ಶೇಕಮಲೆ ದಲಿತ ಕಾಲನಿಯ ರಸ್ತೆ ಬೇಡಿಕೆ ಈಡೇರಲೇ ಇಲ್ಲ

ವೃದ್ಧರು, ರೋಗಿಗಳನ್ನು ಇಲ್ಲಿ ಹೊತ್ತುಕೊಂಡೇ ಸಾಗಬೇಕು

Team Udayavani, Sep 18, 2019, 5:00 AM IST

e-33

ಶೇಕಮಲೆ ವೃದ್ಧೆಯನ್ನು ಹೊತ್ತುಕೊಂಡು ತೆರಳುತ್ತಿರುವ ಸೇಸಪ್ಪ.

ಬಡಗನ್ನೂರು: ವಾಹನ ಸೌಕರ್ಯವಿಲ್ಲದೆ ರೋಗಿಗಳನ್ನು ಗರ್ಭಿಣಿಯರನ್ನು ಹೊತ್ತುಕೊಂಡು ಆಸ್ಪತ್ರೆಗೆ ತೆರಳಿದ್ದ ಸಂಗತಿ ಅಥವಾ ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಗಳನ್ನು ಕಿ.ಮೀ. ದೂರ ಹೊತ್ತುಕೊಂಡು ಹೋಗುವ ದೃಶ್ಯವನ್ನು ನಾವು ಕಂಡಿದ್ದೇವೆ. ಇಂತಹ ಘಟನೆಗಳು ನಡೆಯುವುದು ಬಹುತೇಕ ಉತ್ತರ ಭಾರತದಲ್ಲಿ. ಆದರೆ ಇಂಥಹುದೇ ಒಂದು ದೃಶ್ಯ ಅರಿಯಡ್ಕ ಗ್ರಾಮದ ಶೇಕಮಲೆಯಲ್ಲಿ ಸೆ. 15ರಂದು ನಡೆದಿದೆ.

ಶೇಕಮಲೆಯಲ್ಲಿರುವ ದಲಿತ ಕಾಲನಿಗೆ ರಸ್ತೆಯಿಲ್ಲ. ಕಾಲು ದಾರಿಯ ಮೂಲಕ ಅಲ್ಲಿನ ನಿವಾಸಿಗಳು ಮನೆಗೆ ತೆರಳುತ್ತಿದ್ದರು. ಕಾಲು ದಾರಿ ಈ ಬಾರಿಯ ಮಳೆಗೆ ಕುಸಿದು ಬಿದ್ದಿದೆ. ಇಲ್ಲಿ ಸುಮಾರು 20ಕ್ಕೂ ಮಿಕ್ಕಿ ದಲಿತರ ಮನೆಗಳಿವೆ. ಆದರೆ ದಾರಿಯ ವ್ಯವಸ್ಥೆಯಿಲ್ಲ. ಈಗ ಇರುವ ಕಾಲು ದಾರಿಯೂ ಅಪಾಯಕಾರಿಯಾಗಿದೆ. ಸೆ. 15ರಂದು ಕಾಲನಿಯ ನಿವಾಸಿ ಬಿರ್ಕು ಎನ್ನುವ ವೃದ್ಧೆಗೆ ಅನಾರೋಗ್ಯ ಕಾಣಿಸಿಕೊಂಡಿದೆ. ಅನಾರೋಗ್ಯ ಪೀಡಿತ ವೃದ್ಧೆಯನ್ನು ಅವರ ಅಳಿಯ ಸುಮಾರು ಅರ್ಧ ಕಿ.ಮೀ. ಹೊತ್ತುಕೊಂಡೇ ರಸ್ತೆ ಬದಿಯವರೆಗೂ ಬಂದು ಅಲ್ಲಿ ವಾಹನ ಏರಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಈ ದೃಶ್ಯ ಅಲ್ಲಿನ ದಾರಿಯ ಸಮಸ್ಯೆಯನ್ನು ಸಾರಿ ಹೇಳುತ್ತಿರುವಂತಿತ್ತು.

ಬೇಡಿಕೆ ಈಡೇರಲೇ ಇಲ್ಲ
ಕಾಲನಿಗೆ ರಸ್ತೆ ನಿರ್ಮಿಸಿ ಎಂದು ಅಲ್ಲಿನ ಜನ ಹಲವು ವರ್ಷಗಳಿಂದ ಬೇಡಿಕೆ ಇಟ್ಟಿದ್ದರು. ಪ್ರತೀ ಬಾರಿಯೂ ಕಾಲನಿಗೆ ಜನಪ್ರತಿನಿಧಿಗಳು ಭೇಟಿ ನೀಡುತ್ತಾರೆ. ಆದರೆ ಯರೂ ಇದುವರೆಗೂ ರಸ್ತೆಯ ವಿಚಾರದಲ್ಲಿ ಯಾವುದೇ ಕೆಲಸವನ್ನು ಮಾಡಿಲ್ಲ. ಇರುವ ಏಕೈಕ ಕಾಲು ದಾರಿ ಮಳೆಗೆ ಕುಸಿದಿದ್ದು, ಅದನ್ನು ತಾತ್ಕಾಲಿಕವಾಗಿ ಅಡಿಕೆ ಮರದ ತುಂಡಿನಿಂದ ದುರಸ್ತಿ ಮಾಡಲಾಗಿದೆ. ಕಾಲನಿಯ ಶಾಲಾ ಮಕ್ಕಳು ಹೊಳೆಯ ಬದಿಯಲ್ಲಿರುವ ಕಾಲು ದಾರಿಯ ಮೂಲಕ ಅಪಾಯಕಾರಿ ನಡಿಗೆಯೊಂದಿಗೆ ಶಾಲೆಗೆ ತೆರಳುತ್ತಿದ್ದಾರೆ. ಕಾಲನಿಗೆ ರಸ್ತೆ ಇಲ್ಲದೆ ನಾವು ತುಂಬಾ ಕಷ್ಟದಲ್ಲಿದ್ದೇವೆ ಇನ್ನಾದರೂ ಸರಕಾರ ಎಚ್ಚೆತ್ತುಕೊಳ್ಳಬೇಕು ಎಂದು ಬಿರ್ಕು ಅವರ ಅಳಿಯ ಸೇಸಪ್ಪ ಮನವಿ ಮಾಡಿದ್ದಾರೆ.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.