ಬೀಡಿ ಕಟ್ಟುತ್ತಿದ್ದ ಮಹಿಳೆಯರಿಗೆ ಹೊಸ ಉದ್ಯೋಗ

ಕೋರಿಗದ್ದೆಯಲ್ಲಿ ನರೇಗಾದಿಂದ ನರ್ಸರಿ ತೋಟ

Team Udayavani, Oct 14, 2022, 2:44 PM IST

17

ಪುತ್ತೂರು: ನೆಟ್ಟಣಿಗೆ ಮುಟ್ನೂರು ಗ್ರಾ.ಪಂ. ವ್ಯಾಪ್ತಿಯ ಕೋರಿಗದ್ದೆಯಲ್ಲಿ ಪಂಚಮಿ ಸಂಜೀವಿನಿ ಸ್ವ-ಸಹಾಯ ಒಕ್ಕೂಟದ ಮಹಿಳೆಯರು ನರೇಗಾದ ಮೂಲಕ ತೋಟಗಾರಿಕೆ, ಅರಣ್ಯ ಹೀಗೆ ವಿವಿಧ ಜಾತಿ/ ಪ್ರಬೇಧದ ಗಿಡಗಳನ್ನು ನರ್ಸರಿ ಮೂಲಕ ಬೆಳೆಸುವ ಕಾರ್ಯ ಆರಂಭಿಸಿದ್ದಾರೆ.

ಮಹಾತ್ಮಾಗಾಂಧಿ ನರೇಗಾ ಯೋಜನೆಯಡಿ ಶೆಡ್‌ ನಿರ್ಮಾಣ ಮತ್ತು ನರ್ಸರಿ ಅಭಿವೃದ್ಧಿಗೆ 2 ಲಕ್ಷ ರೂ. ಹಾಗೂ ಸಂಜೀವಿನಿ ಒಕ್ಕೂಟವೂ 50 ಸಾವಿರ ರೂ. ಸೇರಿದಂತೆ ಒಟ್ಟು 2.5 ಲಕ್ಷ ರೂ. ನಲ್ಲಿ ನರ್ಸರಿ ನಿರ್ಮಾಣ ಮಾಡಲಾಗಿದೆ. ನೆಟ್ಟಣಿಗೆ ಮುಟ್ನೂರು ಗ್ರಾ.ಪಂ. ಸ್ವಚ್ಛ ಸಂಕೀರ್ಣ ಘಟಕಕ್ಕೆ ಕೋರಿಗದ್ದೆ ಎಂಬಲ್ಲಿ ಮೀಸಲಿರಿಸಿದ ಜಮೀನಿನ ಪಕ್ಕದಲ್ಲೇ ಸುಮಾರು 300 ಚ.ಮೀ. ಜಾಗದಲ್ಲಿ ವ್ಯವಸ್ಥಿತ ವಾಗಿ ನರ್ಸರಿ ಶೆಡ್‌ ಅನ್ನು ನಿರ್ಮಿಸಲಾಗಿದೆ.

ನರ್ಸರಿಯಲ್ಲಿ ಏನೇನಿದೆ

ನುಗ್ಗೆ, ಹಲಸು, ನಿಂಬೆ, ಕರಿಬೇವು, ಸೀತಾಫಲ, ಪಪ್ಪಾಯ, ನೆಲ್ಲಿಕ್ಕಾಯಿ, ನೇರಳೆ, ಕಾಳುಮೆಣಸು/ ಹಿಪ್ಪಲಿ ಹೀಗೆ ಹಲವು ಜಾತಿಯ ಸುಮಾರು 4,000 ಗಿಡಗಳನ್ನು ಈಗಾಗಲೇ ಬೆಳೆಸಲಾಗಿದೆ. ಪ್ರಸ್ತುತ 3 ಮಂದಿ ಸ್ವ-ಸಹಾಯ ಸಂಘದ ಸದಸ್ಯರು ಇದರ ಪೋಷಣೆ ಮಾಡುತ್ತಿದ್ದು ಒಟ್ಟು 10 ಸಾವಿರ ಗಿಡ ನಾಟಿ ಮಾಡುವ ಗುರಿ ಹೊಂದಲಾಗಿದೆ. 6 ಸಾವಿರ ಅಡಿಕೆ ಗಿಡಗಳನ್ನು ನಾಟಿ ಮಾಡಲಿದ್ದು ಅಡಿಕೆ ಬೀಜ ದೊರೆತ ತತ್‌ಕ್ಷಣ ಆ ಕಾರ್ಯ ಆರಂಭವಾಗಲಿದೆ.

ಉದ್ಯೋಗ ಸೃಷ್ಟಿ

ಡೇ-ಎನ್‌ಆರ್‌ಎಲ್‌ಎಂ ಯೋಜನೆ ಯಡಿ ಸಂಜೀವಿನಿ ಗ್ರಾಮ ಪಂಚಾಯತ್‌ ಮಟ್ಟದ ಒಕ್ಕೂಟದ ಸ್ವ-ಸಹಾಯ ಸಂಘದ ಮೂವರು ಸದಸ್ಯರಿಗೆ ಉದ್ಯೋಗ ಸೃಷ್ಟಿಯಾಗಿದೆ. ಬೀಡಿಕಟ್ಟುವ ಕಸುಬನ್ನು ಮಾಡುತ್ತಿದ್ದ ನೆಟ್ಟಣಿಗೆ ಮುಟ್ನೂರು ಗ್ರಾಮದ ರಮ್ಯಾ, ಸಾವಿತ್ರಿ ಹಾಗೂ ರಾಜೇಶ್ವರೀ ಅವರು ಈಗ ನರ್ಸರಿ ಕೆಲಸದಲ್ಲಿ ತೊಡಗಿಸಿಕೊಂಡಿದ್ದು ಸ್ವಾವಲಂಬಿ ಬದುಕು ಸಾಗಿಸುತ್ತಿದ್ದಾರೆ.

84 ಸಾವಿರ ರೂ. ಕೂಲಿ ಆದಾಯ

ಬೀಜಗಳ ಬಿತ್ತನೆಗೆ ಬೇಕಾದ ಮಿಶ್ರಣ (ಮರಳು, ಮಣ್ಣು ಮತ್ತು ಗೊಬ್ಬರ) ವನ್ನು ತಯಾರಿಸುವುದು, ಬೀಜಗಳನ್ನು ಪೋಲಿತಿನ್‌ ಚೀಲಗಳಿಗೆ ತುಂಬುವುದು, ಕಳೆ ಕೀಳುವುದು, ನೀರು ಹಾಕುವುದು, ಗೊಬ್ಬರ ಹಾಕುವುದು ಹೀಗೆ ಗಿಡಗಳ ಪೋಷಣೆಯ ಕೆಲಸಗಳನ್ನು ಮಾಡುತ್ತಾರೆ. 10 ಸಾವಿರ ಗಿಡಗಳನ್ನು ಬೆಳೆಸಿದರೆ ಸುಮಾರು 84 ಸಾವಿರ ರೂ.ನಷ್ಟು ಕೂಲಿ ಹಣವನ್ನು ಈ ನರ್ಸರಿಯ ನಿರ್ವಹಣೆಯಿಂದ ಪಡೆಯಲಿದ್ದಾರೆ.

ವ್ಯವಸ್ಥಿತ ಶೆಡ್‌ ರಚನೆ

ಗ್ರೀನ್‌ ಶೇಡ್‌ ನೆಟ್‌ ಆವೃತ್ತ ನರ್ಸರಿ ಶೆಡ್‌ ನಿರ್ಮಿಸಿದ್ದು ಇದರಲ್ಲಿ ಸರಿಸುಮಾರು 50 ಸಾವಿರದಷ್ಟು ನರ್ಸರಿ ಗಿಡಗಳನ್ನು ಬೆಳೆಸಬಹುದಾಗಿದೆ. ನರೇಗಾ ಯೋಜನೆಯಡಿ ಸಿಎಲ್‌ಎಫ್‌ ನರ್ಸರಿ ಅಭಿವೃದ್ಧಿಪಡಿಸುವ ಮೂಲಕ ಸಂಜೀವಿನಿ ಒಕ್ಕೂಟಕ್ಕೆ ಸೊÌàದ್ಯೋಗದ ಮೂಲಕ ಜೀವನೋಪಾಯ ನಿರ್ವಹಣೆಗೆ ಅನುಕೂ ಲವಾಗುವಂತೆ ನರ್ಸರಿ ಘಟಕವನ್ನು ರಚಿಸಿಕೊಡಲಾಗುತ್ತದೆ. ಪ್ರತೀ ವರ್ಷ ಕನಿಷ್ಠ 10 ಸಾವಿರ ಗಿಡ ಗಳನ್ನು ಮಾರಾಟ ಮಾಡುವುದು ಕಡ್ಡಾಯವಾಗಿರುತ್ತದೆ. ಇದರ ಹೊರತಾಗಿ ಪ್ರತ್ಯೇಕವಾಗಿ ಸಂಜೀವಿನಿ ಒಕ್ಕೂಟದ ಸದಸ್ಯರು ವಿವಿಧ ತಳಿಯ ಮತ್ತಷ್ಟು ಗಿಡಗಳನ್ನು ಬೆಳೆಸಿ ಮಾರಾಟ ಮಾಡಬಹುದಾಗಿದೆ.

ನರೇಗಾ ಯೋಜನೆಯಡಿ ಸಾಮುದಾಯಿಕ, ವೈಯಕ್ತಿಕ ಕಾಮಗಾರಿಗಳ ಜತೆಗೆ ಸಂಜೀವಿನಿ ಒಕ್ಕೂಟದ ಮಹಿಳೆಯರಿಗೆ ವಿವಿಧ ರೀತಿಯಲ್ಲಿ ಉದ್ಯೋಗವನ್ನು ನೀಡುವ ಮೂಲಕ ಮಹಿಳೆಯರ ಭಾಗವಹಿಸುವಿಕೆಗೆ ಮತ್ತಷ್ಟು ಉತ್ತೇಜನವನ್ನು ನೀಡುತ್ತಿದೆ.    – ನವೀನ್‌ ಕುಮಾರ್‌ ಭಂಡಾರಿ, ಕಾರ್ಯನಿರ್ವಾಹಕ ಅಧಿಕಾರಿ, ತಾ.ಪಂ. ಪುತ್ತೂರು

ನರೇಗಾ ಯೋಜನೆ ಮತ್ತು ಸಂಜೀವಿನಿ ಒಕ್ಕೂಟವು ನೀಡುವ ಬಂಡವಾಳದೊಂದಿಗೆ, ನರ್ಸರಿ ಅಭಿವೃದ್ಧಿಗೆ ಬೇಕಾದ ಮೂಲ ಸೌಕರ್ಯಗಳನ್ನು ಕಲ್ಪಿಸಿಕೊಂಡು, ಅದರಲ್ಲಿ ಗಿಡ ಬೆಳೆಸಿ ಮಾರಾಟ ಮಾಡಿ ಒಕ್ಕೂಟಗಳು ಆರ್ಥಿಕ ಸ್ವಾವಲಂಬನೆ ಪಡೆದುಕೊಳ್ಳಬಹುದು. ವರ್ಷ ಪೂರ್ತಿ ಉದ್ಯೋಗವನ್ನು ಪಡೆಯಬಹುದಾಗಿದೆ.    – ಶೈಲಜಾ ಭಟ್‌, ಸಹಾಯಕ ನಿರ್ದೇಶಕರು (ಗ್ರಾ.ಉ.), ತಾ.ಪಂ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.