ನರೇಗಾ ಬಾವಿಗೆ ಕಲಾತ್ಮಕ ಸ್ಪರ್ಶ ಆಕರ್ಷಕ ಕಂಚಿನ ಪಾತ್ರೆ ಹೋಲುವ ಮಾದರಿ


Team Udayavani, Mar 9, 2022, 1:17 PM IST

ನರೇಗಾ ಬಾವಿಗೆ ಕಲಾತ್ಮಕ ಸ್ಪರ್ಶ ಆಕರ್ಷಕ ಕಂಚಿನ ಪಾತ್ರೆ ಹೋಲುವ ಮಾದರಿ

ಪುತ್ತೂರು: ಕೊಳ್ತಿಗೆ ಗ್ರಾಮದ ಸರಸ್ವತಿ ಮೂಲೆಯಲ್ಲಿ ನರೇಗಾ ಯೋಜನೆಯಡಿ ನಿರ್ಮಿಸಿರುವ ಬಾವಿಗೆ ಕಲಾತ್ಮಕ ಸ್ಪರ್ಶ ನೀಡಿದ ಆರ್ಟಿಸ್ಟ್‌ ಪ್ರಯತ್ನ ಗಮನ ಸೆಳೆದಿದೆ.

ಚಿತ್ರ ಕಲಾವಿದ, ಬೆಳ್ಳಾರೆಯ ಕಲಾಸುಮ ಆರ್ಟ್ಸ್ ಮಾಲಕ ಪದ್ಮನಾಭ ನಾಯ್ಕ ತನ್ನ ಮನೆ ಅಂಗಳದಲ್ಲಿ ಉದ್ಯೋಗ ಖಾತರಿಯಲ್ಲಿ ಬಾವಿ ನಿರ್ಮಿಸಿದ್ದರು. ಚಿತ್ರಕಲೆಗಾರನಾಗಿ ಹಲವು ಗೋಡೆಗಳಿಗೆ ಹೊಸ ರಂಗನ್ನು ತುಂಬಿದ್ದ ಅವರು ಅದೇ ಕಲೆಗಾರಿಕೆಯನ್ನು ಬಾವಿಗೆ ನೀಡಿ ಹೊಸತನ ಮೂಡಿಸಿದ್ದಾರೆ.

ಬಾವಿ ನಿರ್ಮಾಣದ ಕನಸು
ಪದ್ಮನಾಭ ನಾಯ್ಕ ಅವರದ್ದು ಅವಿಭಕ್ತ ಕುಟುಂಬ. ಕುಡಿಯುವ ನೀರಿಗಾಗಿ ಮನೆ ಮುಂದೆ ಒಂದು ಬಾವಿ ನಿರ್ಮಿಸುವ ಇರಾದೆಯನ್ನು ಪದ್ಮನಾಭ ನಾಯ್ಕ ಅವರ ತಂದೆ ವ್ಯಕ್ತಪಡಿಸಿದ್ದರು. ಹಾಗಾಗಿ ಪದ್ಮನಾಭ ನರೇಗಾ ಯೋಜನೆಯಡಿ ಕೊಳ್ತಿಗೆ ಗ್ರಾ.ಪಂ.ಗೆ ಅರ್ಜಿ ನೀಡಿದರು.

ಕೋವಿಡ್‌ ಕಾರಣದಿಂದ ನಿರ್ಮಾಣ ಕಾರ್ಯ ತುಸು ತಡವಾಯಿತು. ಅದಾಗ್ಯೂ 8 ಮಂದಿ ಸಹೋದರರು ಈ ಬಾವಿ ರಚನೆಗೆ ಮುಂದಾದರು. ಸುಮಾರು ಒಂದು ತಿಂಗಳು ಕೆಲಸ ಮಾಡಿ 35 ಅಡಿ ಆಳದ ಬಾವಿ ನಿರ್ಮಿಸಿದರು. 34 ರಿಂಗ್‌ಗಳನ್ನು ಅಳವಡಿಸಲಾಯಿತು. ಇದಕ್ಕಾಗಿ ನರೇಗಾದಲ್ಲಿ ಕೂಲಿ ಮತ್ತು ಸಾಮಗ್ರಿ ಮೊತ್ತ ಸೇರಿ 67 ಸಾವಿರ ರೂ.ಸಹಾಯಧನ ಅವರಿಗೆ ಸಿಗಲಿದೆ. ಇದರಲ್ಲಿ ಕೂಲಿ ವೆಚ್ಚ ಪಾವತಿಯಾಗಿದ್ದರೆ, ಸಾಮಗ್ರಿ ವೆಚ್ಚ ಪಾವತಿ ಹಂತದಲ್ಲಿದೆ.

ಅನುಷ್ಠಾನದಿಂದ ಲಾಭ
ಬಾವಿಯ ಹೊಸ ರೂಪಕ್ಕೆ ಪ್ರಾಶಸ್ತ್ಯವನ್ನು ನೀಡಲಾಗಿದೆ. ಕಲಾಗಾರನಾಗಿದ್ದರಿಂದ ಮನೆ ಮುಂಭಾಗದಲ್ಲಿ ಇದ್ದರೆ ಚಂದ ಎಂಬ ಕಾರಣಕ್ಕೆ ಈ ಪ್ರಯತ್ನ ಮಾಡಿದ್ದೇನೆ. ಕೃಷಿಕರು ತಮ್ಮ ಜಮೀನಿನಲ್ಲಿ ಬೇರೆ-ಬೇರೆ ರೀತಿಯ ತೋಟಗಾರಿಕೆ, ಜಲ ಸಂರಕ್ಷಣೆ ಕಾರ್ಯಗಳನ್ನು ಮಾಡುತ್ತಾರೆ. ಇಂತಹ ಸಂದರ್ಭ ಸರಕಾರದಿಂದ ದೊರೆಯುವ ನರೇಗಾದಂತಹ ಯೋಜನೆ ಸದ್ಭಳಕೆ ಮಾಡಿಕೊಳ್ಳಬೇಕು ಎನ್ನುತ್ತಾರೆ ಪದ್ಮನಾಭ ನಾಯ್ಕ.

ಗಮನ ಸೆಳೆವ ಮೇಲ್ನೋಟ
ಬಾವಿಯ ಮೇಲ್ಭಾಗವನ್ನು ರಿಂಗ್‌ನಿಂದ ಆವರಿಸಿ ಬಳಿಕ ಕಂಚಿನ ಪಾತ್ರೆಯ ರೀತಿಯಲ್ಲಿ ಹೊಸ ರೂಪವನ್ನು ನೀಡಲಾಗಿದೆ. ಸುತ್ತಲು ಸುಂದರವಾದ ಬಣ್ಣ ಬಳಿಯಲಾಗಿದೆ. ಮೇಲ್ನೋಟಕ್ಕೆ ದೊಡ್ಡ ಕಂಚಿನ ಪಾತ್ರೆಯನ್ನೇ ಇರಿಸಿದಂತೆ ಕಂಡು ಬರುತ್ತಿದೆ.

ಉದಯಶಂಕರ್‌ ನೀರ್ಪಾಜೆ

ಟಾಪ್ ನ್ಯೂಸ್

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Loksabha election; ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

6-court

Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

8-

Kaniyoor: ಕೆರೆ ಸ್ವಚ್ಛಗೊಳಿಸುವಾಗ ಮುಳುಗಿ ವ್ಯಕ್ತಿ ಸಾವು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Dina Bhavishya

Daily Horoscope; ಉದ್ಯೋಗಸ್ಥರಿಗೆ ಹಿತಶತ್ರುಗಳ ಕಾಟ.ಶನಿ ಅನುಗ್ರಹ ಪ್ರಾಪ್ತಿಯ ಸಮಯ

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Loksabha election; ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.