ಹೊಸಮಠ: ನೆನಪಾಗಿ ಕಾಡುತ್ತಿದೆ ಮುಳುಗು ಸೇತುವೆ


Team Udayavani, Jul 29, 2021, 2:00 AM IST

ಹೊಸಮಠ: ನೆನಪಾಗಿ ಕಾಡುತ್ತಿದೆ ಮುಳುಗು ಸೇತುವೆ

ಕಡಬ: ಉಪ್ಪಿನಂಗಡಿ- ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯಲ್ಲಿ ಕಡಬದ ಹೊಸಮಠದಲ್ಲಿ ಹೊಸ ಸೇತುವೆ ನಿರ್ಮಾಣ ವಾಗಿ ಮುಳುಗು ಸೇತುವೆ ತೆರವು ಗೊಂಡು ಇತಿಹಾಸದ ಪುಟ ಸೇರಿದರೂ ಎಡೆಬಿಡದೆ ಸುರಿವ ಮಳೆಯ ನಡುವೆ ನೆರೆ ನೀರಿನಲ್ಲಿ ಮುಳುಗೇಳುತ್ತಿದ್ದ ಹಳೆಯ ಸೇತುವೆ ನೆನಪಾಗಿ ಕಾಡುತ್ತಿರುವುದಂತೂ ಸುಳ್ಳಲ್ಲ.

ಅದೆಷ್ಟೋ ಜೀವಗಳನ್ನು ಬಲಿ ತೆಗೆದು ಕೊಂಡು, ದುರಂತಗಳಿಗೆ ಸಾಕ್ಷಿಯಾಗಿದ್ದ ಈ ಸೇತುವೆ ಮಳೆಗಾಲದಲ್ಲಿ ಶಾಲಾ ಮಕ್ಕಳಿಗೆ ಹೆಚ್ಚು ರಜೆಗೆ ಕಾರಣವಾದ “ಹೆಗ್ಗಳಿಕೆ’ಯನ್ನೂ ಹೊಂದಿತ್ತು.

ಹೊಸಮಠ ಸೇತುವೆಗೆ ಬರೋಬ್ಬರಿ 6 ದಶಕಗಳ ಇತಿಹಾಸ ಇದೆ. ಅಂದು ಮೈಸೂರು ರಾಜ್ಯ ಆಡಳಿತ ಅವಧಿಯಲ್ಲಿ ಪುಣ್ಯ ಕ್ಷೇತ್ರಗಳಲ್ಲಿ ಒಂದಾದ ಕುಕ್ಕೆ ಸುಬ್ರಹ್ಮಣ್ಯಕ್ಕೆ ಸಂಪರ್ಕ ಕಲ್ಪಿಸುವ ಉಪ್ಪಿನಂಗಡಿ-ಕಡಬ- ಸುಬ್ರಹ್ಮಣ್ಯ ರಸ್ತೆ ನಿರ್ಮಾಣ ನಡೆದಿತ್ತು. ಆದರೆ ಗುಂಡ್ಯ ಹೊಳೆಗೆ ಹೊಸಮಠದಲ್ಲಿ ಸೇತುವೆ ಇರಲಿಲ್ಲ. ಅಲ್ಲಿ ಸೇತುವೆ ನಿರ್ಮಾ ಣವಾಗಬೇಕು ಎನ್ನುವ ಸ್ಥಳೀಯರ ಅಹ ವಾಲಿಗೆ ಸ್ಪಂದಿಸಿದ ಅಂದಿನ ಸರಕಾರ ಹೊಸ ಮಠದಲ್ಲಿ ಮುಳುಗು ಸೇತುವೆ ನಿರ್ಮಿಸಿತ್ತು.

ಅಂದಿನ ಕಾಲಕ್ಕೆ ಅದೊಂದು ದೊಡ್ಡ ಸೇತುವೆ. ಆದರೆ ನಿರ್ಮಾಣವಾದ ವರ್ಷ ದಲ್ಲೇ ಮಳೆಗಾಲದಲ್ಲಿ ಸೇತುವೆ ಮುಳುಗಡೆ ಯಾಯಿತು. ಅಂದಿನ ಲೋಕೋ ಪಯೋಗಿ ಸಚಿವ ಭಕ್ತವತ್ಸಲಂ 1955ರಲ್ಲಿ ಈ ಸೇತುವೆಯನ್ನು ನೆರೆ ನೀರಿ ನಲ್ಲಿ ಮುಳು ಗಿದ್ದಾಗಲೇ ಉದ್ಘಾಟಿಸಿ ಹೋಗಿದ್ದರು.

ಹಲವು ದುರಂತಗಳಿಗೆ ಸಾಕ್ಷಿಯಾಗಿದ್ದ ಸೇತುವೆ:

ಹೊಸಮಠ ಸೇತುವೆಯ ಇತಿಹಾಸ ಕೆದಕಿ ದರೆ ಹಲವು ದುರಂತ ಘಟನೆಗಳು ಎದುರಾ ಗುತ್ತವೆ. ಸೇತುವೆಯಲ್ಲಿ ನೆರೆ ನೀರು ನಿಂತಾಗ ದಾಟುವ ದುಸ್ಸಾಹಸಕ್ಕೆ ಇಳಿದವರನ್ನು ನೆರೆನೀರು ತನ್ನ ಒಡಲೊಳಗೆ ಸೇರಿಸಿಕೊಂಡ ಅದೆಷ್ಟೋ ಉದಾಹರಣೆಗಳಿವೆ. ಸೇತುವೆ ನಿರ್ಮಾಣವಾಗಿ ಐದೇ ವರ್ಷದಲ್ಲಿ ಆ ರಸ್ತೆಯಲ್ಲಿ ಓಡಾಡುತ್ತಿದ್ದ ಖಾಸಗಿ ಬಸ್‌ ನೆರೆ ಸಂದರ್ಭದಲ್ಲಿ ಸೇತುವೆ ದಾಟಲು ಹೋಗಿ ನೀರು ಪಾಲಾಗಿ ಒಬ್ಬ ಬಲಿಯಾಗಿದ್ದರು. ಅದಾದ ಕೆಲವು ವರ್ಷ ಬಳಿಕ ಸುಬ್ರಹ್ಮಣ್ಯಕ್ಕೆ ಬಂದಿದ್ದ ತಮಿಳುನಾಡಿನ ಯಾತ್ರಾರ್ಥಿಗಳು ಸೇತುವೆ ದಾಟಲು ಹೋಗಿ ಇಬ್ಬರು ಯುವಕರು ನೀರುಪಾಲಾಗಿದ್ದರೆ ಅಡಿಕೆ ಸಸಿ ಸಾಗಿಸುತ್ತಿದ್ದ ಲಾರಿಯೊಂದು ನೀರುಪಾಲಾಗಿ ಕೃಷಿಕರೊಬ್ಬರು ಮೃತಪಟ್ಟಿದ್ದರು. 2006ರಲ್ಲಿ ಕಡಬಕ್ಕೆ ಸಿಮೆಂಟ್‌ ಹೇರಿಕೊಂಡು ಬರುತ್ತಿದ್ದ ಲಾರಿಯೊಂದು ಸೇತುವೆಯಿಂದ ಕೆಳಕ್ಕೆ ಬಿದ್ದು, ನಾಲ್ವರು ನೀರುಪಾಲಾಗಿ ಪ್ರಾಣ ಕಳೆದುಕೊಂಡಿದ್ದರು. ಅಂತೆಯೇ ಅದೆಷ್ಟೋ ಜನ ವಾಹನಗಳು ಆಯ ತಪ್ಪಿ ಸೇತುವೆಯಿಂದ ಕೆಳಗೆ ಬಿದ್ದಿರುವುದು ಅಧಿಕೃತವಾಗಿ ಲೆಕ್ಕಕ್ಕೆ ಸಿಕ್ಕಿಲ್ಲ. ಅನೇಕರು ಇಲ್ಲಿ ಆತ್ಮ ಹತ್ಯೆ ಮಾಡಿಕೊಂಡಿದ್ದರು. ಅನೇಕರು ಆತ್ಮಹತ್ಯೆಗೆ ಯತ್ನಿಸಿ ಸಾರ್ವಜನಿಕರ ಸಕಾಲಿಕ ಕ್ರಮದಿಂದ ಪಾರಾದ ಘಟನೆಗಳೂ ಇವೆ.

ಟಾಪ್ ನ್ಯೂಸ್

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

8-

Kaniyoor: ಕೆರೆ ಸ್ವಚ್ಛಗೊಳಿಸುವಾಗ ಮುಳುಗಿ ವ್ಯಕ್ತಿ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.