ಪ್ರವೀಣ್ ಕುಟುಂಬಕ್ಕೆ ನೀಡಿದ ಭರವಸೆ ಈಡೇರಿಸಿ, ತಪ್ಪಿದರೆ ಸಿಎಂ ಮುಖಕ್ಕೆ ಮಸಿ : ಮುತಾಲಿಕ್
Team Udayavani, Sep 19, 2022, 3:43 PM IST
ಸುಳ್ಯ : ದುಷ್ಕರ್ಮಿಗಳಿಂದ ಹತ್ಯೆಯಾಗಿರುವ ಹಿಂದೂ ಮುಖಂಡ ಪ್ರವೀಣ್ ನೆಟ್ಟಾರು ಅವರ ಮನೆಯವರಿಗೆ ಸರಕಾರದ ವತಿಯಿಂದ ನೀಡಲಾದ ಭರವಸೆಯನ್ನು ಮುಖ್ಯಮಂತ್ರಿಗಳು ಈಡೇರಿಸಬೇಕು ಹಿಂದೂ ಮುಖಂಡ, ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ.
ಸೋಮವಾರ ಪ್ರವೀಣ್ ನೆಟ್ಟಾರು ಮನೆಗೆ ಭೇಟಿ ನೀಡಿ ಮನೆಯವರಿಗೆ ಸಾಂತ್ವಾನ ತಿಳಿಸಿದ ಬಳಿಕ ಮಾಧ್ಯಮದ ರೊಂದಿಗೆ ಮಾತನಾಡಿದ ಅವರು ಸಿಎಂ ಕಛೇರಿಯಲ್ಲಿ ಪ್ರವೀಣ್ ಪತ್ನಿಗೆ ಕೆಲಸ ಕೊಡುವುದಾಗಿ ತಿಳಿಸಿದ್ದಾರೆ. ಅದನ್ನು ಕೂಡಲೇ ನೆರವೇರಿಸಬೇಕು. ಹಿಂದೆಯೂ ಇದೇ ರೀತಿಯ ಆಶ್ವಾಸನೆ ನೀಡಿ ಈಡೇರಿಸಿಲ್ಲ. ಅದು ಪರೇಶ್ ಮೇಸ್ತಾ, ಶರತ್ ಮಡಿವಾಳ ಅವರಿಗೆ ನೀಡಿದ ಘೋಷಣೆ ಈಡೇರಲಿಲ್ಲ ಎಂದು ಹೇಳಿದ್ದಾರೆ.
ಒಂದು ವೇಳೆ ಮಾತು ತಪ್ಪಿದಲ್ಲಿ ಮುಖ್ಯಮಂತ್ರಿ ಮನೆ ಮುಂದೆ ಸಾವಿರಾರು ಜನ ಸೇರಿಸಿ ಧರಣಿ ಕೂತು, ನಿಮ್ಮ ಮುಖಕ್ಕೆ ಮಸಿ ಬಳಿಯಬೇಕಾದಿತು ಎಂಬ ಎಚ್ಚರಿಕೆಯನ್ನು ಹಿಂದೂ ಮುಖಂಡ, ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ತಿಳಿಸಿದರು.
ಕೃತ್ಯ ಎಸಗಿದ ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಬೇಕು. ಅವರಿಗೆ ಎಂದಿಗೂ ಜಾಮೀನು ದೊರೆಯದಂತೆ ನೋಡಿಕೊಳ್ಳಬೇಕು. ಈ ಹಿಂದೆಯೇ ನಾನು ಇಲ್ಲಿಗೆ ಭೇಟಿ ನೀಡುವ ವೇಳೆ ನಿಷೇಧ ಹೇರಿದ್ದನ್ನು ನಾನು ಖಂಡಿಸುತ್ತೇನೆ ಎಂದರು.
ಇದನ್ನೂ ಓದಿ : ಸಹಕಾರ ಚಳುವಳಿಗೆ ಕಪ್ಪು ಚುಕ್ಕೆ ತರುವವರ ವಿರುದ್ಧ ಕಠಿಣ ಕ್ರಮ: ಸಚಿವ ಆರಗ ಜ್ಞಾನೇಂದ್ರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ