ಪ್ರವಾಸಿ ಕ್ಷೇತ್ರಗಳಲ್ಲಿ ನೆಟ್‌ವರ್ಕ್‌ ಸಮಸ್ಯೆ

ಕರೆಯೇ ಬರುವುದಿಲ್ಲ, ಇಂಟರ್ನೆಟ್‌ ಸೇವೆಯಂತೂ ದೂರ

Team Udayavani, Feb 27, 2020, 4:38 AM IST

JADU-24

ಪುತ್ತೂರು: ಆರಂಭಿಕ ಪೈಪೋಟಿಯನ್ನು ಕಳೆದು ಕೊಂಡು ಕಳಪೆ ಸೇವೆಗೆ ಜಾರಿರುವ ಮೊಬೈಲ್‌ ನೆಟ್‌ವರ್ಕ್‌ ಸಂಸ್ಥೆಗಳು ಗ್ರಾಮಾಂತರ ಭಾಗಗಳಲ್ಲಿ ಸಂಪೂರ್ಣ ಸ್ತಬ್ಧಗೊಳ್ಳುತ್ತಿದ್ದು, ಗ್ರಾಮೀಣ ಗ್ರಾಹಕರನ್ನು ವಂಚಿಸುತ್ತಿವೆ. ಗ್ರಾಮಾಂತರದ ಬಡಗನ್ನೂರು, ಪಡುವನ್ನೂರು, ನೆಟ್ಟಣಿಗೆ ಮುಟ್ನೂರು, ಅರಿಯಡ್ಕ ವ್ಯಾಪ್ತಿಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದ ವಿವಿಧ ಸಂಸ್ಥೆಗಳ ನೆಟ್‌ವರ್ಕ್‌ಗಳು ಜಂಕ್ಷನ್‌ಗಳನ್ನು ಹೊರತುಪಡಿಸಿ ವಸತಿ ಪ್ರದೇಶಗಳನ್ನು ತಲುಪುವಲ್ಲಿ ದಿನದಿಂದ ದಿನಕ್ಕೆ ವಿಫಲಗೊಳ್ಳುತ್ತಿವೆ. ಸರಕಾರಿ ಸ್ವಾಮ್ಯದ ಬಿಎಸ್ಸೆನ್ನೆಲ್‌, ಏರ್‌ಟೆಲ್‌, ಐಡಿಯಾ (ವೊಡಾಫೋನ್‌) ಮೊದಲಾದ ನೆಟ್‌ವರ್ಕ್‌ಗಳು ಲಭ್ಯವಿದ್ದರೂ ಕರೆಗಳು ಬಂದರೆ ಮಾತನಾಡಲು ಸಾಧ್ಯವಾಗುವಷ್ಟು ಸಾಮರ್ಥ್ಯವನ್ನು ಹೊಂದಿಲ್ಲ. ಇನ್ನು ಇಂಟರ್‌ನೆಟ್‌ ಸೇವೆಯಂತೂ ಬಲುದೂರ ಸರಿದಿದೆ.

ಪ್ರವಾಸಿ ಕ್ಷೇತ್ರಗಳು
ಈ ವ್ಯಾಪ್ತಿಯಲ್ಲಿ ಜನಾಕರ್ಷಣೆಯ ಧಾರ್ಮಿಕ ಕ್ಷೇತ್ರಗಳು ಅಭಿವೃದ್ಧಿಗೊಂಡಿವೆ. ಈಶ್ವರಮಂಗಲ ಹನುಮಗಿರಿ ಕ್ಷೇತ್ರ ಅಭಿವೃದ್ಧಿಗೊಂಡು ಭಕ್ತರನ್ನು ಆಕರ್ಷಿಸುತ್ತಿದೆ. ತುಳುನಾಡಿನ ಅವಳಿ ವೀರ ಪುರುಷರಾದ ಕೋಟಿ-ಚೆನ್ನಯರ ಹುಟ್ಟು ಹಾಗೂ ಸಾಧನೆಗೆ ಸಾಕ್ಷಿಯಾದ ಗೆಜ್ಜೆಗಿರಿ ನಂದನ ಬಿತ್ತಿಲ್‌ ಕ್ಷೇತ್ರ, ಪಡುಮಲೆ ಕ್ಷೇತ್ರಗಳು ಅಭಿವೃದ್ಧಿ ಹೊಂದುತ್ತಿವೆ. ಕ್ಷೀಣ ನೆಟ್‌ವರ್ಕ್‌ ಪ್ರವಾಸಿಗರನ್ನು ಸಂವಹನ, ಇಂಟರ್ನೆಟ್‌ ಬಳಕೆಯ ಅವಕಾಶದಿಂದ ವಂಚಿತಗೊಳಿಸುತ್ತಿದೆ.

ಅಭಿವೃದ್ಧಿಗೂ ತೊಡಕು
ಗ್ರಾಮೀಣ ಪ್ರದೇಶಗಳಿಗೆ ಸಂವಹನ ಮಾಧ್ಯಮ ಅತಿ ಅಗತ್ಯ. ತಂತ್ರಜ್ಞಾನ ಯುಗದಲ್ಲೂ ಈ ವ್ಯವಸ್ಥೆಗಳು ಸಮರ್ಪಕವಾಗಿ ತಲುಪದಿದ್ದರೆ ಸರಕಾರಿ ಹಾಗೂ ಖಾಸಗಿ ಪ್ರಾಯೋಜಿತ ಅಭಿವೃದ್ಧಿ ಸಾಧ್ಯವಾಗುವುದಿಲ್ಲ. ಇಂತಹದೇ ಸಮಸ್ಯೆ ಬಡಗನ್ನೂರು ಹಾಗೂ ಸುತ್ತಲಿನ ಗ್ರಾಮಗಳನ್ನು ಕಾಡುತ್ತಿದೆ. ಗ್ರಾ.ಪಂ.ಗಳಲ್ಲಿ ಜನರ ಅಗತ್ಯದ ವ್ಯವಸ್ಥೆಗಳನ್ನು ಮಾಡಿಕೊಡಲೂ ಈ ನೆಟ್‌ವರ್ಕ್‌ ವ್ಯವಸ್ಥೆ ಶಾಪವಾಗಿ ಪರಿಣಮಿಸಿದೆ.

ಬಡಗನ್ನೂರು, ಅರಿಯಡ್ಕ, ನೆಟ್ಟಣಿಗೆ ಮುಟ್ನೂರು, ನಿಡ³ಳ್ಳಿ ಗ್ರಾ.ಪಂ.ಗಳ ವ್ಯಾಪ್ತಿಯ ಅನಿಲೆ, ಕೊçಲ, ಈಶ್ವರಮಂಗಲ, ನಿಡ³ಳ್ಳಿ, ಪಾಪೆಮಜಲು, ಪದಡ್ಕ ಮೊದಲಾದ ಕಡೆಗಳಲ್ಲಿ ನೆಟ್‌ವರ್ಕ್‌ ಟವರ್‌ಗಳನ್ನು ಅಳವಡಿಸಲಾಗಿದೆ. ಕೆಲವು ಟವರ್‌ಗಳಲ್ಲಿ ಬೇರೆ ಬೇರೆ ಸಂಸ್ಥೆಗಳ ನೆಟ್‌ವರ್ಕ್‌ಗಳನ್ನು ಜೋಡಿಸಿಕೊಳ್ಳಲಾಗಿದೆ. ಆದರೆ ಟವರ್‌ ಸಮೀಪದ ಒಂದಷ್ಟು ವ್ಯಾಪ್ತಿಯನ್ನು ಬಿಟ್ಟರೆ ಉಳಿದೆಡೆಗಳಿಗೆ ಇದರ ಪ್ರಯೋಜನವನ್ನು ಕನಿಷ್ಠ ಸಾಮರ್ಥ್ಯಕ್ಕೆ ಸೀಮಿತಗೊಳಿಸಲಾಗಿದೆ.

ತುರ್ತು ಕರೆಯೂ ಇಲ್ಲ
ತುರ್ತು ಸಂದರ್ಭಗಳಲ್ಲಂತೂ ಈ ಪ್ರದೇಶಗಳ ಒಳಭಾಗದ ಮನೆಗಳಿಗೆ ದೂರವಾಣಿ ಕರೆ ಸಾಧ್ಯವಾಗುವುದಿಲ್ಲ. ಒಂದು ವೇಳೆ ಕರೆ ಬಂದರೂ ಸಂವಹನ ಸಾಧ್ಯವಾಗುತ್ತಿಲ್ಲ. ಅಷ್ಟಕ್ಕೂ ಕರೆ ಮಾಡಲೇಬೇಕೆಂದಿದ್ದರೆ ಎತ್ತರದ ಪ್ರದೇಶಕ್ಕೆ ತೆರಳಬೇಕು ಅಥವಾ ಮರ ಏರಬೇಕು. ನೆಟ್‌ವರ್ಕ್‌ ವ್ಯವಸ್ಥೆ ಗ್ರಾಮಗಳನ್ನು ಪ್ರವೇಶಿಸಿದ ಆರಂಭದಲ್ಲಿ ಇದ್ದ ಸ್ಥಿತಿಯೇ ಇಲ್ಲಿ ಮರುಕಳಿಸಿದೆ.

ಲೈನ್‌ ಸಮಸ್ಯೆ ಇತ್ತು
ಬಿಎಸ್ಸೆನ್ನೆಲ್‌ ನೆಟ್‌ವರ್ಕ್‌ಗೆ ಸಂಬಂಧಿಸಿದ ಒಎಫ್‌ಸಿ ಲೈನ್‌ ಕುಂಬ್ರ ಸಮೀಪ ತುಂಡಾಗಿದೆ. ಸ್ಪಷ್ಟ ಜಾಗ ಹುಡುಕುವ ಕೆಲಸ ನಡೆಯುತ್ತಿದೆ. ಈ ಕಾರಣದಿಂದ ಕೆಲವು ದಿನಗಳಿಂದ ಕುಂಬ್ರ, ಈಶ್ವರಮಂಗಲ, ಬಡಗನ್ನೂರು, ಸುಳ್ಯಪದವು ಪರಿಸರದಲ್ಲಿ ನೆಟ್‌ವರ್ಕ್‌ ಡೌನ್‌ ಆಗಿದೆ. ವಿದ್ಯುತ್‌ ವ್ಯತ್ಯಯ, ಲೋ ವೋಲ್ಟೆàಜ್‌ನಿಂದಲೂ ನೆಟ್‌ವರ್ಕ್‌ ಸಮಸ್ಯೆ ಉಂಟಾಗುತ್ತದೆ. ಟವರ್‌ನ ಸಾಮರ್ಥ್ಯವನ್ನು ಕಡಿಮೆಗೊಳಿಸುವುದಿಲ್ಲ.
– ಆನಂದ್‌ ಬಿ.ಎಜಿಎಂ, ಬಿಎಸ್ಸೆನ್ನೆಲ್‌ ಪುತ್ತೂರು

ಗ್ರಾಹಕರಿಗೆ ವಂಚನೆ
ಗ್ರಾಮಾಂತರ ಭಾಗಗಳ ನೆಟ್‌ವರ್ಕ್‌ಗೆ ಸಂಬಂಧಿಸಿದಂತೆ ಸಂಸ್ಥೆಗಳು ಸೇವಾ ದಕ್ಷತೆ ವಹಿಸದೆ ನಿರ್ಲಕ್ಷé ಮಾಡುವ ಮೂಲಕ ಗ್ರಾಹಕ ಹಕ್ಕುಗಳನ್ನು ವಂಚಿಸುತ್ತಿದ್ದಾರೆ. ಶುಲ್ಕಗಳನ್ನು ಪಾವತಿಸುತ್ತಿದ್ದರೂ ಬಳಕೆಗೆ ಸಿಗುತ್ತಿಲ್ಲ. ಪ್ರವಾಸಿ ಕ್ಷೇತ್ರಗಳನ್ನೂ ಒಳಗೊಂಡಿರುವ ಬಡಗನ್ನೂರು ವ್ಯಾಪ್ತಿಯಲ್ಲಂತೂ ನೆಟ್‌ವರ್ಕ್‌ ಸಮಸ್ಯೆ ತೀವ್ರಗೊಂಡಿದೆ. ಈ ಕುರಿತು ಸಂಸ್ಥೆಗಳ ಜತೆಗೆ ಆಡಳಿತ ವ್ಯವಸ್ಥೆ, ಜನಪ್ರತಿನಿಧಿಗಳು ಕ್ರಮ ಕೈಗೊಳ್ಳಬೇಕು.
– ಲಿಂಗಪ್ಪ ಗೌಡ,ಅಧ್ಯಕ್ಷ, ಶ್ರೀಕೃಷ್ಣ ಯುವಕ ಮಂಡಲ ಪಟ್ಟೆ

ರಾಜೇಶ್‌ ಪಟ್ಟೆ

ಟಾಪ್ ನ್ಯೂಸ್

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

CAR-D

Sullia: ರಸ್ತೆ ಬದಿ ನಿಲ್ಲಿಸಿದ್ದ ಕಾರಿಗೆ ಕಂಟೈನರ್‌ ಢಿಕ್ಕಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.