Vitla: ಎನ್.ಕೆ.ಈಶ್ವರ ಭಟ್ ನಿಧನ
Team Udayavani, Oct 12, 2023, 8:54 AM IST
ವಿಟ್ಲ : ಕನ್ಯಾನ ನಿವಾಸಿ, ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ, ಸಂಘಟಕ, ಕನ್ಯಾನ ಗ್ರಾ.ಪಂ.ಮಾಜಿ ಉಪಾಧ್ಯಕ್ಷ ಎನ್.ಕೆ.ಈಶ್ವರ ಭಟ್ ನೀರ್ಪಾಜೆ(84) ಅವರು ಅಸೌಖ್ಯದಿಂದ ಅ.12ರಂದು ಸ್ವಗೃಹದಲ್ಲಿ ನಿಧನ ಹೊಂದಿದರು.
ಅವರು ಪತ್ನಿ, ಪುತ್ರ ಮತ್ತು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.
ವಿದ್ವಾಂಸ ದಿ.ನೀರ್ಪಾಜೆ ಭೀಮ ಭಟ್ ಅವರ ಸಹೋದರ ಈಶ್ವರ ಭಟ್ ಅವರು ಹಿಂದಿ ವಿಶಾರದ, ಸಂಸ್ಕೃತ ಭಾಷೆ ಅಭ್ಯಸಿಸಿದ್ದರು. ಕನ್ಯಾನ ಗ್ರಾ.ಪಂ.ಸದಸ್ಯರಾಗಿ, ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಕನ್ಯಾನ ಸರಕಾರಿ ಪಪೂ. ಕಾಲೇಜು, ಕನ್ಯಾನ, ಬಂಡಿತ್ತಡ್ಕ ಶಾಲಾಭಿವೃದ್ದಿ ಸಮಿತಿಯಲ್ಲಿ ಮತ್ತು ಕನ್ಯಾನ ಪ್ರಾಥಮಿಕ ಶಾಲೆ ಹಳೆ ವಿದ್ಯಾರ್ಥಿ ಸಂಘದಲ್ಲಿ ಶ್ರಮಿಸಿದ್ದಾರೆ.
ಕನ್ಯಾನ ವಲಯ ಕಾಂಗ್ರೆಸ್ ಮಾಜಿ ಅಧ್ಯಕ್ಷರಾಗಿ, ಕನ್ಯಾನ ಯಕ್ಷಗಾನ ಸಂಘ ಮತ್ತು ಯುವಕ ಸಂಘದ ಕಾರ್ಯದರ್ಶಿಯಾಗಿ, ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಯಕ್ಷಗಾನ ಹವ್ಯಾಸಿ ಕಲಾವಿದರಾಗಿದ್ದ ಅವರು ತಾಳಮದ್ದಳೆ ಅರ್ಥಧಾರಿಯಾಗಿ, ಪಾತ್ರಧಾರಿಯಾಗಿದ್ದುಕೊಂಡು ಸ್ವತಃ ಸಂಘಟಿಸುತ್ತಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Tragedy: ತನ್ನ ಅಪಾರ್ಟ್ಮೆಂಟ್ನಲ್ಲೇ ನೇಣಿಗೆ ಶರಣಾದ ಭೋಜ್ಪುರಿ ನಟಿ… ಕಾರಣ ನಿಗೂಢ
B.Y. Raghavendra: ಕಾಂಗ್ರೆಸ್ನವರ ಬಳಿ ಗ್ಯಾರಂಟಿ ಅಡ್ವಾನ್ಸ್ ಹಣ ಕೇಳಿ: ಬಿವೈಆರ್
Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ
Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ
Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ