ಅಪಾಯಕ್ಕೆ ಆಹ್ವಾನ ನೀಡುತ್ತಿರುವ ಮುಂಡಾಜೆ ಬಲ್ಯಾರ್ ಕಾಪು ಸೇತುವೆ
Team Udayavani, May 18, 2020, 5:16 AM IST
ಮುಂಡಾಜೆ: ಬೆಳ್ತಂಗಡಿ ತಾ| ಮುಂಡಾಜೆ ಗ್ರಾ.ಪಂ. ವ್ಯಾಪ್ತಿಯ ಸೋಮಂತಡ್ಕದಿಂದ ಕಲ್ಮಂಜ ಮೂಲಕ ಧರ್ಮಸ್ಥಳಕ್ಕೆ ಸಂಪರ್ಕ ಕಲ್ಪಿಸುವ ಬಲ್ಯಾರ್ ಕಾಪು ಸೇತುವೆ ಅಪಾಯಕ್ಕೆ ಆಹ್ವಾನ ನೀಡುತ್ತಿದೆ.
ಜಿ.ಪಂ. ನಿಂದ ಬಲ್ಯಾರ್ ಕಾಪು ಎಂಬಲ್ಲಿ 40 ಮೀ. ಉದ್ದದ 2 ಮೀ. ಅಗಲದ ಸೇತುವೆ ಮೃತ್ಯುಂಜಯ ನದಿಗೆ ಹಲವಾರು ವರ್ಷದ ಹಿಂದೆ ಅಡ್ಡಲಾಗಿ ಕಟ್ಟಿದ್ದು, ಇದರಲ್ಲಿ ವಾಹನಗಳು ಹಾಗೂ ಪಾದಚಾರಿಗಳು ಓಡಾಡುತ್ತಾರೆ.
ಕಲ್ಮಂಜ ಗ್ರಾಮಕ್ಕೆ ಹತ್ತಿರದ ಸಂಪರ್ಕ ಕಲ್ಪಿಸುವ ಈ ಸೇತುವೆಗೆ ಕಳೆದ ಮಳೆಗಾಲದಲ್ಲಿ ಭೀಕರ ಪ್ರವಾಹಕ್ಕೆ ಕೊಚ್ಚಿಕೊಂಡು ಹೋದ ಮರಗಳ ಹೊಡೆತದಿಂದ ಕಬ್ಬಿಣದ ಪೈಪ್ಗ್ಳಿಂದ ನಿರ್ಮಿಸಿರುವ ಒಂದು ಬದಿಯ ತಡೆಗೋಡೆಯು ಸುಮಾರು 7 ಮೀ. ನಷ್ಟು ತುಂಡಾಗಿ ಹೋಗಿದೆ. ಇದರಿಂದ ಈಗ ಅಷ್ಟು ಜಾಗದಲ್ಲಿ ತಡೆಗೋಡೆ ಇಲ್ಲದೆ ವಾಹನ ಸವಾರರಿಗೆ ಮತ್ತು ಪಾದಚಾರಿಗಳಿಗೆ ತೀವ್ರ ತೊಂದರೆಯಾಗಿದೆ. ಒಂದಿಷ್ಟು ಎಚ್ಚರ ತಪ್ಪಿದರೂ ನದಿಗೆ ಬೀಳುವ ಸಾಧ್ಯತೆ ಇದೆ.
ಸಾಮಾನ್ಯ ದಿನಗಳಲ್ಲಿ ಶಾಲಾ ಮಕ್ಕಳು ಹೆಚ್ಚಾಗಿ ಸಂಚರಿಸುವ ಈ ಸೇತುವೆ ಮಳೆಗಾಲದಲ್ಲಿ ಅಪಾಯಕ್ಕೆ ಆಹ್ವಾನ ನೀಡುವಂತಿದೆ. ಹಾಗಾಗಿ ಶೀಘ್ರ ಸೇತುವೆಯ ತಡೆಗೋಡೆ ದುರಸ್ತಿ ಕೆಲಸ ಆಗಬೇಕೆಂದು ಊರವರು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್