ಎಂ.ಟಿ. ರಸ್ತೆ ಕಾಂಕ್ರೀಟ್ಗೆ 50 ಲಕ್ಷ ರೂ.
Team Udayavani, Jul 14, 2018, 4:23 PM IST
ನಗರ : ನಗರದ ಎಂ.ಟಿ. ರಸ್ತೆಯನ್ನು ಕಾಂಕ್ರೀಟ್ಗೊಳಿಸಲು ನಗರೋ ತ್ಥಾನ ಯೋಜನೆಯಡಿ 50 ಲಕ್ಷ ರೂ. ಮಂಜೂರಾಗಿದೆ. ಮಳೆ ಕಡಿಮೆ ಯಾದ ತತ್ಕ್ಷಣ ಕಾಂಕ್ರೀಟ್ ಕಾಮಗಾರಿಯನ್ನು ನಡೆಸಲಾಗುವುದು ಎಂದು ನಗರಸಭಾ ಅಧ್ಯಕ್ಷೆ ಜಯಂತಿ ಬಲ್ನಾಡು ಅವರು ಹೇಳಿದರು. ಎಂ.ಟಿ. ರಸ್ತೆ ಹಾಗೂ ಮುಖ್ಯ ರಸ್ತೆಯನ್ನು ಸ್ಥಳ ಪರಿಶೀಲನೆ ಮಾಡಿ ಸಂದರ್ಭ ಅವರು ಮಾತನಾಡಿದರು.
ನಗರಸಭಾ ಹಿರಿಯ ಸದಸ್ಯ ಎಚ್. ಮಹಮ್ಮದ್ ಆಲಿ ಮಾತನಾಡಿ, ಪುತ್ತೂರು ನಗರದ ಸಮಗ್ರ ಅಭಿವೃದ್ಧಿಗಾಗಿ ನಗರೋ ತ್ಥಾನ ಯೋಜನೆಯಡಿಯಲ್ಲಿ ಹಲವಾರು ರಸ್ತೆಗಳನ್ನು ಅಭಿವೃದ್ಧಿಪಡಿಸಲಾಗು ವುದು. ಎಂ.ಟಿ. ರಸ್ತೆಯಲ್ಲಿ ಡಾಮರು ಕಿತ್ತು ಹೋಗಿ ಗುಂಡಿಗಳು ಬೀಳುತ್ತಿರುವುದರಿಂದ ಈ ರಸ್ತೆಯಲ್ಲಿ ಚರಂಡಿಗಳು ಇಲ್ಲದಿರುವುದರಿಂದ ರಸ್ತೆಯಲ್ಲಿ ನೀರು ಹರಿದು ಹೋಗಿ ತೊಂದರೆಯಾಗುತ್ತಿದೆ. ರಸ್ತೆ ಹಾಳಾಗು ತ್ತಿರುವುದನ್ನು ಮನಗಂಡು ನಗರಸಭಾ ಆಡಳಿತ ಎಂ.ಟಿ. ರಸ್ತೆಯನ್ನು ಸಂಪೂರ್ಣ ಕಾಂಕ್ರೀಟ್ಗೊಳಿಸಲು ನಗರ ಸಭಾ ಆಡಳಿತ ನಿರ್ಧರಿಸಿದೆ ಎಂದರು. ಈ ಸಂದರ್ಭ ನಗರೋತ್ಥಾನ ಯೋಜನೆಯ ಯೋಜನಾ ಸಮಾಲೋಚನ ಸಂಸ್ಥೆಯ ಎಂಜಿನಿಯರ್ ಭರತ್, ನಗರಸಭಾ ಸಹಾಯಕ ಎಂಜಿನಿಯರ್ ಅರುಣ್, ಮುಗರೋಡಿ ಕನ್ಸ್ಟ್ರಕ್ಷನ್ ನ ದಾಮೋದರ್ ಮತ್ತು ನವೀನ್ ಉಪಸ್ಥಿತರಿದ್ದರು.
1 ಕೋಟಿ ರೂ.
ಮುಖ್ಯರಸ್ತೆಯಲ್ಲಿ ಕೂಡ ಆಯ್ದ ಭಾಗಗಳಲ್ಲಿ ಚರಂಡಿ ನಿರ್ಮಿಸಿ ಸುಸಜ್ಜಿತ ಫುಟ್ಪಾತನ್ನು ನಿರ್ಮಿಸಲಾಗುವುದು. ಬೊಳುವಾರು ಭಾಗದಲ್ಲಿ ರಸ್ತೆ ಅಗಲೀಕರಿಸಿ ರಸ್ತೆ ಮಧ್ಯಭಾಗದಲ್ಲಿ ರಸ್ತೆ ವಿಭಾಜಕವನ್ನು ರಚಿಸಿ ಅಭಿವೃದ್ಧಿಪಡಿಸಲಾಗುವುದು. ಒಟ್ಟು ಮುಖ್ಯರಸ್ತೆ ಅಭಿವೃದ್ಧಿಗೆ 1 ಕೋಟಿ ರೂ. ಮಂಜೂರು ಮಾಡಲಾಗಿರುತ್ತದೆ ಎಂದು ನಗರಸಭಾ ಸದಸ್ಯ ಎಚ್. ಮಹಮ್ಮದ್ ಆಲಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!
Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್ ಮಧ್ವರಾಜ್
Hassan Lok sabha Constituency: ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ