ಚಾರ್ಮಾಡಿ ಘಾಟಿಯಲ್ಲಿ ರಾತ್ರಿ ಸಂಚಾರ ನಿಷೇಧ
Team Udayavani, Jul 10, 2020, 8:23 AM IST
ಚಾರ್ಮಾಡಿ ಘಾಟಿ ರಸ್ತೆ ಕುಸಿಯುವ ಭೀತಿ.
ಬೆಳ್ತಂಗಡಿ: ಚಾರ್ಮಾಡಿ ಘಾಟಿ ರಸ್ತೆಯಲ್ಲಿ ಸಂಜೆ 7ರಿಂದ ಬೆಳಗ್ಗೆ 7ರ ತನಕ ಎಲ್ಲ ರೀತಿಯ ವಾಹನಗಳ ಸಂಚಾರವನ್ನು ನಿಷೇಧಿಸಿ ಚಿಕ್ಕಮಗಳೂರು ಜಿಲ್ಲಾಧಿಕಾರಿ ಡಾ| ಗೌತಮ್ ಬಗಾದಿ ಆದೇಶ ಹೊರಡಿಸಿದ್ದಾರೆ. ಕಳೆದ ಆಗಸ್ಟ್ನಲ್ಲಿ ಭಾರೀ ಮಳೆಯಿಂದಾಗಿ ರಸ್ತೆ ಸಂಪೂರ್ಣ ಹಾನಿಗೀಡಾಗಿತ್ತು. ತಾತ್ಕಾಲಿಕ ಕಾಮಗಾರಿ ನಡೆಸಿ ಬೇಸಗೆಯಲ್ಲಿ ಲಘು ವಾಹನಗಳಿಗೆ ಅವಕಾಶ ಕಲ್ಪಿಸಲಾಗಿತ್ತು. ಈ ಬಾರಿಯೂ ಅಲ್ಲಲ್ಲಿ ಮಣ್ಣು ಕುಸಿಯುವ ಸಾಧ್ಯತೆ ಕಾಣಿಸುತ್ತಿದೆ.
ರಾತ್ರಿ ಸಂಚಾರ ಸೂಕ್ತಲ್ಲ; ಮುಂದಿನ ಆದೇಶದವರೆಗೂ ಈ ಸಂಚಾರ ನಿಷೇಧ ಇರುತ್ತದೆ ಎಂದು ತಿಳಿಸಿದ್ದಾರೆ.
ಹುಲಿಕಲ್ ಹೆದ್ದಾರಿ ಬಳಿ ಗುಡ್ಡ ಕುಸಿತ ಕುಂದಾಪುರ: ಉಡುಪಿ, ದ. ಕ. ಜಿಲ್ಲೆ ಯಿಂದ ಶಿವಮೊಗ್ಗವನ್ನು ಸಂಪರ್ಕಿಸುವ ಪ್ರಮುಖ ರಸ್ತೆಯಾಗಿರುವ ಮಾಸ್ತಿಕಟ್ಟೆ ಹುಲಿಕಲ್ ಸಮೀಪದ ಮಾವಿನಗದ್ದೆ ಬಳಿ ಗುಡ್ಡ ಜರಿದ ಕಾರಣ ಸಂಪರ್ಕ ಆತಂಕಿತವಾಗಿದೆ.
ಆಗುಂಬೆಯಲ್ಲಿ ಮೋರಿ ಕುಸಿತ
ಆಗುಂಬೆ ಸಮೀಪ ಕೌರಿಹಕ್ಕಲಿನ ಮೋರಿ ಕುಸಿದಿದ್ದು, ಶಿವಮೊಗ್ಗದಿಂದ ಕರಾವಳಿಯನ್ನು ಸಂಪರ್ಕಿಸುವ ರಸ್ತೆ ಬಹುತೇಕ ಬಂದ್ ಆಗುವ ಭೀತಿ ಇದೆ.
ಸಂಚಾರ ತಡೆ ಕುರಿತು ದ.ಕ. ಜಿಲ್ಲಾಧಿಕಾರಿ ಆದೇಶ ಹೊರಡಿಸಿಲ್ಲ. ಆದರೂ ಚಾರ್ಮಾಡಿ ಘಾಟಿ ಆರಂಭದ ಲ್ಲಿರುವ ಚೆಕ್ಪೋಸ್ಟ್ ಸಂಜೆ 7ರ ಬಳಿಕ ಮುಚ್ಚಿರುತ್ತದೆ.
- ಸಂದೇಶ್ ಪಿ.ಜಿ. ಬೆಳ್ತಂಗಡಿ ಠಾಣೆ ವೃತ್ತ ನಿರೀಕ್ಷಕ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
Dharmasthala; ಕೆಎಸ್ಸಾರ್ಟಿಸಿ ಬಸ್ನಡಿ ಸಿಲುಕಿ ಮಹಿಳೆ ಸಾವು
ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್ ವಶಕ್ಕೆ
Aranthodu ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಹಲ್ಲೆ
MUST WATCH
ಹೊಸ ಸೇರ್ಪಡೆ
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…