ಜನನವಾಗಿರುವುದರಿಂದ ಮಗುವಿಗೆ ಶ್ರೀರಾಮ ಎಂದು ಹೆಸರಿಡಲು ಯೋಚಿಸುತ್ತೇವೆ ಎಂದಿದ್ದಾರೆ.
ಸುಳ್ಯದ ಸುರೇಶ್ ಮತ್ತು ಪಡಂಗಡಿಯ ಪವಿತ್ರ ದಂಪತಿಗೆ 6 ವರ್ಷದ ಹೆಣ್ಣು ಮಗು ಇದೆ. ಇದೀಗ ಎರಡನೇ ಮಗುವಿನ ಜನನಕ್ಕೆ ಉಜಿರೆಯ ಬೆನಕ ಆಸ್ಪತ್ರೆಯ ಡಾ. ಅಂಕಿತಾ ಭಟ್ ಫೆ.3 ರಂದು ಸಂಭವನೀಯ ದಿನಾಂಕ ನೀಡಿದ್ದರು. ಅದರೆ ಪವಿತ್ರಾ ಅವರಿಗೆ ಜ.21 ರಂದು ರಾತ್ರಿಯೇ ಹೆರಿಗೆ ನೋವು ಕಾಣಿಸಿದ್ದರಿಂದ ತಕ್ಷಣ ಉಜಿರೆ ಬೆನಕ ಆಸ್ಪತ್ರೆಗೆ ಬಂದು ದಾಖಲಾಗಿದ್ದರು. ಜ.22 ರಂದು ಬೆಳಗ್ಗೆ 6:20 ಕ್ಕೆ ನಾರ್ಮಲ್ ಡೆಲಿವರಿ ಅಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ