ಶಿಕ್ಷಕರಿಲ್ಲದೆ ಪೆರ್ಮುಡ ಶಾಲೆ ಮುಚ್ಚುವ ಭೀತಿ!

ಮಕ್ಕಳನ್ನು ದಾಖಲಿಸಲು ಪೋಷಕರ ಆತಂಕ ತತ್‌ಕ್ಷಣ ಪರ್ಯಾಯ ವ್ಯವಸ್ಥೆ ಅಗತ್ಯ

Team Udayavani, Mar 17, 2020, 6:17 AM IST

school-close

ವೇಣೂರು: ವಿದ್ಯಾರ್ಥಿಗಳಿಲ್ಲದೆ ಸರಕಾರಿ ಶಾಲೆಗಳು ಮುಚ್ಚುವ ಭೀತಿ ಎದುರಿಸುತ್ತಿದ್ದರೆ ಇಲ್ಲೊಂದು ಶಾಲೆ ಶಿಕ್ಷಕರೇ ಇಲ್ಲದೆ ಮುಚ್ಚುವ ಭೀತಿಯಲ್ಲಿದೆ. ಶಿಕ್ಷಕರಿಲ್ಲದ ಶಾಲೆಗೆ ಮಕ್ಕಳನ್ನು ಕಳಿಸಿ ಪ್ರಯೋಜನವೇನು ಎಂದು ಪೋಷಕರು ಪ್ರಶ್ನಿಸುತ್ತಿದ್ದಾರೆ.

ನಿಟ್ಟಡೆ ಗ್ರಾಮದ ಪೆರ್ಮುಡ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯೇ ಈ ಸಮಸ್ಯೆ ಎದುರಿಸುತ್ತಿರುವ ಶಾಲೆ. ಒಂದರಿಂದ 7ನೇ ತರಗತಿವರೆಗೆ 38 ವಿದ್ಯಾರ್ಥಿಗಳು ಇಲ್ಲಿದ್ದಾರೆ. ಪ್ರಭಾರ ಮುಖ್ಯ ಶಿಕ್ಷಕಿ ಸೇರಿದಂತೆ ನಾಲ್ವರು ಶಿಕ್ಷಕಿಯರು ಇಲ್ಲಿದ್ದರು. ಶಾಲಾ ಭಿವೃದ್ಧಿ ಸಮಿತಿಯು ಮತ್ತೋರ್ವ ಅತಿಥಿ ಶಿಕ್ಷಕಿಯನ್ನು ನೇಮಿಸಿ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಪ್ರಾಧಾನ್ಯತೆ ದೊರೆಯುವಂತೆ ಮಾಡಿತ್ತು.

ಶಿಕ್ಷಕಿಯರ ವರ್ಗಾವಣೆ
ಶೈಕ್ಷಣಿಕ ವರ್ಷ ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ಅಕ್ಟೋಬರ್‌ನಲ್ಲಿ ಇಬ್ಬರು ಶಿಕ್ಷಕಿಯರನ್ನು ಏಕಕಾಲದಲ್ಲಿ ಉಡುಪಿ ಜಿಲ್ಲೆಗೆ ವರ್ಗಾಯಿಸಲಾಗಿದೆ. ಮಕ್ಕಳ ಶೈಕ್ಷಣಿಕ ಬೆಳವಣಿಗೆಯ ಬಗ್ಗೆ ಪೋಷಕರು ಚಿಂತನೆ ನಡೆಸುತ್ತಿರು ವಾಗಲೇ ಪ್ರಭಾರ ಮುಖ್ಯ ಶಿಕ್ಷಕಿಯಾಗಿದ್ದ ವಿನೋದ ಅವರನ್ನು ಪದೋನ್ನತಿ ಗೊಳಿಸಿ ಉಂಬೆಟ್ಟು ಶಾಲೆಗೆ ವರ್ಗಾಯಿಸಲಾಯಿತು. ಮುಂದಿನ ಶೈಕ್ಷಣಿಕ ಸಾಲಿಗೆ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಳವಾಗುವ ನಿರೀಕ್ಷೆ ಇದ್ದು, ಗುಣಮಟ್ಟದ ಶಿಕ್ಷಣ ನೀಡುತ್ತಿದ್ದ ಪೆರ್ಮುಡ ಶಾಲೆಯನ್ನು ಓರ್ವ ಶಿಕ್ಷಕಿಯಿಂದ ನಿಭಾಯಿಸುವುದು ಕಷ್ಟ. ಖಾಲಿಯಿರುವ ಮೂವರು ಶಿಕ್ಷಕರ ಹುದ್ದೆಯನ್ನು ಶೀಘ್ರ ಮಂಜೂರು ಗೊಳಿಸಬೇಕು ಎಂದು ನಾಗರಿಕರು ಆಗ್ರಹಿಸಿದ್ದಾರೆ.

ಭರ್ತಿಗೆ ಆಗ್ರಹ
ಪೆರ್ಮುಡ ತೀರಾ ಹಳ್ಳಿಪ್ರದೇಶ ವಾಗಿದ್ದು, ರೈತರ ಮಕ್ಕಳೇ ಈ ಶಾಲೆಗೆ ಬರುತ್ತಿದ್ದಾರೆ. ಏಕಾಏಕಿ ಮೂವರು ಶಿಕ್ಷಕಿಯರ ವರ್ಗಾವಣೆಯಿಂದ ಮಕ್ಕಳ ಭವಿಷ್ಯದ ಬಗ್ಗೆ ಆತಂಕ ವ್ಯಕ್ತಪಡಿಸಿ ಎಸ್‌ಡಿಎಂಸಿಯು ಮಂಗಳೂರು ಶಿಕ್ಷಣ ಇಲಾಖೆಯ ಸಹಾಯಕ ಉಪನಿರ್ದೇ ಶಕರಿಗೆ ಲಿಖೀತ ಮನವಿ ಸಲ್ಲಿಸಿದೆ.

ಪೆರ್ಮುಡ ಶಾಲೆಯ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ಸಿಆರ್‌ಪಿ ಜತೆ ಮಾತನಾಡುತ್ತೇನೆ. ವಿಮುಕ್ತಿ ಸಂಸ್ಥೆಯವರು 25 ಅತಿಥಿ ಶಿಕ್ಷಕರನ್ನು ನೀಡಿದ್ದು, ಮುಂಬರುವ ಶೈಕ್ಷಣಿಕ ಸಾಲಿಗೆ ತೊಂದರೆ ಆಗದಂತೆ ಅತಿಥಿ ಶಿಕ್ಷಕರನ್ನು ನೇಮಿಸುವುದಲ್ಲದೆ, ಖಾಯಂ ಶಿಕ್ಷಕರ ನೇಮಕಕ್ಕೂ ಗಮನ ಹರಿಸುತ್ತೇವೆ.
– ಲಕ್ಷ್ಮಣ ಶೆಟ್ಟಿ, ಬೆಳ್ತಂಗಡಿ ಬಿಇಒ

ಪೆರ್ಮುಡ ಶಾಲೆಯಲ್ಲಿ ಈಗ ಕೇವಲ ಓರ್ವ ಶಿಕ್ಷಕಿ ಇದ್ದು, ಮುಂದಿನ ವರ್ಷದಿಂದ ಅತಿಥಿ ಶಿಕ್ಷಕರು ಕೂಡ ಇರುವುದಿಲ್ಲ. ಇದೇ ಭೀತಿಯಿಂದ ಪೋಷಕರು ಮಕ್ಕಳ ದಾಖಲಾತಿಯನ್ನು ಹಿಂಪಡೆದರೆ ಶಾಲೆ ಮುಚ್ಚುವ ಸ್ಥಿತಿ ಬರಬಹುದು. ಅಧಿಕಾರಿಗಳು, ಜನಪ್ರತಿನಿಧಿಗಳು ತತ್‌ಕ್ಷಣ ಕ್ರಮ ಜರಗಿಸಿ ಪೋಷಕರಲ್ಲಿ ಧೈರ್ಯ ತುಂಬಬೇಕು. ಇಲ್ಲದಿದ್ದರೆ ಹೋರಾಟ ಅನಿವಾರ್ಯವಾದೀತು.
– ಉಮೇಶ್‌ ಕುಲಾಲ್‌, ಅಧ್ಯಕ್ಷರು, ಎಸ್‌ಡಿಎಂಸಿ

– ಪದ್ಮನಾಭ ವೇಣೂರು

ಟಾಪ್ ನ್ಯೂಸ್

1-asasa

Vote; ಬೇರೆಲ್ಲ ಬದಿಗಿಡಿ ಇಂದು ತಪ್ಪದೆ ಮತ ಚಲಾಯಿಸಿ! :ನೀವು ಗಮನಿಸಬೇಕಾದದ್ದು..

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

1-waadassda

OBC-Muslim ಮೀಸಲು ವಿವಾದ ತಾರಕಕ್ಕೆ: ಪ್ರಧಾನಿ ಹೇಳಿಕೆ ಅಲ್ಲಗಳೆದ ಸಿದ್ದರಾಮಯ್ಯ

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

1-asasa

Vote; ಬೇರೆಲ್ಲ ಬದಿಗಿಡಿ ಇಂದು ತಪ್ಪದೆ ಮತ ಚಲಾಯಿಸಿ! :ನೀವು ಗಮನಿಸಬೇಕಾದದ್ದು..

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

20

Election illegal: ನಿನ್ನೆ 2.31 ಕೋ. ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.