ಪ್ರಥಮ ಚಿಕಿತ್ಸೆ ನೀಡದೆ ಶಿಕ್ಷಕರ ನಿರ್ಲಕ್ಷ್ಯ; ಜಾಲತಾಣದಲ್ಲಿ ವೀಡಿಯೋ ವೈರಲ್
Team Udayavani, Nov 6, 2022, 7:23 AM IST
ಬೆಳ್ತಂಗಡಿ: ಆಟವಾಡುತ್ತಿದ್ದ ಬಾಲಕನೋರ್ವ ಬಿದ್ದು ತಲೆ ಹಿಂಬದಿ ಏಟಾಗಿ ರಕ್ತಸ್ರಾವವಾಗಿದ್ದರೂ, ಶಿಕ್ಷಕರು ಬಾಲಕನನ್ನು ತತ್ಕ್ಷಣ ಆಸ್ಪತ್ರೆಗೆ ಕರೆದೊಯ್ಯದೆ ತಾವೂ ಪ್ರಥಮ ಚಿಕಿತ್ಸೆ ನೀಡಲು ಮುಂದಾಗದೆ ವಿದ್ಯಾರ್ಥಿಗಳಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿದ ಘಟನೆಯೊಂದು ನಡೆದಿದೆ.
ಬೆಳ್ತಂಗಡಿ ತಾಲೂಕಿನ ತೋಟತ್ತಾಡಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನ. 4ರಂದು ಆಟ ಆಡುವ ಸಮಯ ನಾಲ್ಕನೇ ತರಗತಿ ವಿದ್ಯಾರ್ಥಿಯೋರ್ವ ಬಿದ್ದು ತಲೆಗೆ ಏಟಾಗಿತ್ತು ಶಿಕ್ಷಕರು ಪ್ರಥಮ ಚಿಕಿತ್ಸೆ ನೀಡಿ ಸ್ಥಳೀಯ ಆಸ್ಪತ್ರೆಗೆ ಸಾಗಿಸುವ ಬದಲಾಗಿ ಮಕ್ಕಳಿಂದಲೇ ಪ್ರಥಮ ಚಿಕಿತ್ಸೆ ಕೊಡಿಸಿದ್ದಾರೆ.
ಬಳಿಕ ಮಗುವನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಲಾಗಿದೆ. ಗಾಯಗೊಂಡ ವಿದ್ಯಾರ್ಥಿಗೆ ಶಿಕ್ಷಕರು ಪ್ರಥಮ ಚಿಕಿತ್ಸೆ ನೀಡಲು ಮುಂದಾಗದೆ ಇರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಕ್ಕಳೇ ಪ್ರಥಮ ಚಿಕಿತ್ಸೆ ನೀಡುತ್ತಿರುವ ಘಟನೆಯ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಲಾಗಿದೆ.
ಶಾಲಾಭಿವೃದ್ಧಿ ಸಮಿತಿ ಹಾಗೂ ಹಳೇ ವಿದ್ಯಾರ್ಥಿ ಸಂಘದ ವತಿಯಿಂದ ಶನಿವಾರ ಸಭೆ ನಡೆಸಿ ಮುಂದೆ ಇಂತಹ ಘಟನೆ ಮರುಕಳಿಸದಂತೆ ನಿರ್ಣಯ ಕೈಗೊಳ್ಳಲಾಗಿದೆ ಎಂದು ಅಲ್ಲಿನ ಶಿಕ್ಷಕರು ತಿಳಿಸಿದ್ದಾರೆ.
ಮಾಹಿತಿ ಪಡೆದಿದ್ದೇನೆ
ಘಟನೆ ಕುರಿತು ಮಾಹಿತಿ ಪಡೆದಿದ್ದೇನೆ. ಮಗು ಆರೋಗ್ಯವಾಗಿದೆ. ಸಿ.ಆರ್.ಪಿ.ಗಳು ಶಾಲೆಗೆ ಭೇಟಿ ನೀಡಿದ್ದಾರೆ. ಶಿಕ್ಷಕರು ಈ ರೀತಿ ವರ್ತಿಸಬಾರದಿತ್ತು. ಸೋಮವಾರ ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಲಾಗುವುದು ಎಂದು ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎಸ್. ವಿರೂಪಾಕ್ಷಪ್ಪ ಅವರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು
Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ
Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ
Bengaluru: ಪೇಂಟರ್ ಕೊಂದು ಪೊಲೀಸ್ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು