ಸರಳ ಬೋಧನೆಗೆ ಬಹುವಿಧ ಕಲಿಕೆ ಕಾರ್ಡ್‌


Team Udayavani, Aug 5, 2021, 3:10 AM IST

ಸರಳ ಬೋಧನೆಗೆ ಬಹುವಿಧ ಕಲಿಕೆ ಕಾರ್ಡ್‌

ಬೆಳ್ತಂಗಡಿ: ಕೋವಿಡ್‌ ಪ್ರಭಾವದಿಂದ ಪ್ರಾಥಮಿಕ ಶಾಲಾ ಮಕ್ಕಳ ಕಲಿಕೆಯ ಸಮಸ್ಯೆ ಒಂದು ತರವಾದರೆ, ತರಗತಿಗಳು ನಡೆಯದೆ ಪ್ರೌಢಶಾಲಾ ಹಂತದ (8, 9 ಮತ್ತು 10ನೇ ತರಗತಿ) ವಿದ್ಯಾರ್ಥಿಗಳಿಗೆ ಎದುರಾದ ಕಲಿಕೆ ಅಡ್ಡಿಗಳು ಇನ್ನೊಂದು ತರಹದ್ದು. ಆನ್‌ಲೈನ್‌ ತರಗತಿಗಳು ನಿರಂತರವಾಗಿ ನಡೆಯುತ್ತಿದ್ದರೂ ಬಹು ಸಂಖ್ಯಾಕ ವಿದ್ಯಾರ್ಥಿಗಳಿಗೆ ಇವೆಲ್ಲ ಪರಿಣಾಮಕಾರಿ ಮಾಧ್ಯ ಮವಾಗಿಲ್ಲ, ಹಲವರಿಗೆ ಇನ್ನೂ ಎಟಕದ ಮಾಧ್ಯಮವೂ ಆಗಿದೆ.

ಹೀಗಾಗಿ ವಿದ್ಯಾರ್ಥಿಗಳ ಕಲಿಕೆಯ ನಿರಂತರತೆಗೆ ಪ್ರೇರಣೆ ಮತ್ತು ಮಾರ್ಗದರ್ಶನ ಬೇಕಾಗುವ ಸಲುವಾಗಿ ಟಿ.ವಿ. ಆನ್‌ಲೈನ್‌, ವಾಟ್ಸ್‌ಆ್ಯಪ್‌ ಬಳಕೆಯೊಂದಿಗೆ ಅಥವಾ ಬಳಸದೆಯೂ ಕಲಿಕೆಯಲ್ಲಿ ನಿರಂತರತೆ ತರುವುದು ಹೇಗೆ ಎಂಬುದನ್ನು ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯ ಮುಖ್ಯ ಶಿಕ್ಷಕ ರಾಮಕೃಷ್ಣ ಭಟ್‌ ಚೊಕ್ಕಾಡಿ ಅವರು ಕಲಿಕೆ ಕಾರ್ಡುಗಳ ಮೂಲಕ ಪರಿಚಯಿಸಿದ್ದಾರೆ.

ತಾನು ಬೋಧಿಸುವ ಸಮಾಜ ವಿಜ್ಞಾನ ವಿಷಯದ ಬೋಧನೆಗೆ ಅವರು ಕಂಡುಕೊಂಡ ಸರಳ, ನೇರ ಮಾರ್ಗವೇ ಈ ಕಲಿಕೆ ಕಾರ್ಡ್‌ಗಳಾಗಿದ್ದು, ಇದೊಂದು ಚಟುವಟಿಕೆ ಆಧಾರಿತ ಕಲಿಕೆ ವಿಧಾನವಾಗಿದೆ.

ಕಾರ್ಡ್‌ಗಳು ಎಂದರೆ…

ಈಗಾಗಲೇ ಪ್ರಶ್ನೋತ್ತರ ರೂಪದಲ್ಲಿ ಅನೇಕ ಕಾರ್ಡ್‌ಗಳು ಬಂದಿವೆ. ಆದರೆ ಇಲ್ಲಿ 8, 9 ಮತ್ತು 10ನೇ ತರಗತಿಯ ಸಮಾಜ ವಿಜ್ಞಾನದ ಪ್ರತೀ ಪಾಠಗಳ ಸಂಕ್ಷಿಪ್ತ ಮಾಹಿತಿ ಮತ್ತು ಅಭ್ಯಾಸದ ಪ್ರಶ್ನೆಗಳಿಗೆ ನೇರ ಉತ್ತರ ಸಿಕ್ಕುವ ಹಾಗೆ ವಿವರಣೆಗಳು ಈ ಕಾರ್ಡ್‌ನಲ್ಲಿವೆ. ಪಾಠಕ್ಕೆ ಸಂಬಂಧಿಸಿದಂತೆ ಪೂರಕ ಮತ್ತು ಹೆಚ್ಚುವರಿಯಾಗಿ ಆಯಾ ತರಗತಿಗಳ ಮಟ್ಟಕ್ಕೆ ಅನುಗುಣವಾಗಿ ವೈವಿಧ್ಯಮಯ ಚಟುವಟಿಕೆಗಳು ಮತ್ತು ಸೂಚನೆಗಳು ಇದರಲ್ಲಿದೆ.

ಚಟುವಟಿಕೆಗಳು :

ಬಲು ವಿಶಿಷ್ಟ ಚಟುವಟಿಕೆಗಳು ಈ ಕಾರ್ಡ್‌ಗಳಲ್ಲಿ ಜೋಡಿಸಲ್ಪಟ್ಟಿವೆ. ಬರೆಯುವ, ಓದುವ, ಗಮನಿಸುವ, ವೀಕ್ಷಿಸುವ, ಭೇಟಿಮಾಡಿ ವರದಿ ಬರೆಯುವ, ಇತರರನ್ನು ಮಾತನಾಡಿಸುವ-ಸಂದರ್ಶನಗಳು, ಪ್ರಶ್ನೆ ತಯಾರಿಸುವ, ಪದಬಂಧ ರಚಿಸುವ ಹೀಗೆ ಹತ್ತಾರು ಚಟುವಟಿಕೆಗಳಿವೆ. ಪರಿಣಾಮ ಯೋಚಿಸುವ, ತರ್ಕಿ ಸುವ, ಹೋಲಿಸಿ ವಿಶ್ಲೇಷಿಸುವುದಕ್ಕೆ ಪ್ರೇರಣೆ ನೀಡುತ್ತವೆ. ಹೆಚ್ಚುವರಿ ಮಾಹಿತಿ ತಿಳಿದುಕೊಳ್ಳಲು ಉನ್ನತ ಪ್ರಶ್ನೆಗಳು ಈ ಕಾರ್ಡ್‌ನಲ್ಲಿವೆ.

ಮಕ್ಕಳಿಗೆ ತಲುಪಿಸಲು ಕ್ರಮ:

ಉದಾಹರಣೆಗೆ 10ನೇ ತರಗತಿಯ ಸಮಾಜ ವಿಜ್ಞಾನ ವಿಷಯದ ಪಠ್ಯ ಪುಸ್ತಕದ 39 ಪಾಠಗಳಿದ್ದರೆ, ಅದರ ಸಂಪೂರ್ಣ ಮಾಹಿತಿಗಳು ಮತ್ತು ಚಟುವಟಿಕೆಗಳು 20 ಕಾರ್ಡ್‌ ಗಳಲ್ಲಿ ಲಭ್ಯವಾಗುವಂತೆ ರೂಪುಗೊಳಿಸಲಾಗಿದೆ. ಇದನ್ನು ಜೆರಾಕ್ಸ್‌ ಪ್ರತಿ ಮಾಡಿ ತಲುಪಿಸಬಹುದು ಅಥವಾ ವಾಟ್ಸ್‌ ಆ್ಯಪ್‌ ಮೂಲಕವೂ ವೀಕ್ಷಿಸಬಹುದಾಗಿದೆ. ಚಟುವಟಿಕೆಗಳಲ್ಲಿ ಎಲ್ಲ ವಿದ್ಯಾರ್ಥಿಗಳು ತೊಡಗಿಕೊಳ್ಳಬಹುದಾಗಿದೆ.

ತರಗತಿಗಳು ಆರಂಭವಾಯಿತೆಂದರೆ ಈ ಕಾರ್ಡುಗಳೆಲ್ಲ ವ್ಯರ್ಥವಲ್ಲವೇ ಎಂಬ ಪ್ರಶ್ನೆ ಇಲ್ಲಿ ಬರುವುದಿಲ್ಲ. ಏಕೆಂದರೆ ಕಾರ್ಡು ತಯಾರಿಗೆ ಸಾಕಷ್ಟು ಅಧ್ಯಯನ ನಡೆಸಬೇಕಾಗುತ್ತದೆ. ಜತೆಗೆ ಇದೊಂದು ನೇರ ತರಗತಿ ಬೋಧನೆಗೆ ಸಂಬಂಧಿಸಿದ ಪಾಠ ಯೋಜನೆಯೂ ಆಗಿದೆ. ಹಾಗಾಗಿ ಕಾರ್ಡುಗಳು ಎಲ್ಲ ರೂಪದ ತರಗತಿಗಳಿಗೆ, ಎಲ್ಲ ಕಾಲಗಳಲ್ಲೂ ಬಳಸಿಕೊಳ್ಳುವಂತೆಯೂ ಇದೆ. ಪ್ರತೀ ತರಗತಿಗಳಿಗೆ ಅಳವಡಿಸಿಕೊಳ್ಳಬಹುದಾದಂತಹ ವಿವಿಧ ಬೋಧನೆ ಚಟುವಟಿಕೆಗಳ ಪ್ರತ್ಯೇಕ ಪಟ್ಟಿ ಎಲ್ಲ ಶಿಕ್ಷಕರಿಗೂ ಉಪಯೋಗಕಾರಿಯಾಗಿದೆ. -ರಾಮಕೃಷ್ಣ ಭಟ್‌ ಚೊಕ್ಕಾಡಿ, ಮುಖ್ಯ ಶಿಕ್ಷಕ, ಬೆಳಾಲು ಶ್ರೀ ಧ.ಮಂ.ಅ.ಪ್ರೌಢಶಾಲೆ

 

-ಚೈತ್ರೇಶ್‌ ಇಳಂತಿಲ

 

ಟಾಪ್ ನ್ಯೂಸ್

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.