ಹೊಸ ಬಿಪಿಎಲ್‌ ಕಾರ್ಡ್‌; ಜಿಲ್ಲೆಯ 2,237 ಅರ್ಜಿ ತಿರಸ್ಕೃತ


Team Udayavani, Jul 30, 2022, 10:20 AM IST

1

ಪುತ್ತೂರು: ಬಿಪಿಎಲ್‌ ಪಡಿತರ ಚೀಟಿ ಪಡೆಯಲು ಬೇಕಾದ ಮಾನದಂಡ ಹೊಂದಿರದ ಕಾರಣಕ್ಕಾಗಿ ದ.ಕ. ಜಿಲ್ಲೆಯಲ್ಲಿ 2,237 ಅರ್ಜಿಗಳು ತಿರಸ್ಕೃತಗೊಂಡಿವೆ.

ಪಡಿತರ ಚೀಟಿ ಹೊಂದಿಲ್ಲದ ಫಲಾನು ಭವಿ ಗಳು ಸೂಕ್ತ ದಾಖಲೆಗಳೊಂದಿಗೆ ಆನ್‌ ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಆಹಾರ. ನಾಗರಿಕ ಇಲಾಖೆ ಅವಕಾಶ ನೀಡಿತ್ತು. ಅರ್ಜಿ ಸಲ್ಲಿಕೆಗೆ ಈಗಲೂ ಅವಕಾಶ ಇದೆ.

ಬಿಪಿಎಲ್‌ ಕಾರ್ಡ್‌ ವಿವರ

ದ.ಕ.ದಲ್ಲಿ ಬಿಪಿಎಲ್‌ ಕಾರ್ಡ್‌ಗೆ 13,642 ಅರ್ಜಿಗಳು ಸಲ್ಲಿಕೆ ಆಗಿದ್ದು 783 ಅರ್ಜಿ ಹಿಂಪಡೆಯಲಾಗಿದೆ. ಇದರಲ್ಲಿ 12,431 ಅರ್ಜಿಗಳು ಪರಿಶೀಲನೆಗೆ ಒಳಪಟ್ಟಿವೆ. 9,659 ಮಂದಿಗೆ ಕಾರ್ಡ್‌ ನೀಡಲಾಗಿದೆ. 2,237 ತಿರಸ್ಕೃತಗೊಂಡಿವೆ. 3,983 ವಿತರಣೆಗೆ ಬಾಕಿ ಇವೆ ಎನ್ನುತ್ತಿದೆ ಅಂಕಿ – ಅಂಶ. ಗರಿಷ್ಠ ಅರ್ಜಿ ಸಲ್ಲಿಕೆ ಆಗಿರುವ ಮಂಗಳೂರಿನಲ್ಲಿ 4,841 ಕಾರ್ಡ್‌ ವಿತರಿಸಲಾಗಿದೆ. ಕನಿಷ್ಠ ಅರ್ಜಿ ಸಲ್ಲಿಕೆ ಆಗಿರುವ ಸುಳ್ಯದಲ್ಲಿ 539 ಕಾರ್ಡ್‌ ಗಳನ್ನು ನೀಡಲಾಗಿದೆ.

ಇನ್ನೆರಡು ತಿಂಗಳು ಸ್ಥಗಿತ

ವಿಳಂಬ ಪ್ರಕ್ರಿಯೆ, ಸ್ಥಳ ಪರಿಶೀಲನೆ ನಡೆಸಬೇಕು ಎಂಬ ಹೊಸ ನಿಯಮ ಗಳಿಂದಾಗಿ ಅರ್ಜಿ ಸಲ್ಲಿಕೆ ಪ್ರಾರಂಭವಾಗಿ ಭರ್ತಿ ಒಂದು ವರ್ಷ ಕಳೆದರೂ ಅರ್ಜಿ ಸಲ್ಲಿಸಿದವರಿಗೆ ಬಿಪಿಎಲ್‌ ಪಡಿತರ ಚೀಟಿ ಸಿಕ್ಕಿರಲಿಲ್ಲ. ಅದಾದ ಕೆಲವು ದಿನಗಳಲ್ಲಿ ವಿತರಣೆ ಪ್ರಾರಂಭಗೊಂಡಿತು. ಪ್ರಸ್ತುತ 3,983 ಕಾರ್ಡ್‌ಗಳು ವಿತರಿಸಲು ಬಾಕಿ ಇವೆ. ಜುಲೈಯಿಂದ ವಿತರಣೆಯನ್ನು ಮತ್ತೆ ಸ್ಥಗಿತಗೊಳಿಸಲಾಗಿದೆ. ಇನ್ನೆರಡು ತಿಂಗಳು ಹೊಸ ಕಾರ್ಡ್‌ ವಿತರಿಸಲಾಗುವುದಿಲ್ಲ ಎಂಬ ಮಾಹಿತಿ ಲಭಿಸಿದೆ.

2,680 ಪಡಿತರ ಚೀಟಿ ರದ್ದು

ನಿಯಮಕ್ಕೆ ವಿರುದ್ಧವಾಗಿ ಅಂತ್ಯೋದಯ ಹಾಗೂ ಬಿಪಿಎಲ್‌ ಪಡಿತರ ಚೀಟಿ ಪಡೆದವರನ್ನು ಪತ್ತೆ ಮಾಡಿರುವ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ದ.ಕ.ದಲ್ಲಿ ಒಂದು ವರ್ಷದಲ್ಲಿ (2021ರ ಎಪ್ರಿಲ್‌ 1ರಿಂದ 30 ಮಾರ್ಚ್‌ 2022ರ ವರೆಗೆ) 2,680 ಪಡಿತರ ಚೀಟಿಗಳನ್ನು ರದ್ದುಪಡಿಸಿದೆ. ಅನರ್ಹರು ಸುಳ್ಳು ದಾಖಲೆ ನೀಡಿ ಪಡೆದಿರುವ ಪಡಿತರ ಚೀಟಿಗಳನ್ನು ಹಿಂದಿರುಗಿಸಲು ಸರಕಾರ ಸಾಕಷ್ಟು ಸಮಯಾವಕಾಶ ನೀಡಿತ್ತು. ಕಂದಾಯ ಇಲಾಖೆ, ತೆರಿಗೆ ಇಲಾಖೆಗಳಿಂದ ದತ್ತಾಂಶ ಪಡೆದು ಅನರ್ಹ ಕಾರ್ಡುಗಳನ್ನು ರದ್ದುಪಡಿಸಲು ಆಹಾರ ಇಲಾಖೆ ಕ್ರಮ ಕೈಗೊಂಡಿತ್ತು. ಈ ತನಕ ಜಿಲ್ಲೆಯಲ್ಲಿ ಒಟ್ಟು 19,463 ಹೆಸರನ್ನು ಪಡಿತರ ಚೀಟಿಯಿಂದ ಕೈ ಬಿಡಲಾಗಿದೆ.

ಶೀಘ್ರ ಪುನರಾರಂಭ: ಕಾರ್ಡ್‌ ವಿತರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದ್ದು ಕೆಲವು ದಿನಗಳಲ್ಲಿ ಪುನರಾರಂಭ ಗೊಳ್ಳಲಿದೆ. ಸಾಫ್ಟ್ವೇರ್‌ ಅಪ್‌ಡೇಟ್‌ ಆಗುವ ಕಾರಣ ಸ್ಥಗಿತ ಆಗಿದೆ. ಹೊಸ ಕಾರ್ಡ್‌ಗೆ ಗ್ರಾಮ ವನ್‌ ಕೇಂದ್ರ, ಸೈಬರ್‌ ಸಹಿತ ವಿವಿಧೆಡೆ ಅರ್ಜಿ ಸಲ್ಲಿಸಲು ಅವಕಾಶ ಇದೆ. –ಎನ್‌. ಮಾಣಿಕ್ಯ, ಉಪ ನಿರ್ದೇಶಕರು, ಆಹಾರ ಮತ್ತು ನಾಗರಿಕ ಇಲಾಖೆ, ದ.ಕ. ಜಿಲ್ಲೆ

-ಕಿರಣ್‌ ಪ್ರಸಾದ್‌ ಕುಂಡಡ್ಕ

ಟಾಪ್ ನ್ಯೂಸ್

1-assas-aa

Rae Bareli ರಣಕಣ; ನಾಮಪತ್ರ ಸಲ್ಲಿಸಿದ ರಾಹುಲ್ ಗಾಂಧಿ: ಗೆಲುವು ಸುಲಭವೇ?

Water Supply

Water scarcity; ಮಂಗಳೂರು ನಗರಕ್ಕೆ ಎರಡು ದಿನಕ್ಕೊಮ್ಮೆ ನೀರು

HDK (3)

Prajwal Case; ಮೊದಲು ರಾಹುಲ್ ಗಾಂಧಿಗೆ ನೋಟಿಸ್ ಕೊಡಬೇಕು: ಎಚ್ ಡಿಕೆ ಆಗ್ರಹ

jameer

Pakistan ಜಿಂದಾಬಾದ್ ಅಂದವರನ್ನು ಡಿಶ್ಯುಂ ಡಿಶ್ಯುಂ ಎಂದು ಶೂಟ್ ಮಾಡಬೇಕು: ಜಮೀರ್

siddanna-2

Prajwal Revanna ಯಾವುದೇ ದೇಶದಲ್ಲಿದ್ದರೂ ಕರೆತರುತ್ತೇವೆ: ಸಿದ್ದರಾಮಯ್ಯ ಕಿಡಿ

1-wddsa-das

Toxic: ಯಶ್ ಸಿನಿಮಾದಿಂದ ಹೊರಹೋದ ಕರೀನಾ ಕಪೂರ್?

kore

KLE ಸಂಸ್ಥೆ ಬೆಳೆದಿದ್ದು ದಾನಿಗಳಿಂದ, ಕಾಂಗ್ರೆಸ್‍ನಿಂದ ಅಲ್ಲ‌: ಪ್ರಭಾಕರ ಕೋರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-sampaje

Aranthodu: ಚಾಲಕನ ನಿಯಂತ್ರಣ ತಪ್ಪಿ ಹೋಟೆಲ್ ಗೆ ಢಿಕ್ಕಿ ಹೊಡೆದ ಕಾರು

Uppinangady: ತೀವ್ರ ಜ್ವರ; ಅರ್ಚಕ ಸಾವು

Uppinangady: ತೀವ್ರ ಜ್ವರ; ಅರ್ಚಕ ಸಾವು

Bantwala: ಫರಂಗಿಪೇಟೆ; ಬೈಕ್‌ ಢಿಕ್ಕಿಯಾಗಿ ಗಾಯ

Bantwala: ಫರಂಗಿಪೇಟೆ; ಬೈಕ್‌ ಢಿಕ್ಕಿಯಾಗಿ ಗಾಯ

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

16-uv-fusion

Aranthodu: ವಾಹನಗಳ ಮಧ್ಯೆ ಸರಣಿ ಅಪಘಾತ; ಬೈಕ್ ಸವಾರ ಗಂಭೀರ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-assas-aa

Rae Bareli ರಣಕಣ; ನಾಮಪತ್ರ ಸಲ್ಲಿಸಿದ ರಾಹುಲ್ ಗಾಂಧಿ: ಗೆಲುವು ಸುಲಭವೇ?

Water Supply

Water scarcity; ಮಂಗಳೂರು ನಗರಕ್ಕೆ ಎರಡು ದಿನಕ್ಕೊಮ್ಮೆ ನೀರು

HDK (3)

Prajwal Case; ಮೊದಲು ರಾಹುಲ್ ಗಾಂಧಿಗೆ ನೋಟಿಸ್ ಕೊಡಬೇಕು: ಎಚ್ ಡಿಕೆ ಆಗ್ರಹ

jameer

Pakistan ಜಿಂದಾಬಾದ್ ಅಂದವರನ್ನು ಡಿಶ್ಯುಂ ಡಿಶ್ಯುಂ ಎಂದು ಶೂಟ್ ಮಾಡಬೇಕು: ಜಮೀರ್

1-CKDY

Chikkodi:ಅಮಿತ್ ಶಾ ಸಮ್ಮುಖದಲ್ಲಿ ವಿವೇಕರಾವ್ ಪಾಟೀಲ ಬಿಜೆಪಿ ಸೇರ್ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.